ಕ್ರೀಡೆ

ಐಪಿಎಲ್ ಆಡಲ್ಲ ಎಂದು 2 ಐಸಿಸಿ ಟ್ರೋಫಿ ಬಾಚಿಕೊಂಡ ಪ್ಯಾಟ್ ಕಮಿನ್ಸ್

ಐಪಿಎಲ್ ಆಡಲ್ಲ ಎಂದು 2 ಐಸಿಸಿ ಟ್ರೋಫಿ ಬಾಚಿಕೊಂಡ ಪ್ಯಾಟ್ ಕಮಿನ್ಸ್

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಬೇಕೆಂದು ಬಹುತೇಕ ಕ್ರಿಕೆಟ್ ಆಟಗಾರರೂ ಸಹ ಇಚ್ಛಿಸುತ್ತಾರೆ.‌ ಈ ಕಲರ್ ಫುಲ್ ಟೂರ್ನಿಯಲ್ಲಿ ಭಾಗವಹಿಸಿದ್ರೆ ಹೆಸರಿನ ಜತೆ ಲಕ್ಷ್ಮಿಯೂ ಸಹ ಒಲಿತಾಳೆ ಎಂಬುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಷಯವೇ‌.

ಹೀಗಾಗಿಯೇ ಇಂಡಿಯನ್ ಪ್ರೀಮಿಯರ್ ಲೀಗ್ ಎಂದರೆ ಭಾರತದ ಆಟಗಾರರು ಮಾತ್ರವಲ್ಲದೆ ವಿದೇಶಿ ಆಟಗಾರರೂ ಸಹ ಪ್ರಾಶಸ್ತ್ಯ ನೀಡಿ ಭಾರತಕ್ಕೆ ಓಡೋಡಿ ಬರುತ್ತಾರೆ‌. ಆದರೆ ಕೆಲವೊಂದಷ್ಟು ಆಟಗಾರರು ಮಾತ್ರ ಐಪಿಎಲ್ ಆಡಲಾರೆ ನನಗೆ ನನ್ನ ದೇಶದ ಪರ ಆಡುವುದು ಮುಖ್ಯ ಅಂತ ನೇರವಾಗಿ ಹೇಳಿದ ಉದಾಹರಣೆಗಳೂ ಸಹ ಇವೆ.

ಅಂತಹ ಆಟಗಾರರಲ್ಲಿ ಪ್ಯಾಟ್ ಕಮಿನ್ಸ್ ಸಹ ಓರ್ವರು. ಹೌದು, ಪ್ಯಾಟ್ ಕಮಿನ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಣಕ್ಕಿಳಿದಿರಲಿಲ್ಲ. ಅಂತರರಾಷ್ಟ್ರೀಯ ಕ್ರಿಕೆಟ್‌ನ ಭಾಗವಹಿಸುವಿಕೆಯ ಒತ್ತಡ ಹೆಚ್ಚಿರುವ ಕಾರಣ ಈ ನಿರ್ಧಾರ ಕೈಗೊಂಡಿದ್ದೇನೆ ಎಂಬ ಕಾರಣವನ್ನು ನೀಡಿದ್ದರು. ಅಂದು ಇಂತಹ ನಿರ್ಧಾರ ಪ್ರಕಟಿಸಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದ್ದ ಪ್ಯಾಟ್ ಕಮಿನ್ಸ್ ಇಂದು ವಿಶ್ವ ಚಾಂಪಿಯನ್ ಆಗಿದ್ದಾರೆ‌.

ಹೌದು, ನಿನ್ನೆ ( ನವೆಂಬರ್ 19 ) ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಗೆದ್ದ ಆಸ್ಟ್ರೇಲಿಯಾ ತಂಡವನ್ನು ಇದೇ ಪ್ಯಾಟ್ ಕಮಿನ್ಸ್ ನಾಯಕನಾಗಿ‌ ಮುನ್ನಡೆಸಿದ್ದಾರೆ. ಆರಂಭದಲ್ಲಿ ಲೀಗ್ ಪಂದ್ಯಗಳನ್ನು ಸೋತು ಮುಗ್ಗರಿಸಿದ್ದ ಕಾಂಗರೂಗಳು ಇಂದು ಟ್ರೋಫಿ ಎತ್ತಿ ಹಿಡಿಯಲು ಕಮಿನ್ಸ್ ಚಾಣಕ್ಷತೆ ಸಹ ಕಾರಣ.

ಹೀಗೆ ಆಸ್ಟ್ರೇಲಿಯಾ ವಿಶ್ವಕಪ್ ಗೆದ್ದ ಬಳಿಕ ಪ್ಯಾಟ್ ಕಮಿನ್ಸ್ ಐಪಿಎಲ್ ಆಡುವುದಿಲ್ಲ ಎಂದು ನೀಡಿದ್ದ ಹೇಳಿಕೆ ವೈರಲ್ ಆಗಿದೆ. ಪ್ಯಾಟ್ ಕಮಿನ್ಸ್ ಐಪಿಎಲ್ ನಲ್ಲಿ ಭಾಗವಹಿಸುವುದನ್ನು ತಿರಸ್ಕರಿಸಿದ ಬಳಿಕ ನಾಯಕನಾಗಿ 2023ರ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್  ಟ್ರೋಫಿ ಗೆದ್ದರು, ನಾಯಕನಾಗಿ ಪ್ರತಿಷ್ಠಿತ ಆಶಸ್ ಟ್ರೋಫಿ ಉಳಿಸಿಕೊಂಡರು ಹಾಗೂ ಈಗ ವಿಶ್ವಕಪ್ ಗೆದ್ದಿದ್ದಾರೆ, ಹೀಗಾಗಿ ಕ್ರಿಕೆಟಿಗರು ಫ್ರಾಂಚೈಸಿ ಕ್ರಿಕೆಟ್ ಲೀಗ್ ಗಳನ್ನು ಆಡುವುದನ್ನು ಕಡಿಮೆ ಮಾಡಿ ತಮ್ಮ ಸಮಯವನ್ನು ಅಂತರರಾಷ್ಟ್ರೀಯ ಕ್ರಿಕೆಟ್‌ನತ್ತ ನೀಡಬೇಕು ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ‌.

andolana

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago