ಹೈದರಾಬಾದ್: ಹರ್ಯಾಣ ಸ್ಟೀಲರ್ಸ್ ವಿರುದ್ಧ ರೋಚಕ ಜಯ ದಾಖಲಿಸುವ ಮೂಲಕ ಪ್ರೋ ಕಬಡ್ಡಿ ಲೀಗ್ ಸೀಸನ್ 10 ಚಾಂಪಿಯನ್ ಆಗಿ ಪುಣೇರಿ ಪಲ್ಟಾನ್ ಹೊರ ಹೊಮ್ಮಿದೆ.
ಹೈದರಾಬಾದ್ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪುಣೇರಿ ಪಲ್ಟಾನ್ ಮತ್ತು ಹರ್ಯಾಣ ಸ್ಟೀಲರ್ಸ್ ನಡುವಿನ ಫೈನಲ್ ಪಂದ್ಯದಲ್ಲಿ, ಸ್ಟೀಲರ್ಸ್ ತಂಡವನ್ನು 28-23 ಅಂತರದಿಂದ ಸೋಲಿಸಿದ ಅಸ್ಲಾಮ್ ಇನಾಮ್ದಾರ್ ನಾಯಕತ್ವದ ಪಲ್ಟಾನ್ ತಂಡ ತನ್ನ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿದೆ.
ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡ ಪಲ್ಟಾನ್ ತಂಡ ಒಂದು ಬಾರಿ ಹರ್ಯಾಣವನ್ನು ಆಲ್ಔಟ್ ಮಾಡುವ ಮೂಲಕ ಮೇಲೆ ಬರದಂತೆ ನೋಡಿಕೊಂಡಿತು. ಪಲ್ಟಾನ್ನ ಪಂಕಜ್ ಮೋಹಿತೆ 9 ರೈಡ್ ಪಾಯಿಂಟ್ಸ್, ಗೋಯತ್ 5 ರೈಡ್ ಪಾಯಿಂಟ್ಸ್ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿತು. ಈ ಟೂರ್ನಿಯಲ್ಲೇ ಅತಿಹೆಚ್ಚು ಟ್ಯಾಕಲ್ ಪಾಯಿಂಟ್ ಗಳಿಸಿ ಮಹಮದ್ರೇಜಾ ಶಾಡ್ಲೋಯಿ 2 ಟ್ಯಾಕಲ್ ಪಾಯಿಂಟ್ ಗಳಿಸಿ ಗಮನ ಸೆಳೆದರು.
ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಪುಣೇರಿ ಪಲ್ಟಾನ್ ತಂಡಕ್ಕೆ ಮೂರು ಕೋಟಿ ಬಹುಮಾನ ಮೊತ್ತ ದಕ್ಕಿತು. ರನ್ನರ್ಸ್ ಅಪ್ ಆದ ಹರ್ಯಾಣ ಸ್ಟೀಲರ್ಸ್ಗೆ 1.8 ಕೋಟಿ ಹಣ ದೊರೆಯಿತು.
ಈ ಟೂರ್ನಿಯಲ್ಲಿ ಅತ್ಯುತ್ತಮ ಪ್ರಶಸ್ತಿ ಗಳಿಸಿ ಆಟಗಾರರಿವರು:
ಟೂರ್ನಿಯ ಅತ್ಯುತ್ತಮ ರೈಡರ್: ಅಶು ಮಲ್ಲಿಕ್
ಟೂರ್ನಿಯ ಅತ್ಯುತ್ತಮ ಡಫೆಂಡರ್: ಮೊಹಮ್ಮದ್ರೇಜಾ ಚಿಯಾನೆಹ್
ಟೂರ್ನಿಯ ಹೊಸ ಯುವ ಆಟಗಾರ: ಯೋಗೇಶ್
ಟೂರ್ನಿಯ ಮೌಲ್ಯಯುತ ಆಟಗಾರ: ಅಸ್ಲಾಂ ಇನಾಮ್ದಾರ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…