ಹೈದರಾಬಾದ್: ಹರ್ಯಾಣ ಸ್ಟೀಲರ್ಸ್ ವಿರುದ್ಧ ರೋಚಕ ಜಯ ದಾಖಲಿಸುವ ಮೂಲಕ ಪ್ರೋ ಕಬಡ್ಡಿ ಲೀಗ್ ಸೀಸನ್ 10 ಚಾಂಪಿಯನ್ ಆಗಿ ಪುಣೇರಿ ಪಲ್ಟಾನ್ ಹೊರ ಹೊಮ್ಮಿದೆ.
ಹೈದರಾಬಾದ್ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪುಣೇರಿ ಪಲ್ಟಾನ್ ಮತ್ತು ಹರ್ಯಾಣ ಸ್ಟೀಲರ್ಸ್ ನಡುವಿನ ಫೈನಲ್ ಪಂದ್ಯದಲ್ಲಿ, ಸ್ಟೀಲರ್ಸ್ ತಂಡವನ್ನು 28-23 ಅಂತರದಿಂದ ಸೋಲಿಸಿದ ಅಸ್ಲಾಮ್ ಇನಾಮ್ದಾರ್ ನಾಯಕತ್ವದ ಪಲ್ಟಾನ್ ತಂಡ ತನ್ನ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿದೆ.
ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡ ಪಲ್ಟಾನ್ ತಂಡ ಒಂದು ಬಾರಿ ಹರ್ಯಾಣವನ್ನು ಆಲ್ಔಟ್ ಮಾಡುವ ಮೂಲಕ ಮೇಲೆ ಬರದಂತೆ ನೋಡಿಕೊಂಡಿತು. ಪಲ್ಟಾನ್ನ ಪಂಕಜ್ ಮೋಹಿತೆ 9 ರೈಡ್ ಪಾಯಿಂಟ್ಸ್, ಗೋಯತ್ 5 ರೈಡ್ ಪಾಯಿಂಟ್ಸ್ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿತು. ಈ ಟೂರ್ನಿಯಲ್ಲೇ ಅತಿಹೆಚ್ಚು ಟ್ಯಾಕಲ್ ಪಾಯಿಂಟ್ ಗಳಿಸಿ ಮಹಮದ್ರೇಜಾ ಶಾಡ್ಲೋಯಿ 2 ಟ್ಯಾಕಲ್ ಪಾಯಿಂಟ್ ಗಳಿಸಿ ಗಮನ ಸೆಳೆದರು.
ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಪುಣೇರಿ ಪಲ್ಟಾನ್ ತಂಡಕ್ಕೆ ಮೂರು ಕೋಟಿ ಬಹುಮಾನ ಮೊತ್ತ ದಕ್ಕಿತು. ರನ್ನರ್ಸ್ ಅಪ್ ಆದ ಹರ್ಯಾಣ ಸ್ಟೀಲರ್ಸ್ಗೆ 1.8 ಕೋಟಿ ಹಣ ದೊರೆಯಿತು.
ಈ ಟೂರ್ನಿಯಲ್ಲಿ ಅತ್ಯುತ್ತಮ ಪ್ರಶಸ್ತಿ ಗಳಿಸಿ ಆಟಗಾರರಿವರು:
ಟೂರ್ನಿಯ ಅತ್ಯುತ್ತಮ ರೈಡರ್: ಅಶು ಮಲ್ಲಿಕ್
ಟೂರ್ನಿಯ ಅತ್ಯುತ್ತಮ ಡಫೆಂಡರ್: ಮೊಹಮ್ಮದ್ರೇಜಾ ಚಿಯಾನೆಹ್
ಟೂರ್ನಿಯ ಹೊಸ ಯುವ ಆಟಗಾರ: ಯೋಗೇಶ್
ಟೂರ್ನಿಯ ಮೌಲ್ಯಯುತ ಆಟಗಾರ: ಅಸ್ಲಾಂ ಇನಾಮ್ದಾರ್
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…