ಹೈದರಾಬಾದ್: ಹರ್ಯಾಣ ಸ್ಟೀಲರ್ಸ್ ವಿರುದ್ಧ ರೋಚಕ ಜಯ ದಾಖಲಿಸುವ ಮೂಲಕ ಪ್ರೋ ಕಬಡ್ಡಿ ಲೀಗ್ ಸೀಸನ್ 10 ಚಾಂಪಿಯನ್ ಆಗಿ ಪುಣೇರಿ ಪಲ್ಟಾನ್ ಹೊರ ಹೊಮ್ಮಿದೆ.
ಹೈದರಾಬಾದ್ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪುಣೇರಿ ಪಲ್ಟಾನ್ ಮತ್ತು ಹರ್ಯಾಣ ಸ್ಟೀಲರ್ಸ್ ನಡುವಿನ ಫೈನಲ್ ಪಂದ್ಯದಲ್ಲಿ, ಸ್ಟೀಲರ್ಸ್ ತಂಡವನ್ನು 28-23 ಅಂತರದಿಂದ ಸೋಲಿಸಿದ ಅಸ್ಲಾಮ್ ಇನಾಮ್ದಾರ್ ನಾಯಕತ್ವದ ಪಲ್ಟಾನ್ ತಂಡ ತನ್ನ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿದೆ.
ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡ ಪಲ್ಟಾನ್ ತಂಡ ಒಂದು ಬಾರಿ ಹರ್ಯಾಣವನ್ನು ಆಲ್ಔಟ್ ಮಾಡುವ ಮೂಲಕ ಮೇಲೆ ಬರದಂತೆ ನೋಡಿಕೊಂಡಿತು. ಪಲ್ಟಾನ್ನ ಪಂಕಜ್ ಮೋಹಿತೆ 9 ರೈಡ್ ಪಾಯಿಂಟ್ಸ್, ಗೋಯತ್ 5 ರೈಡ್ ಪಾಯಿಂಟ್ಸ್ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿತು. ಈ ಟೂರ್ನಿಯಲ್ಲೇ ಅತಿಹೆಚ್ಚು ಟ್ಯಾಕಲ್ ಪಾಯಿಂಟ್ ಗಳಿಸಿ ಮಹಮದ್ರೇಜಾ ಶಾಡ್ಲೋಯಿ 2 ಟ್ಯಾಕಲ್ ಪಾಯಿಂಟ್ ಗಳಿಸಿ ಗಮನ ಸೆಳೆದರು.
ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಪುಣೇರಿ ಪಲ್ಟಾನ್ ತಂಡಕ್ಕೆ ಮೂರು ಕೋಟಿ ಬಹುಮಾನ ಮೊತ್ತ ದಕ್ಕಿತು. ರನ್ನರ್ಸ್ ಅಪ್ ಆದ ಹರ್ಯಾಣ ಸ್ಟೀಲರ್ಸ್ಗೆ 1.8 ಕೋಟಿ ಹಣ ದೊರೆಯಿತು.
ಈ ಟೂರ್ನಿಯಲ್ಲಿ ಅತ್ಯುತ್ತಮ ಪ್ರಶಸ್ತಿ ಗಳಿಸಿ ಆಟಗಾರರಿವರು:
ಟೂರ್ನಿಯ ಅತ್ಯುತ್ತಮ ರೈಡರ್: ಅಶು ಮಲ್ಲಿಕ್
ಟೂರ್ನಿಯ ಅತ್ಯುತ್ತಮ ಡಫೆಂಡರ್: ಮೊಹಮ್ಮದ್ರೇಜಾ ಚಿಯಾನೆಹ್
ಟೂರ್ನಿಯ ಹೊಸ ಯುವ ಆಟಗಾರ: ಯೋಗೇಶ್
ಟೂರ್ನಿಯ ಮೌಲ್ಯಯುತ ಆಟಗಾರ: ಅಸ್ಲಾಂ ಇನಾಮ್ದಾರ್
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…