ಕ್ರೀಡೆ

PKL-10: ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡ ಪುಣೇರಿ ಪಲ್ಟಾನ್ಸ್‌!

ಹೈದರಾಬಾದ್‌: ಹರ್ಯಾಣ ಸ್ಟೀಲರ್ಸ್‌ ವಿರುದ್ಧ ರೋಚಕ ಜಯ ದಾಖಲಿಸುವ ಮೂಲಕ ಪ್ರೋ ಕಬಡ್ಡಿ ಲೀಗ್‌ ಸೀಸನ್‌ 10 ಚಾಂಪಿಯನ್‌ ಆಗಿ ಪುಣೇರಿ ಪಲ್ಟಾನ್‌ ಹೊರ ಹೊಮ್ಮಿದೆ.

ಹೈದರಾಬಾದ್‌ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪುಣೇರಿ ಪಲ್ಟಾನ್‌ ಮತ್ತು ಹರ್ಯಾಣ ಸ್ಟೀಲರ್ಸ್‌ ನಡುವಿನ ಫೈನಲ್‌ ಪಂದ್ಯದಲ್ಲಿ, ಸ್ಟೀಲರ್ಸ್‌ ತಂಡವನ್ನು 28-23 ಅಂತರದಿಂದ ಸೋಲಿಸಿದ ಅಸ್ಲಾಮ್‌ ಇನಾಮ್ದಾರ್‌ ನಾಯಕತ್ವದ ಪಲ್ಟಾನ್‌ ತಂಡ ತನ್ನ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿದೆ.

ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡ ಪಲ್ಟಾನ್‌ ತಂಡ ಒಂದು ಬಾರಿ ಹರ್ಯಾಣವನ್ನು ಆಲ್‌ಔಟ್‌ ಮಾಡುವ ಮೂಲಕ ಮೇಲೆ ಬರದಂತೆ ನೋಡಿಕೊಂಡಿತು. ಪಲ್ಟಾನ್‌ನ ಪಂಕಜ್‌ ಮೋಹಿತೆ 9 ರೈಡ್‌ ಪಾಯಿಂಟ್ಸ್‌, ಗೋಯತ್‌ 5 ರೈಡ್‌ ಪಾಯಿಂಟ್ಸ್‌ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿತು. ಈ ಟೂರ್ನಿಯಲ್ಲೇ ಅತಿಹೆಚ್ಚು ಟ್ಯಾಕಲ್‌ ಪಾಯಿಂಟ್‌ ಗಳಿಸಿ ಮಹಮದ್ರೇಜಾ ಶಾಡ್ಲೋಯಿ 2 ಟ್ಯಾಕಲ್‌ ಪಾಯಿಂಟ್‌ ಗಳಿಸಿ ಗಮನ ಸೆಳೆದರು.

ಮೊದಲ ಬಾರಿಗೆ ಚಾಂಪಿಯನ್‌ ಪಟ್ಟ ಅಲಂಕರಿಸಿದ ಪುಣೇರಿ ಪಲ್ಟಾನ್‌ ತಂಡಕ್ಕೆ ಮೂರು ಕೋಟಿ ಬಹುಮಾನ ಮೊತ್ತ ದಕ್ಕಿತು. ರನ್ನರ್ಸ್‌ ಅಪ್‌ ಆದ ಹರ್ಯಾಣ ಸ್ಟೀಲರ್ಸ್‌ಗೆ 1.8 ಕೋಟಿ ಹಣ ದೊರೆಯಿತು.

ಈ ಟೂರ್ನಿಯಲ್ಲಿ ಅತ್ಯುತ್ತಮ ಪ್ರಶಸ್ತಿ ಗಳಿಸಿ ಆಟಗಾರರಿವರು:

ಟೂರ್ನಿಯ ಅತ್ಯುತ್ತಮ ರೈಡರ್‌: ಅಶು ಮಲ್ಲಿಕ್‌
ಟೂರ್ನಿಯ ಅತ್ಯುತ್ತಮ ಡಫೆಂಡರ್‌: ಮೊಹಮ್ಮದ್ರೇಜಾ ಚಿಯಾನೆಹ್‌
ಟೂರ್ನಿಯ ಹೊಸ ಯುವ ಆಟಗಾರ: ಯೋಗೇಶ್‌
ಟೂರ್ನಿಯ ಮೌಲ್ಯಯುತ ಆಟಗಾರ: ಅಸ್ಲಾಂ ಇನಾಮ್ದಾರ್‌

andolana

Recent Posts

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

49 mins ago

ಅಜ್ಜೀಪುರ ಸಫಾರಿ ಕೇಂದ್ರದಲ್ಲಿ ಬಿಳಿ ಬಣ್ಣದ ಜಿಂಕೆ ದರ್ಶನ

ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…

2 hours ago

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು : ಸಚಿವ ಖಂಡ್ರೆ ಆಕ್ರೋಶ

ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…

2 hours ago

ಸಿಎಂ ಬದಲಾವಣೆ ಸಮಯ ಬಂದಿದೆ: ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

4 hours ago

ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…

4 hours ago

ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವು

ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…

5 hours ago