ಹೈದರಾಬಾದ್: ಹರ್ಯಾಣ ಸ್ಟೀಲರ್ಸ್ ವಿರುದ್ಧ ರೋಚಕ ಜಯ ದಾಖಲಿಸುವ ಮೂಲಕ ಪ್ರೋ ಕಬಡ್ಡಿ ಲೀಗ್ ಸೀಸನ್ 10 ಚಾಂಪಿಯನ್ ಆಗಿ ಪುಣೇರಿ ಪಲ್ಟಾನ್ ಹೊರ ಹೊಮ್ಮಿದೆ.
ಹೈದರಾಬಾದ್ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪುಣೇರಿ ಪಲ್ಟಾನ್ ಮತ್ತು ಹರ್ಯಾಣ ಸ್ಟೀಲರ್ಸ್ ನಡುವಿನ ಫೈನಲ್ ಪಂದ್ಯದಲ್ಲಿ, ಸ್ಟೀಲರ್ಸ್ ತಂಡವನ್ನು 28-23 ಅಂತರದಿಂದ ಸೋಲಿಸಿದ ಅಸ್ಲಾಮ್ ಇನಾಮ್ದಾರ್ ನಾಯಕತ್ವದ ಪಲ್ಟಾನ್ ತಂಡ ತನ್ನ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿದೆ.
ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡ ಪಲ್ಟಾನ್ ತಂಡ ಒಂದು ಬಾರಿ ಹರ್ಯಾಣವನ್ನು ಆಲ್ಔಟ್ ಮಾಡುವ ಮೂಲಕ ಮೇಲೆ ಬರದಂತೆ ನೋಡಿಕೊಂಡಿತು. ಪಲ್ಟಾನ್ನ ಪಂಕಜ್ ಮೋಹಿತೆ 9 ರೈಡ್ ಪಾಯಿಂಟ್ಸ್, ಗೋಯತ್ 5 ರೈಡ್ ಪಾಯಿಂಟ್ಸ್ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿತು. ಈ ಟೂರ್ನಿಯಲ್ಲೇ ಅತಿಹೆಚ್ಚು ಟ್ಯಾಕಲ್ ಪಾಯಿಂಟ್ ಗಳಿಸಿ ಮಹಮದ್ರೇಜಾ ಶಾಡ್ಲೋಯಿ 2 ಟ್ಯಾಕಲ್ ಪಾಯಿಂಟ್ ಗಳಿಸಿ ಗಮನ ಸೆಳೆದರು.
ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಪುಣೇರಿ ಪಲ್ಟಾನ್ ತಂಡಕ್ಕೆ ಮೂರು ಕೋಟಿ ಬಹುಮಾನ ಮೊತ್ತ ದಕ್ಕಿತು. ರನ್ನರ್ಸ್ ಅಪ್ ಆದ ಹರ್ಯಾಣ ಸ್ಟೀಲರ್ಸ್ಗೆ 1.8 ಕೋಟಿ ಹಣ ದೊರೆಯಿತು.
ಈ ಟೂರ್ನಿಯಲ್ಲಿ ಅತ್ಯುತ್ತಮ ಪ್ರಶಸ್ತಿ ಗಳಿಸಿ ಆಟಗಾರರಿವರು:
ಟೂರ್ನಿಯ ಅತ್ಯುತ್ತಮ ರೈಡರ್: ಅಶು ಮಲ್ಲಿಕ್
ಟೂರ್ನಿಯ ಅತ್ಯುತ್ತಮ ಡಫೆಂಡರ್: ಮೊಹಮ್ಮದ್ರೇಜಾ ಚಿಯಾನೆಹ್
ಟೂರ್ನಿಯ ಹೊಸ ಯುವ ಆಟಗಾರ: ಯೋಗೇಶ್
ಟೂರ್ನಿಯ ಮೌಲ್ಯಯುತ ಆಟಗಾರ: ಅಸ್ಲಾಂ ಇನಾಮ್ದಾರ್
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…