ಕ್ರೀಡೆ

PKL-10: ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡ ಪುಣೇರಿ ಪಲ್ಟಾನ್ಸ್‌!

ಹೈದರಾಬಾದ್‌: ಹರ್ಯಾಣ ಸ್ಟೀಲರ್ಸ್‌ ವಿರುದ್ಧ ರೋಚಕ ಜಯ ದಾಖಲಿಸುವ ಮೂಲಕ ಪ್ರೋ ಕಬಡ್ಡಿ ಲೀಗ್‌ ಸೀಸನ್‌ 10 ಚಾಂಪಿಯನ್‌ ಆಗಿ ಪುಣೇರಿ ಪಲ್ಟಾನ್‌ ಹೊರ ಹೊಮ್ಮಿದೆ.

ಹೈದರಾಬಾದ್‌ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪುಣೇರಿ ಪಲ್ಟಾನ್‌ ಮತ್ತು ಹರ್ಯಾಣ ಸ್ಟೀಲರ್ಸ್‌ ನಡುವಿನ ಫೈನಲ್‌ ಪಂದ್ಯದಲ್ಲಿ, ಸ್ಟೀಲರ್ಸ್‌ ತಂಡವನ್ನು 28-23 ಅಂತರದಿಂದ ಸೋಲಿಸಿದ ಅಸ್ಲಾಮ್‌ ಇನಾಮ್ದಾರ್‌ ನಾಯಕತ್ವದ ಪಲ್ಟಾನ್‌ ತಂಡ ತನ್ನ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿದೆ.

ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡ ಪಲ್ಟಾನ್‌ ತಂಡ ಒಂದು ಬಾರಿ ಹರ್ಯಾಣವನ್ನು ಆಲ್‌ಔಟ್‌ ಮಾಡುವ ಮೂಲಕ ಮೇಲೆ ಬರದಂತೆ ನೋಡಿಕೊಂಡಿತು. ಪಲ್ಟಾನ್‌ನ ಪಂಕಜ್‌ ಮೋಹಿತೆ 9 ರೈಡ್‌ ಪಾಯಿಂಟ್ಸ್‌, ಗೋಯತ್‌ 5 ರೈಡ್‌ ಪಾಯಿಂಟ್ಸ್‌ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿತು. ಈ ಟೂರ್ನಿಯಲ್ಲೇ ಅತಿಹೆಚ್ಚು ಟ್ಯಾಕಲ್‌ ಪಾಯಿಂಟ್‌ ಗಳಿಸಿ ಮಹಮದ್ರೇಜಾ ಶಾಡ್ಲೋಯಿ 2 ಟ್ಯಾಕಲ್‌ ಪಾಯಿಂಟ್‌ ಗಳಿಸಿ ಗಮನ ಸೆಳೆದರು.

ಮೊದಲ ಬಾರಿಗೆ ಚಾಂಪಿಯನ್‌ ಪಟ್ಟ ಅಲಂಕರಿಸಿದ ಪುಣೇರಿ ಪಲ್ಟಾನ್‌ ತಂಡಕ್ಕೆ ಮೂರು ಕೋಟಿ ಬಹುಮಾನ ಮೊತ್ತ ದಕ್ಕಿತು. ರನ್ನರ್ಸ್‌ ಅಪ್‌ ಆದ ಹರ್ಯಾಣ ಸ್ಟೀಲರ್ಸ್‌ಗೆ 1.8 ಕೋಟಿ ಹಣ ದೊರೆಯಿತು.

ಈ ಟೂರ್ನಿಯಲ್ಲಿ ಅತ್ಯುತ್ತಮ ಪ್ರಶಸ್ತಿ ಗಳಿಸಿ ಆಟಗಾರರಿವರು:

ಟೂರ್ನಿಯ ಅತ್ಯುತ್ತಮ ರೈಡರ್‌: ಅಶು ಮಲ್ಲಿಕ್‌
ಟೂರ್ನಿಯ ಅತ್ಯುತ್ತಮ ಡಫೆಂಡರ್‌: ಮೊಹಮ್ಮದ್ರೇಜಾ ಚಿಯಾನೆಹ್‌
ಟೂರ್ನಿಯ ಹೊಸ ಯುವ ಆಟಗಾರ: ಯೋಗೇಶ್‌
ಟೂರ್ನಿಯ ಮೌಲ್ಯಯುತ ಆಟಗಾರ: ಅಸ್ಲಾಂ ಇನಾಮ್ದಾರ್‌

andolana

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

21 mins ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

6 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

10 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

10 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

10 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

13 hours ago