ಕ್ರೀಡೆ

PKL2023: ದಬಾಂಗ್‌ ಡೆಲ್ಲಿ ವಿರುದ್ಧ ಸೋತ ಬೆಂಗಳೂರು ಬುಲ್ಸ್‌

ಬೆಂಗಳೂರು : ಪ್ರೊ ಕಬಡ್ಡಿ ಲೀಗ್‌ನ ದಬಾಂಗ್‌ ಡೆಲ್ಲಿ ಮತ್ತು ಬೆಂಗಳೂರು ಬುಲ್ಸ್‌ ನಡುವಿನ ಪಂದ್ಯದಲ್ಲಿ ದಬಾಂಗ್‌ ದೆಲ್ಲಿ ಜಯಭೇರಿ ಬಾರಿಸಿದೆ.

ಇಲ್ಲಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ದಬಾಂಗ್‌ ಡೆಲ್ಲಿ ೭ ಪಾಯಿಂಟ್‌ಗಳ ಅಂತರದಿಂದ ಗೆಲುವು ದಾಖಲಿಸಿತು. ಈ ಪಂದ್ಯ ಸೋತ ಬೆಂಗಳೂರು ಬುಲ್ಸ್‌ ಈ ಟೂರ್ನಿಯಲ್ಲಿ ಸತತ ಮೂರನೇ ಸೋಲು ಕಂಡಿತು.

ದಬಾಂಗ್‌ ಡೆಲ್ಲಿ ಪರ ಆಲ್‌ರೌಂಡರ್‌ ಆಟವಾಡಿದ ನವೀನ್‌ ಕುಮಾರ್‌ ರೈಡ್‌ ಪಾಯಿಂಟ್‌ ೭, ಟ್ಯಾಕಲ್‌ ೧ ಮತ್ತು ಬೋನಸ್‌ ೫ ಪಾಯಿಂಟ್‌ ಸೇರಿ ೧೩ ಅಂಕ ಗಳಿಸಿಕೊಟ್ಟರು. ಅಶು ಮಲ್ಲಿಕ್‌ ೧೦ ಪಾಯಿಂಟ್ಸ್‌ ಗಳಿಸಿ ನವೀನ್‌ ಕುಮಾರ್‌ಗೆ ನೆರವಾದರು. ಇನ್ನು ವಿಶಾಲ್‌ ಭಾರದ್ವಜ್‌ ೪ ಮತ್ತು ಹಿಮ್ಮತ್‌ ೩ ಪಾಯಿಂಟ್‌ ಗಳಿಸಿದರು.

ಬೆಂಗಳೂರು ಬುಲ್ಸ್‌ ಪರ ಭರತ್‌ ೧೦ ಏಕಾಂಗಿ ಹೋರಾಟ ನಡೆಸಿದರು. ಸುಶೀಲ್‌ ೫, ಅಮನ್‌ ೩ ಮತು ಅಕ್ಷಿತ್‌ ದುಲ್‌ ೩ ಪಾಯಿಂಟ್‌ ತಂದರು.

ಮೊದಲಾರ್ದದಲ್ಲೇ ಮುನ್ನಡೆ ಕಾಯ್ದುಕೊಂಡ ಡೆಲ್ಲಿ ತಂಡ ಅಲ್ಲಿಂದ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಬುಲ್ಸ್‌ಗೆ ಪಂದ್ಯದ ಮೇಲೆ ಹಿಡಿತ ಸಾಧಿಸಲು ಬಿಡದ ಡೆಲ್ಲಿ ತಂಡ ಅಂತಿಮವಾಗಿ ೩೮-೩೧ ಅಂತರದಿಂದ ಬೆಂಗಳೂರು ಬುಲ್ಸ್‌ ವಿರುದ್ಧ ದಬಾಂಗ್‌ ಡೆಲ್ಲಿ ಗೆದ್ದು ಬೀಗಿದರು.

andolanait

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

1 hour ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

1 hour ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

1 hour ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

1 hour ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

2 hours ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

2 hours ago