ಬೆಂಗಳೂರು : ಪ್ರೊ ಕಬಡ್ಡಿ ಲೀಗ್ನ ದಬಾಂಗ್ ಡೆಲ್ಲಿ ಮತ್ತು ಬೆಂಗಳೂರು ಬುಲ್ಸ್ ನಡುವಿನ ಪಂದ್ಯದಲ್ಲಿ ದಬಾಂಗ್ ದೆಲ್ಲಿ ಜಯಭೇರಿ ಬಾರಿಸಿದೆ.
ಇಲ್ಲಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ೭ ಪಾಯಿಂಟ್ಗಳ ಅಂತರದಿಂದ ಗೆಲುವು ದಾಖಲಿಸಿತು. ಈ ಪಂದ್ಯ ಸೋತ ಬೆಂಗಳೂರು ಬುಲ್ಸ್ ಈ ಟೂರ್ನಿಯಲ್ಲಿ ಸತತ ಮೂರನೇ ಸೋಲು ಕಂಡಿತು.
ದಬಾಂಗ್ ಡೆಲ್ಲಿ ಪರ ಆಲ್ರೌಂಡರ್ ಆಟವಾಡಿದ ನವೀನ್ ಕುಮಾರ್ ರೈಡ್ ಪಾಯಿಂಟ್ ೭, ಟ್ಯಾಕಲ್ ೧ ಮತ್ತು ಬೋನಸ್ ೫ ಪಾಯಿಂಟ್ ಸೇರಿ ೧೩ ಅಂಕ ಗಳಿಸಿಕೊಟ್ಟರು. ಅಶು ಮಲ್ಲಿಕ್ ೧೦ ಪಾಯಿಂಟ್ಸ್ ಗಳಿಸಿ ನವೀನ್ ಕುಮಾರ್ಗೆ ನೆರವಾದರು. ಇನ್ನು ವಿಶಾಲ್ ಭಾರದ್ವಜ್ ೪ ಮತ್ತು ಹಿಮ್ಮತ್ ೩ ಪಾಯಿಂಟ್ ಗಳಿಸಿದರು.
ಬೆಂಗಳೂರು ಬುಲ್ಸ್ ಪರ ಭರತ್ ೧೦ ಏಕಾಂಗಿ ಹೋರಾಟ ನಡೆಸಿದರು. ಸುಶೀಲ್ ೫, ಅಮನ್ ೩ ಮತು ಅಕ್ಷಿತ್ ದುಲ್ ೩ ಪಾಯಿಂಟ್ ತಂದರು.
ಮೊದಲಾರ್ದದಲ್ಲೇ ಮುನ್ನಡೆ ಕಾಯ್ದುಕೊಂಡ ಡೆಲ್ಲಿ ತಂಡ ಅಲ್ಲಿಂದ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಬುಲ್ಸ್ಗೆ ಪಂದ್ಯದ ಮೇಲೆ ಹಿಡಿತ ಸಾಧಿಸಲು ಬಿಡದ ಡೆಲ್ಲಿ ತಂಡ ಅಂತಿಮವಾಗಿ ೩೮-೩೧ ಅಂತರದಿಂದ ಬೆಂಗಳೂರು ಬುಲ್ಸ್ ವಿರುದ್ಧ ದಬಾಂಗ್ ಡೆಲ್ಲಿ ಗೆದ್ದು ಬೀಗಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…
ನಾಗ್ಪುರ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…