ಕ್ರೀಡೆ

PKL2023: ದಬಾಂಗ್‌ ಡೆಲ್ಲಿ ವಿರುದ್ಧ ಸೋತ ಬೆಂಗಳೂರು ಬುಲ್ಸ್‌

ಬೆಂಗಳೂರು : ಪ್ರೊ ಕಬಡ್ಡಿ ಲೀಗ್‌ನ ದಬಾಂಗ್‌ ಡೆಲ್ಲಿ ಮತ್ತು ಬೆಂಗಳೂರು ಬುಲ್ಸ್‌ ನಡುವಿನ ಪಂದ್ಯದಲ್ಲಿ ದಬಾಂಗ್‌ ದೆಲ್ಲಿ ಜಯಭೇರಿ ಬಾರಿಸಿದೆ.

ಇಲ್ಲಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ದಬಾಂಗ್‌ ಡೆಲ್ಲಿ ೭ ಪಾಯಿಂಟ್‌ಗಳ ಅಂತರದಿಂದ ಗೆಲುವು ದಾಖಲಿಸಿತು. ಈ ಪಂದ್ಯ ಸೋತ ಬೆಂಗಳೂರು ಬುಲ್ಸ್‌ ಈ ಟೂರ್ನಿಯಲ್ಲಿ ಸತತ ಮೂರನೇ ಸೋಲು ಕಂಡಿತು.

ದಬಾಂಗ್‌ ಡೆಲ್ಲಿ ಪರ ಆಲ್‌ರೌಂಡರ್‌ ಆಟವಾಡಿದ ನವೀನ್‌ ಕುಮಾರ್‌ ರೈಡ್‌ ಪಾಯಿಂಟ್‌ ೭, ಟ್ಯಾಕಲ್‌ ೧ ಮತ್ತು ಬೋನಸ್‌ ೫ ಪಾಯಿಂಟ್‌ ಸೇರಿ ೧೩ ಅಂಕ ಗಳಿಸಿಕೊಟ್ಟರು. ಅಶು ಮಲ್ಲಿಕ್‌ ೧೦ ಪಾಯಿಂಟ್ಸ್‌ ಗಳಿಸಿ ನವೀನ್‌ ಕುಮಾರ್‌ಗೆ ನೆರವಾದರು. ಇನ್ನು ವಿಶಾಲ್‌ ಭಾರದ್ವಜ್‌ ೪ ಮತ್ತು ಹಿಮ್ಮತ್‌ ೩ ಪಾಯಿಂಟ್‌ ಗಳಿಸಿದರು.

ಬೆಂಗಳೂರು ಬುಲ್ಸ್‌ ಪರ ಭರತ್‌ ೧೦ ಏಕಾಂಗಿ ಹೋರಾಟ ನಡೆಸಿದರು. ಸುಶೀಲ್‌ ೫, ಅಮನ್‌ ೩ ಮತು ಅಕ್ಷಿತ್‌ ದುಲ್‌ ೩ ಪಾಯಿಂಟ್‌ ತಂದರು.

ಮೊದಲಾರ್ದದಲ್ಲೇ ಮುನ್ನಡೆ ಕಾಯ್ದುಕೊಂಡ ಡೆಲ್ಲಿ ತಂಡ ಅಲ್ಲಿಂದ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಬುಲ್ಸ್‌ಗೆ ಪಂದ್ಯದ ಮೇಲೆ ಹಿಡಿತ ಸಾಧಿಸಲು ಬಿಡದ ಡೆಲ್ಲಿ ತಂಡ ಅಂತಿಮವಾಗಿ ೩೮-೩೧ ಅಂತರದಿಂದ ಬೆಂಗಳೂರು ಬುಲ್ಸ್‌ ವಿರುದ್ಧ ದಬಾಂಗ್‌ ಡೆಲ್ಲಿ ಗೆದ್ದು ಬೀಗಿದರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

5 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

5 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

6 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

8 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

11 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

11 hours ago