ಬೆಂಗಳೂರು : ಪ್ರೊ ಕಬಡ್ಡಿ ಲೀಗ್ನ ದಬಾಂಗ್ ಡೆಲ್ಲಿ ಮತ್ತು ಬೆಂಗಳೂರು ಬುಲ್ಸ್ ನಡುವಿನ ಪಂದ್ಯದಲ್ಲಿ ದಬಾಂಗ್ ದೆಲ್ಲಿ ಜಯಭೇರಿ ಬಾರಿಸಿದೆ.
ಇಲ್ಲಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ೭ ಪಾಯಿಂಟ್ಗಳ ಅಂತರದಿಂದ ಗೆಲುವು ದಾಖಲಿಸಿತು. ಈ ಪಂದ್ಯ ಸೋತ ಬೆಂಗಳೂರು ಬುಲ್ಸ್ ಈ ಟೂರ್ನಿಯಲ್ಲಿ ಸತತ ಮೂರನೇ ಸೋಲು ಕಂಡಿತು.
ದಬಾಂಗ್ ಡೆಲ್ಲಿ ಪರ ಆಲ್ರೌಂಡರ್ ಆಟವಾಡಿದ ನವೀನ್ ಕುಮಾರ್ ರೈಡ್ ಪಾಯಿಂಟ್ ೭, ಟ್ಯಾಕಲ್ ೧ ಮತ್ತು ಬೋನಸ್ ೫ ಪಾಯಿಂಟ್ ಸೇರಿ ೧೩ ಅಂಕ ಗಳಿಸಿಕೊಟ್ಟರು. ಅಶು ಮಲ್ಲಿಕ್ ೧೦ ಪಾಯಿಂಟ್ಸ್ ಗಳಿಸಿ ನವೀನ್ ಕುಮಾರ್ಗೆ ನೆರವಾದರು. ಇನ್ನು ವಿಶಾಲ್ ಭಾರದ್ವಜ್ ೪ ಮತ್ತು ಹಿಮ್ಮತ್ ೩ ಪಾಯಿಂಟ್ ಗಳಿಸಿದರು.
ಬೆಂಗಳೂರು ಬುಲ್ಸ್ ಪರ ಭರತ್ ೧೦ ಏಕಾಂಗಿ ಹೋರಾಟ ನಡೆಸಿದರು. ಸುಶೀಲ್ ೫, ಅಮನ್ ೩ ಮತು ಅಕ್ಷಿತ್ ದುಲ್ ೩ ಪಾಯಿಂಟ್ ತಂದರು.
ಮೊದಲಾರ್ದದಲ್ಲೇ ಮುನ್ನಡೆ ಕಾಯ್ದುಕೊಂಡ ಡೆಲ್ಲಿ ತಂಡ ಅಲ್ಲಿಂದ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಬುಲ್ಸ್ಗೆ ಪಂದ್ಯದ ಮೇಲೆ ಹಿಡಿತ ಸಾಧಿಸಲು ಬಿಡದ ಡೆಲ್ಲಿ ತಂಡ ಅಂತಿಮವಾಗಿ ೩೮-೩೧ ಅಂತರದಿಂದ ಬೆಂಗಳೂರು ಬುಲ್ಸ್ ವಿರುದ್ಧ ದಬಾಂಗ್ ಡೆಲ್ಲಿ ಗೆದ್ದು ಬೀಗಿದರು.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…