ಬೆಂಗಳೂರು : ಪ್ರೊ ಕಬಡ್ಡಿ ಲೀಗ್ನ ದಬಾಂಗ್ ಡೆಲ್ಲಿ ಮತ್ತು ಬೆಂಗಳೂರು ಬುಲ್ಸ್ ನಡುವಿನ ಪಂದ್ಯದಲ್ಲಿ ದಬಾಂಗ್ ದೆಲ್ಲಿ ಜಯಭೇರಿ ಬಾರಿಸಿದೆ.
ಇಲ್ಲಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ೭ ಪಾಯಿಂಟ್ಗಳ ಅಂತರದಿಂದ ಗೆಲುವು ದಾಖಲಿಸಿತು. ಈ ಪಂದ್ಯ ಸೋತ ಬೆಂಗಳೂರು ಬುಲ್ಸ್ ಈ ಟೂರ್ನಿಯಲ್ಲಿ ಸತತ ಮೂರನೇ ಸೋಲು ಕಂಡಿತು.
ದಬಾಂಗ್ ಡೆಲ್ಲಿ ಪರ ಆಲ್ರೌಂಡರ್ ಆಟವಾಡಿದ ನವೀನ್ ಕುಮಾರ್ ರೈಡ್ ಪಾಯಿಂಟ್ ೭, ಟ್ಯಾಕಲ್ ೧ ಮತ್ತು ಬೋನಸ್ ೫ ಪಾಯಿಂಟ್ ಸೇರಿ ೧೩ ಅಂಕ ಗಳಿಸಿಕೊಟ್ಟರು. ಅಶು ಮಲ್ಲಿಕ್ ೧೦ ಪಾಯಿಂಟ್ಸ್ ಗಳಿಸಿ ನವೀನ್ ಕುಮಾರ್ಗೆ ನೆರವಾದರು. ಇನ್ನು ವಿಶಾಲ್ ಭಾರದ್ವಜ್ ೪ ಮತ್ತು ಹಿಮ್ಮತ್ ೩ ಪಾಯಿಂಟ್ ಗಳಿಸಿದರು.
ಬೆಂಗಳೂರು ಬುಲ್ಸ್ ಪರ ಭರತ್ ೧೦ ಏಕಾಂಗಿ ಹೋರಾಟ ನಡೆಸಿದರು. ಸುಶೀಲ್ ೫, ಅಮನ್ ೩ ಮತು ಅಕ್ಷಿತ್ ದುಲ್ ೩ ಪಾಯಿಂಟ್ ತಂದರು.
ಮೊದಲಾರ್ದದಲ್ಲೇ ಮುನ್ನಡೆ ಕಾಯ್ದುಕೊಂಡ ಡೆಲ್ಲಿ ತಂಡ ಅಲ್ಲಿಂದ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಬುಲ್ಸ್ಗೆ ಪಂದ್ಯದ ಮೇಲೆ ಹಿಡಿತ ಸಾಧಿಸಲು ಬಿಡದ ಡೆಲ್ಲಿ ತಂಡ ಅಂತಿಮವಾಗಿ ೩೮-೩೧ ಅಂತರದಿಂದ ಬೆಂಗಳೂರು ಬುಲ್ಸ್ ವಿರುದ್ಧ ದಬಾಂಗ್ ಡೆಲ್ಲಿ ಗೆದ್ದು ಬೀಗಿದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…