ಬೆಂಗಳೂರು : ಪ್ರೊ ಕಬಡ್ಡಿ ಲೀಗ್ನ ದಬಾಂಗ್ ಡೆಲ್ಲಿ ಮತ್ತು ಬೆಂಗಳೂರು ಬುಲ್ಸ್ ನಡುವಿನ ಪಂದ್ಯದಲ್ಲಿ ದಬಾಂಗ್ ದೆಲ್ಲಿ ಜಯಭೇರಿ ಬಾರಿಸಿದೆ.
ಇಲ್ಲಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ೭ ಪಾಯಿಂಟ್ಗಳ ಅಂತರದಿಂದ ಗೆಲುವು ದಾಖಲಿಸಿತು. ಈ ಪಂದ್ಯ ಸೋತ ಬೆಂಗಳೂರು ಬುಲ್ಸ್ ಈ ಟೂರ್ನಿಯಲ್ಲಿ ಸತತ ಮೂರನೇ ಸೋಲು ಕಂಡಿತು.
ದಬಾಂಗ್ ಡೆಲ್ಲಿ ಪರ ಆಲ್ರೌಂಡರ್ ಆಟವಾಡಿದ ನವೀನ್ ಕುಮಾರ್ ರೈಡ್ ಪಾಯಿಂಟ್ ೭, ಟ್ಯಾಕಲ್ ೧ ಮತ್ತು ಬೋನಸ್ ೫ ಪಾಯಿಂಟ್ ಸೇರಿ ೧೩ ಅಂಕ ಗಳಿಸಿಕೊಟ್ಟರು. ಅಶು ಮಲ್ಲಿಕ್ ೧೦ ಪಾಯಿಂಟ್ಸ್ ಗಳಿಸಿ ನವೀನ್ ಕುಮಾರ್ಗೆ ನೆರವಾದರು. ಇನ್ನು ವಿಶಾಲ್ ಭಾರದ್ವಜ್ ೪ ಮತ್ತು ಹಿಮ್ಮತ್ ೩ ಪಾಯಿಂಟ್ ಗಳಿಸಿದರು.
ಬೆಂಗಳೂರು ಬುಲ್ಸ್ ಪರ ಭರತ್ ೧೦ ಏಕಾಂಗಿ ಹೋರಾಟ ನಡೆಸಿದರು. ಸುಶೀಲ್ ೫, ಅಮನ್ ೩ ಮತು ಅಕ್ಷಿತ್ ದುಲ್ ೩ ಪಾಯಿಂಟ್ ತಂದರು.
ಮೊದಲಾರ್ದದಲ್ಲೇ ಮುನ್ನಡೆ ಕಾಯ್ದುಕೊಂಡ ಡೆಲ್ಲಿ ತಂಡ ಅಲ್ಲಿಂದ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಬುಲ್ಸ್ಗೆ ಪಂದ್ಯದ ಮೇಲೆ ಹಿಡಿತ ಸಾಧಿಸಲು ಬಿಡದ ಡೆಲ್ಲಿ ತಂಡ ಅಂತಿಮವಾಗಿ ೩೮-೩೧ ಅಂತರದಿಂದ ಬೆಂಗಳೂರು ಬುಲ್ಸ್ ವಿರುದ್ಧ ದಬಾಂಗ್ ಡೆಲ್ಲಿ ಗೆದ್ದು ಬೀಗಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…