ಕ್ರೀಡೆ

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮನು ಭಾಕರ್‌ಗೆ ಪ್ರಧಾನಿ ನರೇಂದ್ರ ಮೋದಿ ಕರೆ

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮನು ಭಾಕರ್‌ಗೆ ಪ್ರಧಾನಿ ನರೇಂದ್ರ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

2024ರ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತಕ್ಕಾಗಿ ಮೊದಲ ಪದಕ ತಂದುಕೊಟ್ಟ ಮಹಿಳಾ ಶೂಟರ್‌ ಮನು ಭಾಕರ್‌ಗೆ ಪ್ರಧಾನಿ ಮೋದಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದು, ಇದು ಐತಿಹಾಸಿಕ ಗೆಲುವು. 2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಮೊದಲ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಅಭಿನಂದನೆಗಳು. ಇದು ನಂಬಲು ಅಸಾಧ್ಯವಾದ ಸಾಧನೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಶ್ಲಾಘಿಸಿದ್ದಾರೆ.

ಅಷ್ಟೇ ಅಲ್ಲದೇ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ, ಕೇಂದ್ರ ಸಚಿವರಾದ ಅಮಿತ್‌ ಶಾ, ಕಿರಣ್‌ ರಿಜಿಜು, ಟೀ ಇಂಡಿಯಾ ಮುಖ್ಯ ಕೋಚ್‌ ಗೌತಮ್‌ ಗಂಭೀರ್‌ ಸೇರಿದಂತೆ ಅನೇಕರು ಮನು ಭಾಕರ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಕಂಚಿಕ ಪದಕ ಜಯಿಸಿದ ಬಳಿಕ ಖುಷಿ ಹಂಚಿಕೊಂಡ ಮನು ಭಾಕರ್‌ ಅವರು, ನಾನು ಭಗವದ್ಗೀತೆ ಓದಿದ್ದು, ಪದಕ ಗೆಲ್ಲಲು ನೆರವಾಗಿದೆ. ನಾನು ಸಾಕಷ್ಟು ಬಾರಿ ಭಗವದ್ಗೀತೆ ಓದಿದ್ದೇನೆ. ಅದರಲ್ಲಿ ಭಗವಂತ ಶ್ರೀಕೃಷ್ಣನು ನಿನ್ನ ಕೆಲಸವನ್ನು ನೀನು ಮಾಡು. ಅದರಿಂದ ಬರುವ ಫಲಿತಾಂಶದ ಬಗ್ಗೆ ಆಲೋಚಿಸಬೇಡ ಎನ್ನುವ ಮಾತು ನನಗೆ ಸ್ಪೂರ್ತಿಯಾಯಿತು ಎಂದು ಭಾಕರ್‌ ಸಂತಸ ವ್ಯಕ್ತಪಡಿಸಿದ್ದಾರೆ.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

1 hour ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

2 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

3 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

4 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

4 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

6 hours ago