ಕ್ರೀಡೆ

ಪೂಜಾರ, ಗಿಲ್ ಶತಕದಬ್ಬರ: ಭಾರತದ ಹಿಡಿತದಲ್ಲಿ ಟೆಸ್ಟ್

ಪೂಜಾರ, ಗಿಲ್ ಶತಕದಬ್ಬರ: ಭಾರತದ ಹಿಡಿತದಲ್ಲಿ ಟೆಸ್ಟ್
ಬಾಂಗ್ಲಾಗೆ 513 ರನ್ ಟಾರ್ಗೆಟ್, ಎರಡನೇ ಇನ್ನಿಂಗ್ಸ್ ನಲ್ಲಿ 258 ರನ್ ಪೇರಿಸಿದ ಭಾರತ

 

ಬಾಂಗ್ಲಾದೇಶ: ಬಾಂಗ್ಲಾದೇಶದ ಜಹೂರ್ ಅಹಮ್ಮದ್ ಚೌಧರಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪ್ರಥಮ ಟೆಸ್ಟ್ ನಲ್ಲಿ ಭಾರತವು ಬೌಲಿಂಗ್,ಬ್ಯಾಟಿಂಗ್  ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು ದ್ವಿತೀಯ ಇನ್ನಿಂಗ್ಸ್ ನಲ್ಲಿ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಹಾಗೂ ಅನುಭವಿ ದಾಂಡಿಗ ಚೇತೇಶ್ವರ ಪೂಜಾರ ಅಬ್ಬರದ ಶತಕದ ನೆರವಿನಿಂದ ಬಾಂಗ್ಲಾ ಗೆಲ್ಲಲು513    ರನ್ ಗಳ ಕಠಿಣ ಟಾರ್ಗೆಟ್ ನೀಡಿದೆ.


ಮೂರನೇ ದಿನದ ಅಂತ್ಯಕ್ಕೆ ಬಾಂಗ್ಲಾದೇಶ 12 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 42 ರನ್ ಗಳಿಸಿದೆ. ಇದಕ್ಕೂ ಮುನ್ನ ಭಾರತ ಪ್ರಥಮ ಇನ್ನಿಂಗ್ಸ್ ನಲ್ಲಿ 404 ರನ್ ಗಳಿಸಿದ್ದರೆ, ಬಾಂಗ್ಲಾ ತಂಡವು ಸ್ಪಿನ್ನರ್ ಕುಲದೀಪ್ ಯಾದವ್ (16-6-40-5 ) ಹಾಗೂ ವೇಗದ ಬೌಲರ್ ಸಿರಾಜ್ ಮಾರಕ ದಾಳಿಗೆ ( 13-2-20-3) ಸಿಲುಕಿ 150 ರನ್ ಗಳಿಗೆ ಸರ್ವ ಪತನವಾಯಿತು.ಅಕ್ಷರ್ ಪಟೇಲ್,ಉಮೇಶ್ ಯಾದವ್ ತಲಾ ಒಂದು ವಿಕೆಟ್ ಗಳಿಸಿದರು.
ಪ್ರಥಮ ಇನ್ನಿಂಗ್ಸ್ ನಲ್ಲಿ ಚೇತೇಶ್ವರ ಪೂಜಾರ 90,ಶ್ರೇಯಸ್ ಅಯ್ಯರ್ 86,ಆರ್.ಅಶ್ವಿನ್ 58,ರಿಷಬ್ ಪಂತ್ 46 ಮೂಲಕ ಭಾರತ 404 ಮೊತ್ತ ಕಲೆ ಹಾಕಿತು.
ದ್ವಿತೀಯ ಇನ್ನಿಂಗ್ಸ್ ನಲ್ಲೂ ನಾಯಕ ಕೆ.ಎಲ್.ರಾಹುಲ್ ಕೇವಲ 22 ರನ್ ಗಳಿಸಿ ಔಟಾಗುವದರೊಂದಿಗೆ ಮತ್ತೆ ನಿರಾಶೆ ಮೂಡಿಸಿದರು. ಆದರೆ ಆರಂಭಿಕ ದಾಂಡಿಗ ಶುಭಮನ್ ಗಿಲ್ 10 ಬೌಂಡರಿ,2 ಸಿಕ್ಸರ್ ನೆರವಿನೊಂದಿಗೆ 152 ಎಸೆತಗಳಲ್ಲಿ 110 ರನ್ ಗಳಿಸಿ ಔಟಾದರೆ, ಚೇತೇಶ್ವರ ಪೂಜಾರ 13 ಬೌಂಡರಿ ನೆರವಿನೊಂದಿಗೆ 130 ಎಸೆತಗಳಲ್ಲಿ ಔಟಾಗದೆ 102 ರನ್ ಗಳಿಸಿದರು. ನಾಯಕ ರಾಹುಲ್ 258/2 ಇನ್ನಿಂಗ್ಸ್ ಡಿಕ್ಲೇರ್ ಘೋಷಣೆಯೊಂದಿಗೆ ಬಾಂಗ್ಲಾಗೆ 512 ರನ್ ಗಳ ಕಠಿಣ ಟಾರ್ಗೆಟ್ ನೀಡಿದ್ದಾರೆ.
ದ್ವಿತೀಯ ಇನ್ನಿಂಗ್ಸ್ ನಲ್ಲಿ ಎಚ್ಚರಿಕೆಯ ಆಟ ಆರಂಭಿಸಿದ ಬಾಂಗ್ಲಾ ತಂಡ 12 ಓವರ್ ಗಳಲ್ಲಿ 42 ರನ್ ಕಲೆ ಹಾಕಿದೆ. ಇನ್ನೂ ಎರಡು ದಿನದ ಆಟ ಬಾಕಿ ಇದ್ದು ಬಾಂಗ್ಲಾ ಗೆಲ್ಲಲು 471 ರನ್ ಗಳಿಸ ಬೇಕಾಗಿದೆ. ಭಾರತ ಗೆಲ್ಲಲು 10 ವಿಕೆಟ್ ಕಬಳಿಸಬೇಕಾಗಿದೆ.

andolana

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

5 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

6 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

7 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

8 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

8 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

9 hours ago