ಕ್ರೀಡೆ

ಪೂಜಾರ, ಗಿಲ್ ಶತಕದಬ್ಬರ: ಭಾರತದ ಹಿಡಿತದಲ್ಲಿ ಟೆಸ್ಟ್

ಪೂಜಾರ, ಗಿಲ್ ಶತಕದಬ್ಬರ: ಭಾರತದ ಹಿಡಿತದಲ್ಲಿ ಟೆಸ್ಟ್
ಬಾಂಗ್ಲಾಗೆ 513 ರನ್ ಟಾರ್ಗೆಟ್, ಎರಡನೇ ಇನ್ನಿಂಗ್ಸ್ ನಲ್ಲಿ 258 ರನ್ ಪೇರಿಸಿದ ಭಾರತ

 

ಬಾಂಗ್ಲಾದೇಶ: ಬಾಂಗ್ಲಾದೇಶದ ಜಹೂರ್ ಅಹಮ್ಮದ್ ಚೌಧರಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪ್ರಥಮ ಟೆಸ್ಟ್ ನಲ್ಲಿ ಭಾರತವು ಬೌಲಿಂಗ್,ಬ್ಯಾಟಿಂಗ್  ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು ದ್ವಿತೀಯ ಇನ್ನಿಂಗ್ಸ್ ನಲ್ಲಿ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಹಾಗೂ ಅನುಭವಿ ದಾಂಡಿಗ ಚೇತೇಶ್ವರ ಪೂಜಾರ ಅಬ್ಬರದ ಶತಕದ ನೆರವಿನಿಂದ ಬಾಂಗ್ಲಾ ಗೆಲ್ಲಲು513    ರನ್ ಗಳ ಕಠಿಣ ಟಾರ್ಗೆಟ್ ನೀಡಿದೆ.


ಮೂರನೇ ದಿನದ ಅಂತ್ಯಕ್ಕೆ ಬಾಂಗ್ಲಾದೇಶ 12 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 42 ರನ್ ಗಳಿಸಿದೆ. ಇದಕ್ಕೂ ಮುನ್ನ ಭಾರತ ಪ್ರಥಮ ಇನ್ನಿಂಗ್ಸ್ ನಲ್ಲಿ 404 ರನ್ ಗಳಿಸಿದ್ದರೆ, ಬಾಂಗ್ಲಾ ತಂಡವು ಸ್ಪಿನ್ನರ್ ಕುಲದೀಪ್ ಯಾದವ್ (16-6-40-5 ) ಹಾಗೂ ವೇಗದ ಬೌಲರ್ ಸಿರಾಜ್ ಮಾರಕ ದಾಳಿಗೆ ( 13-2-20-3) ಸಿಲುಕಿ 150 ರನ್ ಗಳಿಗೆ ಸರ್ವ ಪತನವಾಯಿತು.ಅಕ್ಷರ್ ಪಟೇಲ್,ಉಮೇಶ್ ಯಾದವ್ ತಲಾ ಒಂದು ವಿಕೆಟ್ ಗಳಿಸಿದರು.
ಪ್ರಥಮ ಇನ್ನಿಂಗ್ಸ್ ನಲ್ಲಿ ಚೇತೇಶ್ವರ ಪೂಜಾರ 90,ಶ್ರೇಯಸ್ ಅಯ್ಯರ್ 86,ಆರ್.ಅಶ್ವಿನ್ 58,ರಿಷಬ್ ಪಂತ್ 46 ಮೂಲಕ ಭಾರತ 404 ಮೊತ್ತ ಕಲೆ ಹಾಕಿತು.
ದ್ವಿತೀಯ ಇನ್ನಿಂಗ್ಸ್ ನಲ್ಲೂ ನಾಯಕ ಕೆ.ಎಲ್.ರಾಹುಲ್ ಕೇವಲ 22 ರನ್ ಗಳಿಸಿ ಔಟಾಗುವದರೊಂದಿಗೆ ಮತ್ತೆ ನಿರಾಶೆ ಮೂಡಿಸಿದರು. ಆದರೆ ಆರಂಭಿಕ ದಾಂಡಿಗ ಶುಭಮನ್ ಗಿಲ್ 10 ಬೌಂಡರಿ,2 ಸಿಕ್ಸರ್ ನೆರವಿನೊಂದಿಗೆ 152 ಎಸೆತಗಳಲ್ಲಿ 110 ರನ್ ಗಳಿಸಿ ಔಟಾದರೆ, ಚೇತೇಶ್ವರ ಪೂಜಾರ 13 ಬೌಂಡರಿ ನೆರವಿನೊಂದಿಗೆ 130 ಎಸೆತಗಳಲ್ಲಿ ಔಟಾಗದೆ 102 ರನ್ ಗಳಿಸಿದರು. ನಾಯಕ ರಾಹುಲ್ 258/2 ಇನ್ನಿಂಗ್ಸ್ ಡಿಕ್ಲೇರ್ ಘೋಷಣೆಯೊಂದಿಗೆ ಬಾಂಗ್ಲಾಗೆ 512 ರನ್ ಗಳ ಕಠಿಣ ಟಾರ್ಗೆಟ್ ನೀಡಿದ್ದಾರೆ.
ದ್ವಿತೀಯ ಇನ್ನಿಂಗ್ಸ್ ನಲ್ಲಿ ಎಚ್ಚರಿಕೆಯ ಆಟ ಆರಂಭಿಸಿದ ಬಾಂಗ್ಲಾ ತಂಡ 12 ಓವರ್ ಗಳಲ್ಲಿ 42 ರನ್ ಕಲೆ ಹಾಕಿದೆ. ಇನ್ನೂ ಎರಡು ದಿನದ ಆಟ ಬಾಕಿ ಇದ್ದು ಬಾಂಗ್ಲಾ ಗೆಲ್ಲಲು 471 ರನ್ ಗಳಿಸ ಬೇಕಾಗಿದೆ. ಭಾರತ ಗೆಲ್ಲಲು 10 ವಿಕೆಟ್ ಕಬಳಿಸಬೇಕಾಗಿದೆ.

andolana

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

53 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago