ಕ್ರೀಡೆ

ಪೂಜಾರ, ಗಿಲ್ ಶತಕದಬ್ಬರ: ಭಾರತದ ಹಿಡಿತದಲ್ಲಿ ಟೆಸ್ಟ್

ಪೂಜಾರ, ಗಿಲ್ ಶತಕದಬ್ಬರ: ಭಾರತದ ಹಿಡಿತದಲ್ಲಿ ಟೆಸ್ಟ್
ಬಾಂಗ್ಲಾಗೆ 513 ರನ್ ಟಾರ್ಗೆಟ್, ಎರಡನೇ ಇನ್ನಿಂಗ್ಸ್ ನಲ್ಲಿ 258 ರನ್ ಪೇರಿಸಿದ ಭಾರತ

 

ಬಾಂಗ್ಲಾದೇಶ: ಬಾಂಗ್ಲಾದೇಶದ ಜಹೂರ್ ಅಹಮ್ಮದ್ ಚೌಧರಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪ್ರಥಮ ಟೆಸ್ಟ್ ನಲ್ಲಿ ಭಾರತವು ಬೌಲಿಂಗ್,ಬ್ಯಾಟಿಂಗ್  ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು ದ್ವಿತೀಯ ಇನ್ನಿಂಗ್ಸ್ ನಲ್ಲಿ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಹಾಗೂ ಅನುಭವಿ ದಾಂಡಿಗ ಚೇತೇಶ್ವರ ಪೂಜಾರ ಅಬ್ಬರದ ಶತಕದ ನೆರವಿನಿಂದ ಬಾಂಗ್ಲಾ ಗೆಲ್ಲಲು513    ರನ್ ಗಳ ಕಠಿಣ ಟಾರ್ಗೆಟ್ ನೀಡಿದೆ.


ಮೂರನೇ ದಿನದ ಅಂತ್ಯಕ್ಕೆ ಬಾಂಗ್ಲಾದೇಶ 12 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 42 ರನ್ ಗಳಿಸಿದೆ. ಇದಕ್ಕೂ ಮುನ್ನ ಭಾರತ ಪ್ರಥಮ ಇನ್ನಿಂಗ್ಸ್ ನಲ್ಲಿ 404 ರನ್ ಗಳಿಸಿದ್ದರೆ, ಬಾಂಗ್ಲಾ ತಂಡವು ಸ್ಪಿನ್ನರ್ ಕುಲದೀಪ್ ಯಾದವ್ (16-6-40-5 ) ಹಾಗೂ ವೇಗದ ಬೌಲರ್ ಸಿರಾಜ್ ಮಾರಕ ದಾಳಿಗೆ ( 13-2-20-3) ಸಿಲುಕಿ 150 ರನ್ ಗಳಿಗೆ ಸರ್ವ ಪತನವಾಯಿತು.ಅಕ್ಷರ್ ಪಟೇಲ್,ಉಮೇಶ್ ಯಾದವ್ ತಲಾ ಒಂದು ವಿಕೆಟ್ ಗಳಿಸಿದರು.
ಪ್ರಥಮ ಇನ್ನಿಂಗ್ಸ್ ನಲ್ಲಿ ಚೇತೇಶ್ವರ ಪೂಜಾರ 90,ಶ್ರೇಯಸ್ ಅಯ್ಯರ್ 86,ಆರ್.ಅಶ್ವಿನ್ 58,ರಿಷಬ್ ಪಂತ್ 46 ಮೂಲಕ ಭಾರತ 404 ಮೊತ್ತ ಕಲೆ ಹಾಕಿತು.
ದ್ವಿತೀಯ ಇನ್ನಿಂಗ್ಸ್ ನಲ್ಲೂ ನಾಯಕ ಕೆ.ಎಲ್.ರಾಹುಲ್ ಕೇವಲ 22 ರನ್ ಗಳಿಸಿ ಔಟಾಗುವದರೊಂದಿಗೆ ಮತ್ತೆ ನಿರಾಶೆ ಮೂಡಿಸಿದರು. ಆದರೆ ಆರಂಭಿಕ ದಾಂಡಿಗ ಶುಭಮನ್ ಗಿಲ್ 10 ಬೌಂಡರಿ,2 ಸಿಕ್ಸರ್ ನೆರವಿನೊಂದಿಗೆ 152 ಎಸೆತಗಳಲ್ಲಿ 110 ರನ್ ಗಳಿಸಿ ಔಟಾದರೆ, ಚೇತೇಶ್ವರ ಪೂಜಾರ 13 ಬೌಂಡರಿ ನೆರವಿನೊಂದಿಗೆ 130 ಎಸೆತಗಳಲ್ಲಿ ಔಟಾಗದೆ 102 ರನ್ ಗಳಿಸಿದರು. ನಾಯಕ ರಾಹುಲ್ 258/2 ಇನ್ನಿಂಗ್ಸ್ ಡಿಕ್ಲೇರ್ ಘೋಷಣೆಯೊಂದಿಗೆ ಬಾಂಗ್ಲಾಗೆ 512 ರನ್ ಗಳ ಕಠಿಣ ಟಾರ್ಗೆಟ್ ನೀಡಿದ್ದಾರೆ.
ದ್ವಿತೀಯ ಇನ್ನಿಂಗ್ಸ್ ನಲ್ಲಿ ಎಚ್ಚರಿಕೆಯ ಆಟ ಆರಂಭಿಸಿದ ಬಾಂಗ್ಲಾ ತಂಡ 12 ಓವರ್ ಗಳಲ್ಲಿ 42 ರನ್ ಕಲೆ ಹಾಕಿದೆ. ಇನ್ನೂ ಎರಡು ದಿನದ ಆಟ ಬಾಕಿ ಇದ್ದು ಬಾಂಗ್ಲಾ ಗೆಲ್ಲಲು 471 ರನ್ ಗಳಿಸ ಬೇಕಾಗಿದೆ. ಭಾರತ ಗೆಲ್ಲಲು 10 ವಿಕೆಟ್ ಕಬಳಿಸಬೇಕಾಗಿದೆ.

andolana

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

17 mins ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

31 mins ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

37 mins ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

1 hour ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

2 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

2 hours ago