ಕ್ರೀಡೆ

ಪೂಜಾರ, ಗಿಲ್ ಶತಕದಬ್ಬರ: ಭಾರತದ ಹಿಡಿತದಲ್ಲಿ ಟೆಸ್ಟ್

ಪೂಜಾರ, ಗಿಲ್ ಶತಕದಬ್ಬರ: ಭಾರತದ ಹಿಡಿತದಲ್ಲಿ ಟೆಸ್ಟ್
ಬಾಂಗ್ಲಾಗೆ 513 ರನ್ ಟಾರ್ಗೆಟ್, ಎರಡನೇ ಇನ್ನಿಂಗ್ಸ್ ನಲ್ಲಿ 258 ರನ್ ಪೇರಿಸಿದ ಭಾರತ

 

ಬಾಂಗ್ಲಾದೇಶ: ಬಾಂಗ್ಲಾದೇಶದ ಜಹೂರ್ ಅಹಮ್ಮದ್ ಚೌಧರಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪ್ರಥಮ ಟೆಸ್ಟ್ ನಲ್ಲಿ ಭಾರತವು ಬೌಲಿಂಗ್,ಬ್ಯಾಟಿಂಗ್  ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು ದ್ವಿತೀಯ ಇನ್ನಿಂಗ್ಸ್ ನಲ್ಲಿ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಹಾಗೂ ಅನುಭವಿ ದಾಂಡಿಗ ಚೇತೇಶ್ವರ ಪೂಜಾರ ಅಬ್ಬರದ ಶತಕದ ನೆರವಿನಿಂದ ಬಾಂಗ್ಲಾ ಗೆಲ್ಲಲು513    ರನ್ ಗಳ ಕಠಿಣ ಟಾರ್ಗೆಟ್ ನೀಡಿದೆ.


ಮೂರನೇ ದಿನದ ಅಂತ್ಯಕ್ಕೆ ಬಾಂಗ್ಲಾದೇಶ 12 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 42 ರನ್ ಗಳಿಸಿದೆ. ಇದಕ್ಕೂ ಮುನ್ನ ಭಾರತ ಪ್ರಥಮ ಇನ್ನಿಂಗ್ಸ್ ನಲ್ಲಿ 404 ರನ್ ಗಳಿಸಿದ್ದರೆ, ಬಾಂಗ್ಲಾ ತಂಡವು ಸ್ಪಿನ್ನರ್ ಕುಲದೀಪ್ ಯಾದವ್ (16-6-40-5 ) ಹಾಗೂ ವೇಗದ ಬೌಲರ್ ಸಿರಾಜ್ ಮಾರಕ ದಾಳಿಗೆ ( 13-2-20-3) ಸಿಲುಕಿ 150 ರನ್ ಗಳಿಗೆ ಸರ್ವ ಪತನವಾಯಿತು.ಅಕ್ಷರ್ ಪಟೇಲ್,ಉಮೇಶ್ ಯಾದವ್ ತಲಾ ಒಂದು ವಿಕೆಟ್ ಗಳಿಸಿದರು.
ಪ್ರಥಮ ಇನ್ನಿಂಗ್ಸ್ ನಲ್ಲಿ ಚೇತೇಶ್ವರ ಪೂಜಾರ 90,ಶ್ರೇಯಸ್ ಅಯ್ಯರ್ 86,ಆರ್.ಅಶ್ವಿನ್ 58,ರಿಷಬ್ ಪಂತ್ 46 ಮೂಲಕ ಭಾರತ 404 ಮೊತ್ತ ಕಲೆ ಹಾಕಿತು.
ದ್ವಿತೀಯ ಇನ್ನಿಂಗ್ಸ್ ನಲ್ಲೂ ನಾಯಕ ಕೆ.ಎಲ್.ರಾಹುಲ್ ಕೇವಲ 22 ರನ್ ಗಳಿಸಿ ಔಟಾಗುವದರೊಂದಿಗೆ ಮತ್ತೆ ನಿರಾಶೆ ಮೂಡಿಸಿದರು. ಆದರೆ ಆರಂಭಿಕ ದಾಂಡಿಗ ಶುಭಮನ್ ಗಿಲ್ 10 ಬೌಂಡರಿ,2 ಸಿಕ್ಸರ್ ನೆರವಿನೊಂದಿಗೆ 152 ಎಸೆತಗಳಲ್ಲಿ 110 ರನ್ ಗಳಿಸಿ ಔಟಾದರೆ, ಚೇತೇಶ್ವರ ಪೂಜಾರ 13 ಬೌಂಡರಿ ನೆರವಿನೊಂದಿಗೆ 130 ಎಸೆತಗಳಲ್ಲಿ ಔಟಾಗದೆ 102 ರನ್ ಗಳಿಸಿದರು. ನಾಯಕ ರಾಹುಲ್ 258/2 ಇನ್ನಿಂಗ್ಸ್ ಡಿಕ್ಲೇರ್ ಘೋಷಣೆಯೊಂದಿಗೆ ಬಾಂಗ್ಲಾಗೆ 512 ರನ್ ಗಳ ಕಠಿಣ ಟಾರ್ಗೆಟ್ ನೀಡಿದ್ದಾರೆ.
ದ್ವಿತೀಯ ಇನ್ನಿಂಗ್ಸ್ ನಲ್ಲಿ ಎಚ್ಚರಿಕೆಯ ಆಟ ಆರಂಭಿಸಿದ ಬಾಂಗ್ಲಾ ತಂಡ 12 ಓವರ್ ಗಳಲ್ಲಿ 42 ರನ್ ಕಲೆ ಹಾಕಿದೆ. ಇನ್ನೂ ಎರಡು ದಿನದ ಆಟ ಬಾಕಿ ಇದ್ದು ಬಾಂಗ್ಲಾ ಗೆಲ್ಲಲು 471 ರನ್ ಗಳಿಸ ಬೇಕಾಗಿದೆ. ಭಾರತ ಗೆಲ್ಲಲು 10 ವಿಕೆಟ್ ಕಬಳಿಸಬೇಕಾಗಿದೆ.

andolana

Recent Posts

ತುಮಕೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…

3 hours ago

ಅಗತ್ಯವಿದ್ದರೆ ಹುಚ್ಚು ಬೀದಿ ನಾಯಿಗಳನ್ನು ಕೊಲ್ಲಿ: ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…

3 hours ago

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…

5 hours ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

5 hours ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

6 hours ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

8 hours ago