ಕ್ರೀಡೆ

ಪೋರ್ಚುಗಲ್‌ ಸೋಲಿಸಿದ ಮೊರೊಕೊ ಸೆಮಿಫೈನಲ್‌ಗೆ

ಕತಾರ್: ಫಿಫಾ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿಯ ಮತ್ತೊಂದು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಶನಿವಾರ

ಮೊರೊಕೊ ತಂಡ 1-0 ಗೋಲಿನ ಅಂತರದಲ್ಲಿ ಪೋರ್ಚುಗಲ್ ತಂಡವನ್ನು ಮಣಿಸಿ ಸೆಮಿಫೈನಲ್ ತಲುಪಿತು.

ಈ ಮೂಲಕ ವಿಶ್ವಕಪ್ ಸೆಮಿಫೈನಲ್ ತಲುಪಿದ ಮೊದಲ ಆಫ್ರಿಕನ್ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

ಟೂರ್ನಿಯಲ್ಲಿ ಈಗಾಗಲೇ ಅಚ್ಚರಿಯ ಫಲಿತಾಂಶದಿಂದ ಸದ್ದು ಮಾಡಿರುವ ಮೊರೊಕೊ, ಅಲ್‌ ತುಮಾಮಾ ಕ್ರೀಡಾಂಗಣದಲ್ಲಿ ಗೆಲುವಿನ ಓಟ ಮುಂದುವರಿಸಿ ತನ್ನ ಕನಸನ್ನು ನನಸು ಮಾಡಿಕೊಂಡಿತು. 36 ವರ್ಷಗಳ ಹಿಂದೆ ಮೆಕ್ಸಿಕೊದಲ್ಲಿ ನಡೆದಿದ್ದ ಟೂರ್ನಿಯಲ್ಲಿ 16ರ ಘಟ್ಟ ಪ್ರವೇಶಿಸಿದ್ದ ಮೊರೊಕ್ಕೊ ಈ ಸಾಧನೆ ಮಾಡಿದ ಆಫ್ರಿಕಾದ ಮೊದಲ ದೇಶ ಎಂಬ ಗೌರವ ಪಡೆದುಕೊಂಡಿತ್ತು.

ಪಂದ್ಯದ ಆರಂಭದಿಂದಲೂ ಎರಡೂ ತಂಡಗಳು ಪೈಪೋಟಿಯ ಪ್ರದರ್ಶನ ನೀಡಿದವು.
ಯೂಸೆಫ್ ಎನ್ ನೇಸಿರಿ 42 ನೇ ನಿಮಿಷದಲ್ಲಿ ಪೋರ್ಚುಗಲ್ ಡಿಫೆಂಡರ್‌ಗಳ ರಕ್ಷಣಾ ಗೋಡೆ ಭೇದಿಸಿದರು.
ಗೋಲ್‌ಕೀಪರ್ ಡಿಯೊಗೊ ಕೋಸ್ಟಾ ನೇಸಿರಿ ಅವರ ಹಾರಾಟವನ್ನು ತಪ್ಪಾಗಿ ಪರಿಗಣಿಸಿದ್ದರಿಂದ ಚೆಂಡು ಗೋಲು ಫೋಸ್ಟ್ ಸೇರಿತು.
ಈ ಮಧ್ಯೆ ಪೋರ್ಚುಗಲ್ ಮೊರೊಕೊ ರಕ್ಷಣೆಯನ್ನು ಭೇದಿಸಲು ಹೆಣಗಾಡಿತು. ಮೊರೊಕೊ ಗೋಲು ಹೊಡೆದ ಸ್ವಲ್ಪ ಸಮಯದ ನಂತರ ಬ್ರೂನೋ ಫೆರ್ನಾಂಡಿಸ್ ಗೋಲು ಗಳಿಸಲು ಯತ್ನಿಸಿದರು. ಕ್ರಿಸ್ಟಿಯಾನೊ ರೊನಾಲ್ಡೊ ಸಹ ಪ್ರಯತ್ನಿಸಿದರು. ಆದರೆ ತಂಡಕ್ಕೆ ಸೋಲನ್ನು ತಪ್ಪಿಸಲು ಸಾಧ್ಯವಾಗಲಿಲ್ಲ.

ಸೆಮಿಫೈನಲ್ ನಲ್ಲಿ ಮೊರಾಕೊ ತಂಡ ಇಂಗ್ಲೆಂಡ್ ಅಥವಾ ಫ್ರಾನ್ಸ್‌ನೊಂದಿಗೆ ಸೆಮಿಫೈನಲ್ ಹಣಾಹಣಿ ನಡೆಸಲಿದೆ.

andolanait

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

3 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

7 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

7 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

7 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

7 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

8 hours ago