ಕ್ರೀಡೆ

ಪೋರ್ಚುಗಲ್‌ ಸೋಲಿಸಿದ ಮೊರೊಕೊ ಸೆಮಿಫೈನಲ್‌ಗೆ

ಕತಾರ್: ಫಿಫಾ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿಯ ಮತ್ತೊಂದು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಶನಿವಾರ

ಮೊರೊಕೊ ತಂಡ 1-0 ಗೋಲಿನ ಅಂತರದಲ್ಲಿ ಪೋರ್ಚುಗಲ್ ತಂಡವನ್ನು ಮಣಿಸಿ ಸೆಮಿಫೈನಲ್ ತಲುಪಿತು.

ಈ ಮೂಲಕ ವಿಶ್ವಕಪ್ ಸೆಮಿಫೈನಲ್ ತಲುಪಿದ ಮೊದಲ ಆಫ್ರಿಕನ್ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

ಟೂರ್ನಿಯಲ್ಲಿ ಈಗಾಗಲೇ ಅಚ್ಚರಿಯ ಫಲಿತಾಂಶದಿಂದ ಸದ್ದು ಮಾಡಿರುವ ಮೊರೊಕೊ, ಅಲ್‌ ತುಮಾಮಾ ಕ್ರೀಡಾಂಗಣದಲ್ಲಿ ಗೆಲುವಿನ ಓಟ ಮುಂದುವರಿಸಿ ತನ್ನ ಕನಸನ್ನು ನನಸು ಮಾಡಿಕೊಂಡಿತು. 36 ವರ್ಷಗಳ ಹಿಂದೆ ಮೆಕ್ಸಿಕೊದಲ್ಲಿ ನಡೆದಿದ್ದ ಟೂರ್ನಿಯಲ್ಲಿ 16ರ ಘಟ್ಟ ಪ್ರವೇಶಿಸಿದ್ದ ಮೊರೊಕ್ಕೊ ಈ ಸಾಧನೆ ಮಾಡಿದ ಆಫ್ರಿಕಾದ ಮೊದಲ ದೇಶ ಎಂಬ ಗೌರವ ಪಡೆದುಕೊಂಡಿತ್ತು.

ಪಂದ್ಯದ ಆರಂಭದಿಂದಲೂ ಎರಡೂ ತಂಡಗಳು ಪೈಪೋಟಿಯ ಪ್ರದರ್ಶನ ನೀಡಿದವು.
ಯೂಸೆಫ್ ಎನ್ ನೇಸಿರಿ 42 ನೇ ನಿಮಿಷದಲ್ಲಿ ಪೋರ್ಚುಗಲ್ ಡಿಫೆಂಡರ್‌ಗಳ ರಕ್ಷಣಾ ಗೋಡೆ ಭೇದಿಸಿದರು.
ಗೋಲ್‌ಕೀಪರ್ ಡಿಯೊಗೊ ಕೋಸ್ಟಾ ನೇಸಿರಿ ಅವರ ಹಾರಾಟವನ್ನು ತಪ್ಪಾಗಿ ಪರಿಗಣಿಸಿದ್ದರಿಂದ ಚೆಂಡು ಗೋಲು ಫೋಸ್ಟ್ ಸೇರಿತು.
ಈ ಮಧ್ಯೆ ಪೋರ್ಚುಗಲ್ ಮೊರೊಕೊ ರಕ್ಷಣೆಯನ್ನು ಭೇದಿಸಲು ಹೆಣಗಾಡಿತು. ಮೊರೊಕೊ ಗೋಲು ಹೊಡೆದ ಸ್ವಲ್ಪ ಸಮಯದ ನಂತರ ಬ್ರೂನೋ ಫೆರ್ನಾಂಡಿಸ್ ಗೋಲು ಗಳಿಸಲು ಯತ್ನಿಸಿದರು. ಕ್ರಿಸ್ಟಿಯಾನೊ ರೊನಾಲ್ಡೊ ಸಹ ಪ್ರಯತ್ನಿಸಿದರು. ಆದರೆ ತಂಡಕ್ಕೆ ಸೋಲನ್ನು ತಪ್ಪಿಸಲು ಸಾಧ್ಯವಾಗಲಿಲ್ಲ.

ಸೆಮಿಫೈನಲ್ ನಲ್ಲಿ ಮೊರಾಕೊ ತಂಡ ಇಂಗ್ಲೆಂಡ್ ಅಥವಾ ಫ್ರಾನ್ಸ್‌ನೊಂದಿಗೆ ಸೆಮಿಫೈನಲ್ ಹಣಾಹಣಿ ನಡೆಸಲಿದೆ.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

12 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

12 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

13 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

13 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

14 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

15 hours ago