ಕ್ರೀಡೆ

ಪ್ರಭಾಸ್‌ ನಟನೆಯ ಸಲಾರ್‌ ಮೊಲದ ದಿನದ ಗಳಿಕೆ 178 ಕೋಟಿ

ತೆಲುಗಿನ ಸ್ಟಾರ್‌ ನಟ ಪ್ರಭಾಸ್‌ ನಟನೆಯ, ಕೆಜಿಎಫ್‌ ಖ್ಯಾತಿಯ ನಿರ್ದೇಶಕ ಪ್ರಶಾಂತ್‌ ನೀಲ್‌ ನಿರ್ದೇಶನದ ಸಲಾರ್‌ ಚಿತ್ರ ಡಿಸೆಂಬರ್‌ 22 ರಂದು ಬಿಡುಗಡೆಯಾಗಿ ಜಾಗತಿಕ ಮಟ್ಟದಲ್ಲಿ ಭರ್ಜರಿ ಓಪನಿಂಗ್‌ ಕಂಡಿದ್ದು, ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದೆ.

ಸಲಾರ್‌ ಘರ್ಜನೆಗೆ ಹಲವಾರು ದಾಖಲೆಗಳು ಪುಡಿಪಡಿಯಾಗಿದ್ದು, ಈ ಚಿತ್ರ ಮೊಲದನೇ ದಿನ ಗಳಿಕೆಯಲ್ಲಿ ಬರೋಬ್ಬರಿ 178.7 ಕೋಟಿ ರೂಗಳನ್ನು ಬಾಚಿಕೊಂಡಿದೆ. ಈ ಬಗ್ಗೆ ಮಲಯಾಳಂ ನಟ ಪೃಥ್ವಿರಾಜ್‌ ಸಾಮಾಜಿಕ ಜಾಲತಾಣ ಎಕ್ಸ್‌ನಲಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಮತ್ತೊಮ್ಮ ಸಿನಿಮಾ ವಹಿವಾಟು ವಿಶ್ಲೇಷಕ ರಮೇಶ್‌ ಬಾಲಾ ಅವರು ಸಹಾ ಸಾಮಾಜಿಕ ಮಾಧ್ಯಮದಲ್ಲಿ ಸಲಾರ್‌ ವಹಿವಾಟು ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಸಲಾರ್‌ ಕೇವಲ ಭಾರತ ಮಾತ್ರವಲ್ಲದೇ ಯುರೋಪ್‌, ಅಮೇರಿಕಾ, ಆಸ್ಟ್ರೇಲಿಯಾ, ಅರಬ್‌ ದೇಶಗಳು ಸೇರಿದಂತೆ ಹಲವು ದೇಶಗಳಲ್ಲಿ ಭರ್ಜರಿ ಓಪನಿಂಗ್‌ ಪಡದುಕೊಂಡಿದೆ.

ಭಾರತದಲ್ಲಿ ಸಲಾರ್‌ ಮೊದಲ ದಿನ 95 ಕೋಟಿ ವಹಿವಾಟು ನಡೆಸಿದೆ. ಈ ಪೈಕಿ ತೆಲುಗಿನಲ್ಲಿ ಶೇ 80 ರಷ್ಟು ಗಳಿಕೆ ಕಂಡಿದೆ ಎಂದು ಮೂಲಗಳು ತಿಳಿಸಿವೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ 70 ಕೋಟಿ, ಕರ್ನಾಟಕದಲ್ಲಿ 12 ಕೋಟಿ, ಕೇರಳದಲ್ಲಿ 5 ಕೋಟಿ ಕಲೆಕ್ಷನ್‌ ಮಾಡಿದೆ.

ಶಾರುಖ್‌ ಖಾನ್‌ ನಟನೆಯ ಪಠಾಣ್‌, ಜವಾನ್‌ ಮತ್ತು ರಣಬೀರ್‌ ಕಪೂರ್‌ ನಟನೆಯ ಅನಿಮಲ್‌ ಸೋಲಿಸಿ ಈ ವರ್ಷದ ಅತಿದೊಡ್ಡ ಓಪನಿಂಗ್‌ ಪಡೆದ ಸಿನಿಮಾ ಎಂಬ ಖ್ಯಾತಿ ಪಡೆದಿದೆ.

ಭಾರತದಲ್ಲಿ ಪಠಾಣ್‌ 57 ಕೋಟಿ, ಜವಾನ್‌ 75ಕೋಟಿ, ಅನಿಮಲ್‌ 63 ಕೋಟಿ ಗಳಿಸಿತ್ತು. ಆದರೆ ಸಲಾರ್‌ ಮೊಲದ ದಿನದ ಗಳಿಕೆಯಲ್ಲಿ 95 ಕೋಟಿ ಗಳಿಸಿ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ.

ಹೊಂಬಾಳೆ ಫಿಲ್ಮಸ್‌ ಈ ಸಿನಿಮಾ ನಿರ್ಮಾಣ ಮಾಡಿದೆ. ಮುಖ್ಯ ಭೂಮಿಕೆಯಲ್ಲಿ ಪ್ರಭಾಸ್‌, ಪೃಥ್ವಿರಾಜ್‌, ಶೃತಿ ಹಾಸನ್‌ ಇದ್ದಾರೆ. ಕೆಜಿಎಫ್‌ ತಂಡವೇ ಇಲ್ಲಿಯೂ ಇದೆ. ರವಿ ಬಸ್ರೂರ್‌ ಸಂಗೀತ ನೀಡಿದರೇ, ಭೂವನ್‌ ಗೌಡ ಛಾಯಾಗ್ರಹಣವಿದೆ. ಇನ್ನೂ ಪ್ರಶಾತ್‌ ನೀಲ್‌ ಸಲಾರ್‌ ಚಿತ್ರ ನಿರ್ದೇಶಿಸಿದ್ದಾರೆ.

https://x.com/PrithviOfficial/status/1738488526155751659?s=20

andolanait

Recent Posts

ನಾಳೆಯಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರ: ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್‌

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ…

22 mins ago

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…

2 hours ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…

2 hours ago

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

3 hours ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

3 hours ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

3 hours ago