ಕ್ರೀಡೆ

ಪ್ರಭಾಸ್‌ ನಟನೆಯ ಸಲಾರ್‌ ಮೊಲದ ದಿನದ ಗಳಿಕೆ 178 ಕೋಟಿ

ತೆಲುಗಿನ ಸ್ಟಾರ್‌ ನಟ ಪ್ರಭಾಸ್‌ ನಟನೆಯ, ಕೆಜಿಎಫ್‌ ಖ್ಯಾತಿಯ ನಿರ್ದೇಶಕ ಪ್ರಶಾಂತ್‌ ನೀಲ್‌ ನಿರ್ದೇಶನದ ಸಲಾರ್‌ ಚಿತ್ರ ಡಿಸೆಂಬರ್‌ 22 ರಂದು ಬಿಡುಗಡೆಯಾಗಿ ಜಾಗತಿಕ ಮಟ್ಟದಲ್ಲಿ ಭರ್ಜರಿ ಓಪನಿಂಗ್‌ ಕಂಡಿದ್ದು, ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದೆ.

ಸಲಾರ್‌ ಘರ್ಜನೆಗೆ ಹಲವಾರು ದಾಖಲೆಗಳು ಪುಡಿಪಡಿಯಾಗಿದ್ದು, ಈ ಚಿತ್ರ ಮೊಲದನೇ ದಿನ ಗಳಿಕೆಯಲ್ಲಿ ಬರೋಬ್ಬರಿ 178.7 ಕೋಟಿ ರೂಗಳನ್ನು ಬಾಚಿಕೊಂಡಿದೆ. ಈ ಬಗ್ಗೆ ಮಲಯಾಳಂ ನಟ ಪೃಥ್ವಿರಾಜ್‌ ಸಾಮಾಜಿಕ ಜಾಲತಾಣ ಎಕ್ಸ್‌ನಲಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಮತ್ತೊಮ್ಮ ಸಿನಿಮಾ ವಹಿವಾಟು ವಿಶ್ಲೇಷಕ ರಮೇಶ್‌ ಬಾಲಾ ಅವರು ಸಹಾ ಸಾಮಾಜಿಕ ಮಾಧ್ಯಮದಲ್ಲಿ ಸಲಾರ್‌ ವಹಿವಾಟು ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಸಲಾರ್‌ ಕೇವಲ ಭಾರತ ಮಾತ್ರವಲ್ಲದೇ ಯುರೋಪ್‌, ಅಮೇರಿಕಾ, ಆಸ್ಟ್ರೇಲಿಯಾ, ಅರಬ್‌ ದೇಶಗಳು ಸೇರಿದಂತೆ ಹಲವು ದೇಶಗಳಲ್ಲಿ ಭರ್ಜರಿ ಓಪನಿಂಗ್‌ ಪಡದುಕೊಂಡಿದೆ.

ಭಾರತದಲ್ಲಿ ಸಲಾರ್‌ ಮೊದಲ ದಿನ 95 ಕೋಟಿ ವಹಿವಾಟು ನಡೆಸಿದೆ. ಈ ಪೈಕಿ ತೆಲುಗಿನಲ್ಲಿ ಶೇ 80 ರಷ್ಟು ಗಳಿಕೆ ಕಂಡಿದೆ ಎಂದು ಮೂಲಗಳು ತಿಳಿಸಿವೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ 70 ಕೋಟಿ, ಕರ್ನಾಟಕದಲ್ಲಿ 12 ಕೋಟಿ, ಕೇರಳದಲ್ಲಿ 5 ಕೋಟಿ ಕಲೆಕ್ಷನ್‌ ಮಾಡಿದೆ.

ಶಾರುಖ್‌ ಖಾನ್‌ ನಟನೆಯ ಪಠಾಣ್‌, ಜವಾನ್‌ ಮತ್ತು ರಣಬೀರ್‌ ಕಪೂರ್‌ ನಟನೆಯ ಅನಿಮಲ್‌ ಸೋಲಿಸಿ ಈ ವರ್ಷದ ಅತಿದೊಡ್ಡ ಓಪನಿಂಗ್‌ ಪಡೆದ ಸಿನಿಮಾ ಎಂಬ ಖ್ಯಾತಿ ಪಡೆದಿದೆ.

ಭಾರತದಲ್ಲಿ ಪಠಾಣ್‌ 57 ಕೋಟಿ, ಜವಾನ್‌ 75ಕೋಟಿ, ಅನಿಮಲ್‌ 63 ಕೋಟಿ ಗಳಿಸಿತ್ತು. ಆದರೆ ಸಲಾರ್‌ ಮೊಲದ ದಿನದ ಗಳಿಕೆಯಲ್ಲಿ 95 ಕೋಟಿ ಗಳಿಸಿ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ.

ಹೊಂಬಾಳೆ ಫಿಲ್ಮಸ್‌ ಈ ಸಿನಿಮಾ ನಿರ್ಮಾಣ ಮಾಡಿದೆ. ಮುಖ್ಯ ಭೂಮಿಕೆಯಲ್ಲಿ ಪ್ರಭಾಸ್‌, ಪೃಥ್ವಿರಾಜ್‌, ಶೃತಿ ಹಾಸನ್‌ ಇದ್ದಾರೆ. ಕೆಜಿಎಫ್‌ ತಂಡವೇ ಇಲ್ಲಿಯೂ ಇದೆ. ರವಿ ಬಸ್ರೂರ್‌ ಸಂಗೀತ ನೀಡಿದರೇ, ಭೂವನ್‌ ಗೌಡ ಛಾಯಾಗ್ರಹಣವಿದೆ. ಇನ್ನೂ ಪ್ರಶಾತ್‌ ನೀಲ್‌ ಸಲಾರ್‌ ಚಿತ್ರ ನಿರ್ದೇಶಿಸಿದ್ದಾರೆ.

https://x.com/PrithviOfficial/status/1738488526155751659?s=20

andolanait

Recent Posts

ಬಂಧನದಲ್ಲಿರುವ ಮುನಿರತ್ನ ಆರೋಗ್ಯದಲ್ಲಿ ದಿಢೀರ್‌ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…

1 hour ago

ದಸರಾ ಚಲನಚಿತ್ರೋತ್ಸವ- 2024| ಉತ್ತಮ ಕಿರುಚಿತ್ರ ಆಯ್ಕೆಗೆ ಪರಿಣಿತರಿಂದ ವೀಕ್ಷಣೆ

ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…

2 hours ago

ಮೈಶುಗರ್: 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲು ಯಾವುದೇ ತೊಂದರೆ ಇಲ್ಲ: ಡಾ: ಹೆಚ್.ಎಲ್ ನಾಗರಾಜು

ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಆನೆ ಸಾವು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…

2 hours ago

ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ…

3 hours ago

ಜೊತೆಗಿದ್ದ ಯುವತಿಗೆ ಲೈಂಗಿಕ ಕಿರುಕುಳ: ಕೊರಿಯೋಗ್ರಾಫರ್‌ ವಿರುದ್ಧ ದೂರು ದಾಖಲು

ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್‌ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್‌ ನಟರಿಗೆ ಕೊರಿಯೋಗ್ರಾಫರ್‌ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್‌…

3 hours ago