ತೆಲುಗಿನ ಸ್ಟಾರ್ ನಟ ಪ್ರಭಾಸ್ ನಟನೆಯ, ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರ ಡಿಸೆಂಬರ್ 22 ರಂದು ಬಿಡುಗಡೆಯಾಗಿ ಜಾಗತಿಕ ಮಟ್ಟದಲ್ಲಿ ಭರ್ಜರಿ ಓಪನಿಂಗ್ ಕಂಡಿದ್ದು, ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದೆ.
ಸಲಾರ್ ಘರ್ಜನೆಗೆ ಹಲವಾರು ದಾಖಲೆಗಳು ಪುಡಿಪಡಿಯಾಗಿದ್ದು, ಈ ಚಿತ್ರ ಮೊಲದನೇ ದಿನ ಗಳಿಕೆಯಲ್ಲಿ ಬರೋಬ್ಬರಿ 178.7 ಕೋಟಿ ರೂಗಳನ್ನು ಬಾಚಿಕೊಂಡಿದೆ. ಈ ಬಗ್ಗೆ ಮಲಯಾಳಂ ನಟ ಪೃಥ್ವಿರಾಜ್ ಸಾಮಾಜಿಕ ಜಾಲತಾಣ ಎಕ್ಸ್ನಲಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಮತ್ತೊಮ್ಮ ಸಿನಿಮಾ ವಹಿವಾಟು ವಿಶ್ಲೇಷಕ ರಮೇಶ್ ಬಾಲಾ ಅವರು ಸಹಾ ಸಾಮಾಜಿಕ ಮಾಧ್ಯಮದಲ್ಲಿ ಸಲಾರ್ ವಹಿವಾಟು ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಸಲಾರ್ ಕೇವಲ ಭಾರತ ಮಾತ್ರವಲ್ಲದೇ ಯುರೋಪ್, ಅಮೇರಿಕಾ, ಆಸ್ಟ್ರೇಲಿಯಾ, ಅರಬ್ ದೇಶಗಳು ಸೇರಿದಂತೆ ಹಲವು ದೇಶಗಳಲ್ಲಿ ಭರ್ಜರಿ ಓಪನಿಂಗ್ ಪಡದುಕೊಂಡಿದೆ.
ಭಾರತದಲ್ಲಿ ಸಲಾರ್ ಮೊದಲ ದಿನ 95 ಕೋಟಿ ವಹಿವಾಟು ನಡೆಸಿದೆ. ಈ ಪೈಕಿ ತೆಲುಗಿನಲ್ಲಿ ಶೇ 80 ರಷ್ಟು ಗಳಿಕೆ ಕಂಡಿದೆ ಎಂದು ಮೂಲಗಳು ತಿಳಿಸಿವೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ 70 ಕೋಟಿ, ಕರ್ನಾಟಕದಲ್ಲಿ 12 ಕೋಟಿ, ಕೇರಳದಲ್ಲಿ 5 ಕೋಟಿ ಕಲೆಕ್ಷನ್ ಮಾಡಿದೆ.
ಶಾರುಖ್ ಖಾನ್ ನಟನೆಯ ಪಠಾಣ್, ಜವಾನ್ ಮತ್ತು ರಣಬೀರ್ ಕಪೂರ್ ನಟನೆಯ ಅನಿಮಲ್ ಸೋಲಿಸಿ ಈ ವರ್ಷದ ಅತಿದೊಡ್ಡ ಓಪನಿಂಗ್ ಪಡೆದ ಸಿನಿಮಾ ಎಂಬ ಖ್ಯಾತಿ ಪಡೆದಿದೆ.
ಭಾರತದಲ್ಲಿ ಪಠಾಣ್ 57 ಕೋಟಿ, ಜವಾನ್ 75ಕೋಟಿ, ಅನಿಮಲ್ 63 ಕೋಟಿ ಗಳಿಸಿತ್ತು. ಆದರೆ ಸಲಾರ್ ಮೊಲದ ದಿನದ ಗಳಿಕೆಯಲ್ಲಿ 95 ಕೋಟಿ ಗಳಿಸಿ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ.
ಹೊಂಬಾಳೆ ಫಿಲ್ಮಸ್ ಈ ಸಿನಿಮಾ ನಿರ್ಮಾಣ ಮಾಡಿದೆ. ಮುಖ್ಯ ಭೂಮಿಕೆಯಲ್ಲಿ ಪ್ರಭಾಸ್, ಪೃಥ್ವಿರಾಜ್, ಶೃತಿ ಹಾಸನ್ ಇದ್ದಾರೆ. ಕೆಜಿಎಫ್ ತಂಡವೇ ಇಲ್ಲಿಯೂ ಇದೆ. ರವಿ ಬಸ್ರೂರ್ ಸಂಗೀತ ನೀಡಿದರೇ, ಭೂವನ್ ಗೌಡ ಛಾಯಾಗ್ರಹಣವಿದೆ. ಇನ್ನೂ ಪ್ರಶಾತ್ ನೀಲ್ ಸಲಾರ್ ಚಿತ್ರ ನಿರ್ದೇಶಿಸಿದ್ದಾರೆ.
https://x.com/PrithviOfficial/status/1738488526155751659?s=20
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…