ಕ್ರೀಡೆ

ಪ್ರಜ್ಞಾನಂದ ತಾಯಿಯೊಂದಿಗಿದ್ದ ಫೋಟೊ ವೈರಲ್: ಟ್ವಿಟರ್ ನಲ್ಲಿ 3.9 ಮಿಲಿಯನ್ ಜನರಿಂದ ವೀಕ್ಷಣೆ

ಚೆನ್ನೈ: ಭಾರತದ ಚೆಸ್ ಚತುರ ಆರ್. ಪ್ರಜ್ಞಾನಂದ ಅವರು FIDE ಚೆಸ್ ವಿಶ್ವಕಪ್‌ಗೆ ಅರ್ಹತೆ ಗಳಿಸಿ ಫೈನಲ್ ನಲ್ಲಿ ವಿಶ್ವದ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನು ಎದುರಿಸುವ ಮೂಲಕ ಇಡೀ ದೇಶದಲ್ಲಿ ಮನೆ ಮಾತಾಗಿದ್ದಾರೆ.

ಪಂದ್ಯಾವಳಿಯ ಉದ್ದಕ್ಕೂ, ಕೇವಲ 18 ವರ್ಷದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯ ಕೇಂದ್ರ ಬಿಂದುವಾಗಿರಲಿಲ್ಲ,ಅಝರ್ ಬೈಜಾನ್‌ನ ಬಾಕುನಲ್ಲಿ ನಡೆದ ಈವೆಂಟ್‌ ಗೆ ಅವರೊಂದಿಗೆ ಬಂದಿದ್ದ ಅವರ ತಾಯಿ ಕೂಡ ಆಕರ್ಷಣೆಯ ಕೇಂದ್ರ ಬಿಂದುವಾದರು. ವಾಸ್ತವವಾಗಿ, ಪ್ರಜ್ಞಾನಂದರ ತಾಯಿಯ ಕೆಲವು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಅದರಲ್ಲಿ ಒಂದು ಚಿತ್ರ ಈಗಾಗಲೇ ಟ್ವಿಟರ್‌ನಲ್ಲಿ (ಈಗ X) 3.9 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ.

ಈ ಚಿತ್ರವನ್ನು ಚೆಸ್ ಛಾಯಾಗ್ರಾಹಕಿ ಮರಿಯಾ ಎಮೆಲಿಯಾನೋವಾ ಕ್ಲಿಕ್ಕಿಸಿದ್ದಾರೆ. ಫೋಟೊವನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿರುವ ಅವರು “ಲೆಜೆಂಡ್ ಹಾಗೂ ಅವರ ಮಗನೊಂದಿಗೆ ಸೆಲ್ಫಿ ತೆಗೆದುಕೊಂಡಿರುವೆ” ಎಂದು ಬರೆದಿದ್ದಾರೆ.

ಈ ಪೋಸ್ಟ್ ಅನ್ನು ಹಂಚಿಕೊಂಡಿರುವ ಪ್ರಜ್ಞಾನಂದ ಅವರು ಬೆಂಕಿ ಹಾಗೂ ಪ್ರೀತಿಯ ಸಂಕೇತ ಹಾಕಿ ಧನ್ಯವಾದಗಳು ಎಂದು ಬರೆದಿದ್ದಾರೆ.

ಟೈ-ಬ್ರೇಕರ್‌ ನಲ್ಲಿ ಮ್ಯಾಗ್ನಸ್ ಕಾರ್ಲ್‌ಸೆನ್‌ ವಿರುದ್ದ ಫೈನಲ್‌ನಲ್ಲಿ ಸೋತಿದ್ದರಿಂದ ಪ್ರ ಜ್ಞಾನಂದ ಅವರು ಪಂದ್ಯಾವಳಿಯಲ್ಲಿ ರನ್ನರ್ಸ್ ಅಪ್ ಆಗಿದ್ದರು.

andolanait

Recent Posts

ಮಲೆ ಮಹದೇಶ್ವರದಲ್ಲಿ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…

52 mins ago

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

6 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

6 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

6 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

6 hours ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

6 hours ago