ಕ್ರೀಡೆ

ಶಮಿಯನ್ನು ತಬ್ಬಿ ಸಂತೈಸಿದ ಪ್ರಧಾನಿ: ಫೋಟೋ ವೈರಲ್‌

ಅಹ್ಮದಾಬಾದ್‌ : ಐಸಿಸಿ ವಿಶ್ವಕಪ್‌ ಉದ್ದಕ್ಕೂ ದಿಟ್ಟ ಪ್ರದರ್ಶನ ತೋರಿದ ಭಾರತ ತಂಡ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟ್ರೋಫಿ ಗೆಲ್ಲುವಲ್ಲಿ ವಿಫಲವಾಯಿತು. ಆಸೀಸ್‌ ೬ನೇ ಟ್ರೋಫಿಗೆ ಮುತ್ತಿಕ್ಕಿತ್ತು.

೨೦೧೫ರ ನಂತರ ಆಸ್ಟ್ರೇಲಿಯಾ ತಂಡ ಮತ್ತೊಮ್ಮೆ ವಿಶ್ವಕಪ್‌ ಗೆದ್ದು ಬೀಗಿತು.

ಭಾರತ ಹೀನಾಯ ಸೋಲು ಕಂಡ ಬೆನ್ನಲ್ಲೇ ಬೌಲಿಂಗ್‌ ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಭಾರತದ ಸ್ಠಾರ್‌ ಆಟಗಾರ ಮಹಮದ್‌ ಶಮಿ ಭಾರತ ಪ್ರಧಾನಿ ಮಂತ್ರಿ ನರೇಂದ್ರ ಮೋದಿ  ಜೊತೆಗಿನ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿ ಈ ಚಿತ್ರದಲ್ಲಿ ಪ್ರಧಾನಿ ಶಮಿಯನ್ನು ಸಂತೈಸುತ್ತಿರುವುದನ್ನು ನಾವು ಕಾಣಬಹುದಾಗಿದೆ.

ದುರದೃಷ್ಟವಶಾತ್ ನಿನ್ನೆ ನಮ್ಮ ದಿನವಾಗಿರಲಿಲ್ಲ. ಪಂದ್ಯಾವಳಿಯುದ್ದಕ್ಕೂ ನಮ್ಮ ತಂಡ ಮತ್ತು ನನ್ನನ್ನು ಬೆಂಬಲಿಸಿದ್ದಕ್ಕಾಗಿ ನಾನು ಎಲ್ಲಾ ಭಾರತೀಯರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನಮ್ಮ ಡ್ರೆಸ್ಸಿಂಗ್‌ ರೂಮ್‌ಗೆ ಬಂದು ನಮ್ಮನ್ನು ಸಂತೈಸಿದಕ್ಕಾಗಿ ಪಿಎಂ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

https://x.com/MdShami11/status/1726534405672603840?s=20

ಆರನೇ ಬಾರಿಗೆ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ
ಫೈನಲ್‌ನಲ್ಲಿ ಟೀಂ ಇಂಡಿಯಾವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಆಸ್ಟ್ರೇಲಿಯಾ ಪ್ರಶಸ್ತಿ ಗೆದ್ದಿದೆ. ಆಸ್ಟ್ರೇಲಿಯಾ ಗೆಲುವಿಗೆ 241 ರನ್‌ಗಳ ಗುರಿ ಇತ್ತು. ಆಸ್ಟ್ರೇಲಿಯಾ 43 ಓವರ್‌ಗಳಲ್ಲಿ 4 ವಿಕೆಟ್‌ಗೆ 241 ರನ್ ಗಳಿಸುವ ಮೂಲಕ ಆರನೇ ಬಾರಿಗೆ ವಿಶ್ವಕಪ್ ಟ್ರೋಫಿಯನ್ನು ಗೆದ್ದುಕೊಂಡಿತು. ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಆಸ್ಟ್ರೇಲಿಯದ ಗೆಲುವಿನ ಹೀರೋ ಆಗಿದ್ದರು. ಟ್ರಾವಿಸ್ ಹೆಡ್ 120 ಎಸೆತಗಳಲ್ಲಿ 137 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಅವರು ತಮ್ಮ ಇನ್ನಿಂಗ್ಸ್‌ನಲ್ಲಿ 15 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಹೊಡೆದರು. ಈ ಅದ್ಭುತ ಇನ್ನಿಂಗ್ಸ್‌ಗಾಗಿ ಟ್ರಾವಿಸ್ ಹೆಡ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

andolanait

Recent Posts

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

43 mins ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

46 mins ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

47 mins ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

49 mins ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

52 mins ago

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…

54 mins ago