ಕ್ರೀಡೆ

ಶಮಿಯನ್ನು ತಬ್ಬಿ ಸಂತೈಸಿದ ಪ್ರಧಾನಿ: ಫೋಟೋ ವೈರಲ್‌

ಅಹ್ಮದಾಬಾದ್‌ : ಐಸಿಸಿ ವಿಶ್ವಕಪ್‌ ಉದ್ದಕ್ಕೂ ದಿಟ್ಟ ಪ್ರದರ್ಶನ ತೋರಿದ ಭಾರತ ತಂಡ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟ್ರೋಫಿ ಗೆಲ್ಲುವಲ್ಲಿ ವಿಫಲವಾಯಿತು. ಆಸೀಸ್‌ ೬ನೇ ಟ್ರೋಫಿಗೆ ಮುತ್ತಿಕ್ಕಿತ್ತು.

೨೦೧೫ರ ನಂತರ ಆಸ್ಟ್ರೇಲಿಯಾ ತಂಡ ಮತ್ತೊಮ್ಮೆ ವಿಶ್ವಕಪ್‌ ಗೆದ್ದು ಬೀಗಿತು.

ಭಾರತ ಹೀನಾಯ ಸೋಲು ಕಂಡ ಬೆನ್ನಲ್ಲೇ ಬೌಲಿಂಗ್‌ ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಭಾರತದ ಸ್ಠಾರ್‌ ಆಟಗಾರ ಮಹಮದ್‌ ಶಮಿ ಭಾರತ ಪ್ರಧಾನಿ ಮಂತ್ರಿ ನರೇಂದ್ರ ಮೋದಿ  ಜೊತೆಗಿನ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿ ಈ ಚಿತ್ರದಲ್ಲಿ ಪ್ರಧಾನಿ ಶಮಿಯನ್ನು ಸಂತೈಸುತ್ತಿರುವುದನ್ನು ನಾವು ಕಾಣಬಹುದಾಗಿದೆ.

ದುರದೃಷ್ಟವಶಾತ್ ನಿನ್ನೆ ನಮ್ಮ ದಿನವಾಗಿರಲಿಲ್ಲ. ಪಂದ್ಯಾವಳಿಯುದ್ದಕ್ಕೂ ನಮ್ಮ ತಂಡ ಮತ್ತು ನನ್ನನ್ನು ಬೆಂಬಲಿಸಿದ್ದಕ್ಕಾಗಿ ನಾನು ಎಲ್ಲಾ ಭಾರತೀಯರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನಮ್ಮ ಡ್ರೆಸ್ಸಿಂಗ್‌ ರೂಮ್‌ಗೆ ಬಂದು ನಮ್ಮನ್ನು ಸಂತೈಸಿದಕ್ಕಾಗಿ ಪಿಎಂ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

https://x.com/MdShami11/status/1726534405672603840?s=20

ಆರನೇ ಬಾರಿಗೆ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ
ಫೈನಲ್‌ನಲ್ಲಿ ಟೀಂ ಇಂಡಿಯಾವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಆಸ್ಟ್ರೇಲಿಯಾ ಪ್ರಶಸ್ತಿ ಗೆದ್ದಿದೆ. ಆಸ್ಟ್ರೇಲಿಯಾ ಗೆಲುವಿಗೆ 241 ರನ್‌ಗಳ ಗುರಿ ಇತ್ತು. ಆಸ್ಟ್ರೇಲಿಯಾ 43 ಓವರ್‌ಗಳಲ್ಲಿ 4 ವಿಕೆಟ್‌ಗೆ 241 ರನ್ ಗಳಿಸುವ ಮೂಲಕ ಆರನೇ ಬಾರಿಗೆ ವಿಶ್ವಕಪ್ ಟ್ರೋಫಿಯನ್ನು ಗೆದ್ದುಕೊಂಡಿತು. ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಆಸ್ಟ್ರೇಲಿಯದ ಗೆಲುವಿನ ಹೀರೋ ಆಗಿದ್ದರು. ಟ್ರಾವಿಸ್ ಹೆಡ್ 120 ಎಸೆತಗಳಲ್ಲಿ 137 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಅವರು ತಮ್ಮ ಇನ್ನಿಂಗ್ಸ್‌ನಲ್ಲಿ 15 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಹೊಡೆದರು. ಈ ಅದ್ಭುತ ಇನ್ನಿಂಗ್ಸ್‌ಗಾಗಿ ಟ್ರಾವಿಸ್ ಹೆಡ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

andolanait

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

53 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

58 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

1 hour ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

1 hour ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

10 hours ago