ಕ್ರೀಡೆ

ಟೀಂ ಇಂಡಿಯಾ ಡ್ರೆಸ್ಸಿಂಗ್‌ ರೂಂನಲ್ಲಿ ಪ್ರಧಾನಿ: ಮೆಚ್ಚುಗೆ ವ್ಯಕ್ತಪಡಿಸಿದ ಮಾಜಿ ಕೋಚ್‌

ಮುಂಬೈ : ಏಕದಿನ ವಿಶ್ವಕಪ್‌-೨೦೨೩ರ ಫೈನಲ್‌ನ ಸೋಲಿನ ನಂತರ ಭಾರತ ತಂಡದ ಡ್ರೆಸ್ಸಿಂಗ್‌ ರೂಂಗೆ ಭೇಟಿ ನೀಡಿ, ಟೀಮ್‌ ಇಂಡಿಯಾ ಆಟಗಾರರನ್ನು ಸಾಂತ್ವಾನಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ನಡೆಯನ್ನು ಭಾರತ ತಂದಡ ಮಾಜಿ ಕೋಚ್‌ ರವಿಶಾಸ್ತ್ರಿ ಮುಕ್ತ ಕಂಠದಿಂದ ಹೊಗಳಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ಅವರು,”‘ಡ್ರೆಸ್ಸಿಂಗ್ ರೂಮ್ ಹೇಗಿರುತ್ತದೆ ಎಂಬುದು ನನಗೆ ತಿಳಿದಿರುವ ಕಾರಣದಿಂದ ಇದು ಅತ್ಯಂತ ಮಹತ್ವದ ವಿಚಾರ ಎಂದು ನಾನು ಭಾವಿಸುತ್ತೇನೆ ಮತ್ತು ನಾನು ಕ್ರಿಕೆಟಿಗನಾಗಿ ಹಲವು ವರ್ಷಗಳಿಂದ, ಭಾರತದ ತರಬೇತುದಾರನಾಗಿ ಏಳು ವರ್ಷಗಳಿಗೂ ಹೆಚ್ಚು ಕಾಲ ಆ ಡ್ರೆಸ್ಸಿಂಗ್ ರೂಮ್‌ನಲ್ಲಿದ್ದೇನೆ”. ಒಂದು ದೇಶದ ಪ್ರಧಾನಿಯಾಗಿರುವಾಗ ಡ್ರೆಸ್ಸಿಂಗ್ ರೂಮ್‌ಗೆ ಕಾಲಿಡುವುದು ವಿಶೇಷವಾದ ನಡವಳಿಕೆ. ಇಂತಹ ಸಮಯದಲ್ಲಿ ಆಟಗಾರರಿಗೆ ಏನು ಅನಿಸುತ್ತದೆ ಎಂಬುದು ತಂಡದ ಮಾಜಿ ಕೋಚ್ ಆಗಿದ್ದ ನನಗೆ ತಿಳಿದಿದೆ

ಇದು ಕರುಳು ಹಿಂಡುವ ಭಾವನೆ ಮತ್ತು ನೀವು ಸೋಲಿನಿಂದಾಗಿ ಕಂಗೆಟ್ಟಿರುವಾಗ ಅದೊಂತರ ವಿಚಿತ್ರವಾದ ಭಾವನೆ ನಿಮ್ಮನ್ನು ಆವರಿಸಿರುತ್ತದೆ. ಇಂತಹ ಸಯಮದಲ್ಲಿ ಡ್ರೆಸ್ಸಿಂಗ್ ರೂಮ್‌ಗೆ ದೇಶದ ಪ್ರಧಾನಿಯಾದಂತವರು ಭೇಟಿ ನೀಡಿದಾಗ, ಅದು ದೊಡ್ಡ ವಿಚಾರವಾಗಿರುತ್ತದೆ. ಏಕೆಂದರೆ, ಅದು ಆಟಗಾರರ ಉತ್ಸಾಹವನ್ನು ಹೆಚ್ಚಿಸುತ್ತದೆ’ ಎಂದು ಪ್ರಧಾನಿ ನಡೆಯನ್ನು ರವಿಶಾಸ್ತ್ರಿ ಕೊಂಡಾಡಿದ್ದಾರೆ.

ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನ.೧೯ ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಐಸಿಸಿ ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಭಾರತ ತಂಡ ಬ್ಯಾಟಿಂಗ್‌ ಹಾಗೂ ಬೌಲಂಗ್‌ ಎರಡು ವಿಭಾಗದಲ್ಲಿಯೂ ವೈಫಲ್ಯ ಕಂಡು ಆಸೀಸ್‌ ವಿರುದ್ದ ೬ ವಿಕೆಟ್‌ಗಳಿಂದ ಸೋತಿತ್ತು. ಆಸೀಸ್‌ ತಮ್ಮ ೬ನೇ ಟ್ರೋಫಿಗೆ ಮುತ್ತಿಕ್ಕಿತ್ತು.

ಫೈನಲ್‌ ಪಂದ್ಯ ವೀಕ್ಷಣೆಗೆ ಹಲವಾರು ಗಣ್ಯರು ಹಾಗೂ ಚಲನಚಿತ್ರ ನಟರು ಆಗಮಿಸಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಪಂದ್ಯ ವೀಕ್ಷಣೆಗೆ ಆಗಮಿಸಿದ್ದರು. ಆಸೀಸ್‌ ತಂಡಕ್ಕೆ ಪ್ರಶಸ್ತಿ ನೀಡಿ ನಂತರ ಭಾರತ ತಂಡದ ಡ್ರೆಸ್ಸಿಂಗ್‌ ರೂಂಗೆ ಬಂದ ಪ್ರಧಾನಿ ಮೋದಿ, ಅವರೊಂದಿಗೆ ಕೆಲಕಾಲ ಕಳೆದು, ಸಂವಹನ ನಡೆಸಿ ಆಟಗಾರರಿಗೆ ಧೈರ್ಯ ತುಂಬಿದ್ದರು.

https://x.com/ANI/status/1727995687705735391?s=20

andolanait

Recent Posts

ಈಶಾ ಫೌಂಡೇಶನ್‌ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್‌ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…

2 hours ago

ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಮತ್ತೆ ವಾಗ್ದಾಳಿ

ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ…

3 hours ago

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನಕ್ಕೆ ಭಾರತದ ಪ್ರತಿನಿಧಿಯಾಗಿ ಸ್ಪೀಕರ್‌ ಓಂ ಬಿರ್ಲಾ

ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್‌ ರೆಹಮಾನ್‌ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್‌…

3 hours ago

ಕೆನಡಾದಲ್ಲಿ ಹತ್ಯೆಯಾಗಿದ್ದ ಐಟಿ ಉದ್ಯೋಗಿ ಚಂದನ್‌ ಮೃತದೇಹ ಸ್ವಗ್ರಾಮಕ್ಕೆ

ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್‌ ಕುಮಾರ್‌ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್‌…

3 hours ago

ಕೋಲಾರದಲ್ಲಿ ನಾಳೆ ಟಾಟಾ ಹೆಲಿಕಾಪ್ಟರ್‌ ಘಟಕ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್‌ ಲಘು ಹೆಲಿಕಾಪ್ಟರ್‌ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…

3 hours ago

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

12 hours ago