ಕ್ರೀಡೆ

ಟೀಂ ಇಂಡಿಯಾ ಡ್ರೆಸ್ಸಿಂಗ್‌ ರೂಂನಲ್ಲಿ ಪ್ರಧಾನಿ: ಮೆಚ್ಚುಗೆ ವ್ಯಕ್ತಪಡಿಸಿದ ಮಾಜಿ ಕೋಚ್‌

ಮುಂಬೈ : ಏಕದಿನ ವಿಶ್ವಕಪ್‌-೨೦೨೩ರ ಫೈನಲ್‌ನ ಸೋಲಿನ ನಂತರ ಭಾರತ ತಂಡದ ಡ್ರೆಸ್ಸಿಂಗ್‌ ರೂಂಗೆ ಭೇಟಿ ನೀಡಿ, ಟೀಮ್‌ ಇಂಡಿಯಾ ಆಟಗಾರರನ್ನು ಸಾಂತ್ವಾನಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ನಡೆಯನ್ನು ಭಾರತ ತಂದಡ ಮಾಜಿ ಕೋಚ್‌ ರವಿಶಾಸ್ತ್ರಿ ಮುಕ್ತ ಕಂಠದಿಂದ ಹೊಗಳಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ಅವರು,”‘ಡ್ರೆಸ್ಸಿಂಗ್ ರೂಮ್ ಹೇಗಿರುತ್ತದೆ ಎಂಬುದು ನನಗೆ ತಿಳಿದಿರುವ ಕಾರಣದಿಂದ ಇದು ಅತ್ಯಂತ ಮಹತ್ವದ ವಿಚಾರ ಎಂದು ನಾನು ಭಾವಿಸುತ್ತೇನೆ ಮತ್ತು ನಾನು ಕ್ರಿಕೆಟಿಗನಾಗಿ ಹಲವು ವರ್ಷಗಳಿಂದ, ಭಾರತದ ತರಬೇತುದಾರನಾಗಿ ಏಳು ವರ್ಷಗಳಿಗೂ ಹೆಚ್ಚು ಕಾಲ ಆ ಡ್ರೆಸ್ಸಿಂಗ್ ರೂಮ್‌ನಲ್ಲಿದ್ದೇನೆ”. ಒಂದು ದೇಶದ ಪ್ರಧಾನಿಯಾಗಿರುವಾಗ ಡ್ರೆಸ್ಸಿಂಗ್ ರೂಮ್‌ಗೆ ಕಾಲಿಡುವುದು ವಿಶೇಷವಾದ ನಡವಳಿಕೆ. ಇಂತಹ ಸಮಯದಲ್ಲಿ ಆಟಗಾರರಿಗೆ ಏನು ಅನಿಸುತ್ತದೆ ಎಂಬುದು ತಂಡದ ಮಾಜಿ ಕೋಚ್ ಆಗಿದ್ದ ನನಗೆ ತಿಳಿದಿದೆ

ಇದು ಕರುಳು ಹಿಂಡುವ ಭಾವನೆ ಮತ್ತು ನೀವು ಸೋಲಿನಿಂದಾಗಿ ಕಂಗೆಟ್ಟಿರುವಾಗ ಅದೊಂತರ ವಿಚಿತ್ರವಾದ ಭಾವನೆ ನಿಮ್ಮನ್ನು ಆವರಿಸಿರುತ್ತದೆ. ಇಂತಹ ಸಯಮದಲ್ಲಿ ಡ್ರೆಸ್ಸಿಂಗ್ ರೂಮ್‌ಗೆ ದೇಶದ ಪ್ರಧಾನಿಯಾದಂತವರು ಭೇಟಿ ನೀಡಿದಾಗ, ಅದು ದೊಡ್ಡ ವಿಚಾರವಾಗಿರುತ್ತದೆ. ಏಕೆಂದರೆ, ಅದು ಆಟಗಾರರ ಉತ್ಸಾಹವನ್ನು ಹೆಚ್ಚಿಸುತ್ತದೆ’ ಎಂದು ಪ್ರಧಾನಿ ನಡೆಯನ್ನು ರವಿಶಾಸ್ತ್ರಿ ಕೊಂಡಾಡಿದ್ದಾರೆ.

ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನ.೧೯ ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಐಸಿಸಿ ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಭಾರತ ತಂಡ ಬ್ಯಾಟಿಂಗ್‌ ಹಾಗೂ ಬೌಲಂಗ್‌ ಎರಡು ವಿಭಾಗದಲ್ಲಿಯೂ ವೈಫಲ್ಯ ಕಂಡು ಆಸೀಸ್‌ ವಿರುದ್ದ ೬ ವಿಕೆಟ್‌ಗಳಿಂದ ಸೋತಿತ್ತು. ಆಸೀಸ್‌ ತಮ್ಮ ೬ನೇ ಟ್ರೋಫಿಗೆ ಮುತ್ತಿಕ್ಕಿತ್ತು.

ಫೈನಲ್‌ ಪಂದ್ಯ ವೀಕ್ಷಣೆಗೆ ಹಲವಾರು ಗಣ್ಯರು ಹಾಗೂ ಚಲನಚಿತ್ರ ನಟರು ಆಗಮಿಸಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಪಂದ್ಯ ವೀಕ್ಷಣೆಗೆ ಆಗಮಿಸಿದ್ದರು. ಆಸೀಸ್‌ ತಂಡಕ್ಕೆ ಪ್ರಶಸ್ತಿ ನೀಡಿ ನಂತರ ಭಾರತ ತಂಡದ ಡ್ರೆಸ್ಸಿಂಗ್‌ ರೂಂಗೆ ಬಂದ ಪ್ರಧಾನಿ ಮೋದಿ, ಅವರೊಂದಿಗೆ ಕೆಲಕಾಲ ಕಳೆದು, ಸಂವಹನ ನಡೆಸಿ ಆಟಗಾರರಿಗೆ ಧೈರ್ಯ ತುಂಬಿದ್ದರು.

https://x.com/ANI/status/1727995687705735391?s=20

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago