ಮುಂಬೈ : ಏಕದಿನ ವಿಶ್ವಕಪ್-೨೦೨೩ರ ಫೈನಲ್ನ ಸೋಲಿನ ನಂತರ ಭಾರತ ತಂಡದ ಡ್ರೆಸ್ಸಿಂಗ್ ರೂಂಗೆ ಭೇಟಿ ನೀಡಿ, ಟೀಮ್ ಇಂಡಿಯಾ ಆಟಗಾರರನ್ನು ಸಾಂತ್ವಾನಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ನಡೆಯನ್ನು ಭಾರತ ತಂದಡ ಮಾಜಿ ಕೋಚ್ ರವಿಶಾಸ್ತ್ರಿ ಮುಕ್ತ ಕಂಠದಿಂದ ಹೊಗಳಿದ್ದಾರೆ.
ಈ ಕುರಿತು ಸುದ್ದಿಸಂಸ್ಥೆ ಎಎನ್ಐ ಜೊತೆ ಮಾತನಾಡಿರುವ ಅವರು,”‘ಡ್ರೆಸ್ಸಿಂಗ್ ರೂಮ್ ಹೇಗಿರುತ್ತದೆ ಎಂಬುದು ನನಗೆ ತಿಳಿದಿರುವ ಕಾರಣದಿಂದ ಇದು ಅತ್ಯಂತ ಮಹತ್ವದ ವಿಚಾರ ಎಂದು ನಾನು ಭಾವಿಸುತ್ತೇನೆ ಮತ್ತು ನಾನು ಕ್ರಿಕೆಟಿಗನಾಗಿ ಹಲವು ವರ್ಷಗಳಿಂದ, ಭಾರತದ ತರಬೇತುದಾರನಾಗಿ ಏಳು ವರ್ಷಗಳಿಗೂ ಹೆಚ್ಚು ಕಾಲ ಆ ಡ್ರೆಸ್ಸಿಂಗ್ ರೂಮ್ನಲ್ಲಿದ್ದೇನೆ”. ಒಂದು ದೇಶದ ಪ್ರಧಾನಿಯಾಗಿರುವಾಗ ಡ್ರೆಸ್ಸಿಂಗ್ ರೂಮ್ಗೆ ಕಾಲಿಡುವುದು ವಿಶೇಷವಾದ ನಡವಳಿಕೆ. ಇಂತಹ ಸಮಯದಲ್ಲಿ ಆಟಗಾರರಿಗೆ ಏನು ಅನಿಸುತ್ತದೆ ಎಂಬುದು ತಂಡದ ಮಾಜಿ ಕೋಚ್ ಆಗಿದ್ದ ನನಗೆ ತಿಳಿದಿದೆ
ಇದು ಕರುಳು ಹಿಂಡುವ ಭಾವನೆ ಮತ್ತು ನೀವು ಸೋಲಿನಿಂದಾಗಿ ಕಂಗೆಟ್ಟಿರುವಾಗ ಅದೊಂತರ ವಿಚಿತ್ರವಾದ ಭಾವನೆ ನಿಮ್ಮನ್ನು ಆವರಿಸಿರುತ್ತದೆ. ಇಂತಹ ಸಯಮದಲ್ಲಿ ಡ್ರೆಸ್ಸಿಂಗ್ ರೂಮ್ಗೆ ದೇಶದ ಪ್ರಧಾನಿಯಾದಂತವರು ಭೇಟಿ ನೀಡಿದಾಗ, ಅದು ದೊಡ್ಡ ವಿಚಾರವಾಗಿರುತ್ತದೆ. ಏಕೆಂದರೆ, ಅದು ಆಟಗಾರರ ಉತ್ಸಾಹವನ್ನು ಹೆಚ್ಚಿಸುತ್ತದೆ’ ಎಂದು ಪ್ರಧಾನಿ ನಡೆಯನ್ನು ರವಿಶಾಸ್ತ್ರಿ ಕೊಂಡಾಡಿದ್ದಾರೆ.
ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನ.೧೯ ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಭಾರತ ತಂಡ ಬ್ಯಾಟಿಂಗ್ ಹಾಗೂ ಬೌಲಂಗ್ ಎರಡು ವಿಭಾಗದಲ್ಲಿಯೂ ವೈಫಲ್ಯ ಕಂಡು ಆಸೀಸ್ ವಿರುದ್ದ ೬ ವಿಕೆಟ್ಗಳಿಂದ ಸೋತಿತ್ತು. ಆಸೀಸ್ ತಮ್ಮ ೬ನೇ ಟ್ರೋಫಿಗೆ ಮುತ್ತಿಕ್ಕಿತ್ತು.
ಫೈನಲ್ ಪಂದ್ಯ ವೀಕ್ಷಣೆಗೆ ಹಲವಾರು ಗಣ್ಯರು ಹಾಗೂ ಚಲನಚಿತ್ರ ನಟರು ಆಗಮಿಸಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಪಂದ್ಯ ವೀಕ್ಷಣೆಗೆ ಆಗಮಿಸಿದ್ದರು. ಆಸೀಸ್ ತಂಡಕ್ಕೆ ಪ್ರಶಸ್ತಿ ನೀಡಿ ನಂತರ ಭಾರತ ತಂಡದ ಡ್ರೆಸ್ಸಿಂಗ್ ರೂಂಗೆ ಬಂದ ಪ್ರಧಾನಿ ಮೋದಿ, ಅವರೊಂದಿಗೆ ಕೆಲಕಾಲ ಕಳೆದು, ಸಂವಹನ ನಡೆಸಿ ಆಟಗಾರರಿಗೆ ಧೈರ್ಯ ತುಂಬಿದ್ದರು.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…