ಕ್ರೀಡೆ

ನೀರಜ್ ಚೋಪ್ರಾ ಸಾಧನೆ ಕೊಂಡಾಡಿದ ಪ್ರಧಾನಿ ಮೋದಿ

ನವದೆಹಲಿ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಜಾವೆಲಿನ್ ಎಸೆತದಲ್ಲಿ ಬಂಗಾರಕ್ಕೆ ಮುತ್ತಿಟ್ಟ ಒಲಿಂಪಿಕ್ ವೀರ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಾಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಟ್ವೀಟ್ ಮಾಡಿರುವ ಅವರು, ಪ್ರತಿಭಾನ್ವಿತ ನೀರಜ್ ಚೋಪ್ರಾ ಶ್ರೇಷ್ಠತೆಯನ್ನು ಉದಾಹರಿಸುತ್ತಾರೆ. ಅವರ ಸಮರ್ಪಣೆ, ನಿಖರತೆ ಮತ್ತು ಉತ್ಸಾಹವು ಅವರನ್ನು ಕೇವಲ ಅಥ್ಲೆಟಿಕ್ಸ್‍ನಲ್ಲಿ ಚಾಂಪಿಯನ್ ಆಗಿರುವುದಷ್ಟೇ ಅಲ್ಲದೆ, ಇಡೀ ಕ್ರೀಡಾ ಜಗತ್ತಿನಲ್ಲಿ ಅಪ್ರತಿಮ ಶ್ರೇಷ್ಠತೆಯ ಸಂಕೇತವಾಗಿಸಿದೆ. ವಿಶ್ವಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ಹಂಗೇರಿಯ ಬುಡಾಪೆಸ್ಟ್‍ನಲ್ಲಿ ಭಾನುವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಫೈನಲ್ ಪಂದ್ಯದಲ್ಲಿ 88.17 ಮೀರ್ಟ ದೂರ ಭರ್ಜಿ ಎಸೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ದಾಖಲೆ ನಿರ್ಮಿಸಿದ್ದಾರೆ.

ಮೊದಲ ಸುತ್ತಿನಲ್ಲೇ ಫೌಲ್ ಮಾಡಿದ್ದ ನೀರಜ್, 2ನೇ ಸುತ್ತಿನಲ್ಲಿ 88.17 ಮೀಟರ್ ದೂರಕ್ಕೆ ಎಸೆಯುವ ಮೂಲಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು. ಪಾಕಿಸ್ತಾನದ ಅರ್ಷದ್ ನದೀಮ್ ಅವರು 87.82 ಮೀಟರ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದಿದ್ದಾರೆ.

2022ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದರು. ಆದರೆ ಈ ಬಾರಿ ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

1983ರಿಂದಲೂ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಕೂಟದಲ್ಲಿ ಭಾರತಕ್ಕಿದು 3ನೇ ಪದಕ, 2003ರ ಪ್ಯಾರಿಸ್ ವಿಶ್ವ ಕೂಟದಲ್ಲಿ ಮಹಿಳೆಯರ ಲಾಂಗ್ ಜಂಪ್‍ನಲ್ಲಿ ಅಂಜು ಬಾಬಿ ಜಾರ್ಜ್ ಮೊದಲ ಪದಕ ತಂದು ಕೊಟ್ಟಿದ್ದರು. ಕಳೆದ ವರ್ಷ ಅಮೆರಿಕಾದಲ್ಲಿ ನಡೆದಿದ್ದ ಕೂಟದಲ್ಲಿ ಪುರುಷರ ಜಾವೆಲಿನ್ ಎಸೆತದಲ್ಲಿ ನೀರಜ್ ಬೆಳ್ಳಿ ಪದಕ ಗೆದ್ದಿದ್ದರು.

ನೀರಜ್ ವಿಶ್ವದ ಎಲ್ಲಾ ಪ್ರಮುಖ ಕೂಟಗಳಲ್ಲೂ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. 201/ರಲ್ಲಿ ಏಷ್ಯನ್ ಗೇಮ್ಸ ನಲ್ಲಿ ಚಿನ್ನ ಗೆದ್ದಿದ್ದ ಅವರು, ಅದೇ ವರ್ಷ ಕಾಮನ್ ವೆಲ್ತ್‌ ಗೇಮ್ಸ್‌ ನಲ್ಲಿ ಚಾಂಪಿಯನ್ ಎನಿಸಿಕೊಂಡರು, 2021ರಲ್ಲಿ ಟೋಕಿಯೋ ಒಲಿಂಪಿಕ್ಸ್‍ನಲ್ಲಿ ಚಿನ್ನ ಗೆದ್ದ ಬಳಿಕ ಕಳೆದ ವರ್ಷ ಡೈಮಂಡ್ ಲೀಗ್ ಪ್ರಶಸ್ತಿ ತನ್ನದಾಗಿಸಿಕೊಂಡರು. ವಿಶ್ವಕೂಟದಲ್ಲಿ ಬಾಕಿ ಇದ್ದ ಸ್ವರ್ಣವನ್ನು ಈ ಬಾಗಿ ಕೊರಳಿಗೇರಿಸಿಕೊಂಡರು.

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

9 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

9 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

9 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

9 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

9 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

10 hours ago