ಕ್ರೀಡೆ

ನೀರಜ್ ಚೋಪ್ರಾ ಸಾಧನೆ ಕೊಂಡಾಡಿದ ಪ್ರಧಾನಿ ಮೋದಿ

ನವದೆಹಲಿ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಜಾವೆಲಿನ್ ಎಸೆತದಲ್ಲಿ ಬಂಗಾರಕ್ಕೆ ಮುತ್ತಿಟ್ಟ ಒಲಿಂಪಿಕ್ ವೀರ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಾಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಟ್ವೀಟ್ ಮಾಡಿರುವ ಅವರು, ಪ್ರತಿಭಾನ್ವಿತ ನೀರಜ್ ಚೋಪ್ರಾ ಶ್ರೇಷ್ಠತೆಯನ್ನು ಉದಾಹರಿಸುತ್ತಾರೆ. ಅವರ ಸಮರ್ಪಣೆ, ನಿಖರತೆ ಮತ್ತು ಉತ್ಸಾಹವು ಅವರನ್ನು ಕೇವಲ ಅಥ್ಲೆಟಿಕ್ಸ್‍ನಲ್ಲಿ ಚಾಂಪಿಯನ್ ಆಗಿರುವುದಷ್ಟೇ ಅಲ್ಲದೆ, ಇಡೀ ಕ್ರೀಡಾ ಜಗತ್ತಿನಲ್ಲಿ ಅಪ್ರತಿಮ ಶ್ರೇಷ್ಠತೆಯ ಸಂಕೇತವಾಗಿಸಿದೆ. ವಿಶ್ವಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ಹಂಗೇರಿಯ ಬುಡಾಪೆಸ್ಟ್‍ನಲ್ಲಿ ಭಾನುವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಫೈನಲ್ ಪಂದ್ಯದಲ್ಲಿ 88.17 ಮೀರ್ಟ ದೂರ ಭರ್ಜಿ ಎಸೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ದಾಖಲೆ ನಿರ್ಮಿಸಿದ್ದಾರೆ.

ಮೊದಲ ಸುತ್ತಿನಲ್ಲೇ ಫೌಲ್ ಮಾಡಿದ್ದ ನೀರಜ್, 2ನೇ ಸುತ್ತಿನಲ್ಲಿ 88.17 ಮೀಟರ್ ದೂರಕ್ಕೆ ಎಸೆಯುವ ಮೂಲಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು. ಪಾಕಿಸ್ತಾನದ ಅರ್ಷದ್ ನದೀಮ್ ಅವರು 87.82 ಮೀಟರ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದಿದ್ದಾರೆ.

2022ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದರು. ಆದರೆ ಈ ಬಾರಿ ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

1983ರಿಂದಲೂ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಕೂಟದಲ್ಲಿ ಭಾರತಕ್ಕಿದು 3ನೇ ಪದಕ, 2003ರ ಪ್ಯಾರಿಸ್ ವಿಶ್ವ ಕೂಟದಲ್ಲಿ ಮಹಿಳೆಯರ ಲಾಂಗ್ ಜಂಪ್‍ನಲ್ಲಿ ಅಂಜು ಬಾಬಿ ಜಾರ್ಜ್ ಮೊದಲ ಪದಕ ತಂದು ಕೊಟ್ಟಿದ್ದರು. ಕಳೆದ ವರ್ಷ ಅಮೆರಿಕಾದಲ್ಲಿ ನಡೆದಿದ್ದ ಕೂಟದಲ್ಲಿ ಪುರುಷರ ಜಾವೆಲಿನ್ ಎಸೆತದಲ್ಲಿ ನೀರಜ್ ಬೆಳ್ಳಿ ಪದಕ ಗೆದ್ದಿದ್ದರು.

ನೀರಜ್ ವಿಶ್ವದ ಎಲ್ಲಾ ಪ್ರಮುಖ ಕೂಟಗಳಲ್ಲೂ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. 201/ರಲ್ಲಿ ಏಷ್ಯನ್ ಗೇಮ್ಸ ನಲ್ಲಿ ಚಿನ್ನ ಗೆದ್ದಿದ್ದ ಅವರು, ಅದೇ ವರ್ಷ ಕಾಮನ್ ವೆಲ್ತ್‌ ಗೇಮ್ಸ್‌ ನಲ್ಲಿ ಚಾಂಪಿಯನ್ ಎನಿಸಿಕೊಂಡರು, 2021ರಲ್ಲಿ ಟೋಕಿಯೋ ಒಲಿಂಪಿಕ್ಸ್‍ನಲ್ಲಿ ಚಿನ್ನ ಗೆದ್ದ ಬಳಿಕ ಕಳೆದ ವರ್ಷ ಡೈಮಂಡ್ ಲೀಗ್ ಪ್ರಶಸ್ತಿ ತನ್ನದಾಗಿಸಿಕೊಂಡರು. ವಿಶ್ವಕೂಟದಲ್ಲಿ ಬಾಕಿ ಇದ್ದ ಸ್ವರ್ಣವನ್ನು ಈ ಬಾಗಿ ಕೊರಳಿಗೇರಿಸಿಕೊಂಡರು.

andolanait

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

33 mins ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

1 hour ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

2 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

3 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

3 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

4 hours ago