ಕ್ರೀಡೆ

ನೀರಜ್ ಚೋಪ್ರಾ ಸಾಧನೆ ಕೊಂಡಾಡಿದ ಪ್ರಧಾನಿ ಮೋದಿ

ನವದೆಹಲಿ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಜಾವೆಲಿನ್ ಎಸೆತದಲ್ಲಿ ಬಂಗಾರಕ್ಕೆ ಮುತ್ತಿಟ್ಟ ಒಲಿಂಪಿಕ್ ವೀರ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಾಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಟ್ವೀಟ್ ಮಾಡಿರುವ ಅವರು, ಪ್ರತಿಭಾನ್ವಿತ ನೀರಜ್ ಚೋಪ್ರಾ ಶ್ರೇಷ್ಠತೆಯನ್ನು ಉದಾಹರಿಸುತ್ತಾರೆ. ಅವರ ಸಮರ್ಪಣೆ, ನಿಖರತೆ ಮತ್ತು ಉತ್ಸಾಹವು ಅವರನ್ನು ಕೇವಲ ಅಥ್ಲೆಟಿಕ್ಸ್‍ನಲ್ಲಿ ಚಾಂಪಿಯನ್ ಆಗಿರುವುದಷ್ಟೇ ಅಲ್ಲದೆ, ಇಡೀ ಕ್ರೀಡಾ ಜಗತ್ತಿನಲ್ಲಿ ಅಪ್ರತಿಮ ಶ್ರೇಷ್ಠತೆಯ ಸಂಕೇತವಾಗಿಸಿದೆ. ವಿಶ್ವಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ಹಂಗೇರಿಯ ಬುಡಾಪೆಸ್ಟ್‍ನಲ್ಲಿ ಭಾನುವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಫೈನಲ್ ಪಂದ್ಯದಲ್ಲಿ 88.17 ಮೀರ್ಟ ದೂರ ಭರ್ಜಿ ಎಸೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ದಾಖಲೆ ನಿರ್ಮಿಸಿದ್ದಾರೆ.

ಮೊದಲ ಸುತ್ತಿನಲ್ಲೇ ಫೌಲ್ ಮಾಡಿದ್ದ ನೀರಜ್, 2ನೇ ಸುತ್ತಿನಲ್ಲಿ 88.17 ಮೀಟರ್ ದೂರಕ್ಕೆ ಎಸೆಯುವ ಮೂಲಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು. ಪಾಕಿಸ್ತಾನದ ಅರ್ಷದ್ ನದೀಮ್ ಅವರು 87.82 ಮೀಟರ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದಿದ್ದಾರೆ.

2022ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದರು. ಆದರೆ ಈ ಬಾರಿ ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

1983ರಿಂದಲೂ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಕೂಟದಲ್ಲಿ ಭಾರತಕ್ಕಿದು 3ನೇ ಪದಕ, 2003ರ ಪ್ಯಾರಿಸ್ ವಿಶ್ವ ಕೂಟದಲ್ಲಿ ಮಹಿಳೆಯರ ಲಾಂಗ್ ಜಂಪ್‍ನಲ್ಲಿ ಅಂಜು ಬಾಬಿ ಜಾರ್ಜ್ ಮೊದಲ ಪದಕ ತಂದು ಕೊಟ್ಟಿದ್ದರು. ಕಳೆದ ವರ್ಷ ಅಮೆರಿಕಾದಲ್ಲಿ ನಡೆದಿದ್ದ ಕೂಟದಲ್ಲಿ ಪುರುಷರ ಜಾವೆಲಿನ್ ಎಸೆತದಲ್ಲಿ ನೀರಜ್ ಬೆಳ್ಳಿ ಪದಕ ಗೆದ್ದಿದ್ದರು.

ನೀರಜ್ ವಿಶ್ವದ ಎಲ್ಲಾ ಪ್ರಮುಖ ಕೂಟಗಳಲ್ಲೂ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. 201/ರಲ್ಲಿ ಏಷ್ಯನ್ ಗೇಮ್ಸ ನಲ್ಲಿ ಚಿನ್ನ ಗೆದ್ದಿದ್ದ ಅವರು, ಅದೇ ವರ್ಷ ಕಾಮನ್ ವೆಲ್ತ್‌ ಗೇಮ್ಸ್‌ ನಲ್ಲಿ ಚಾಂಪಿಯನ್ ಎನಿಸಿಕೊಂಡರು, 2021ರಲ್ಲಿ ಟೋಕಿಯೋ ಒಲಿಂಪಿಕ್ಸ್‍ನಲ್ಲಿ ಚಿನ್ನ ಗೆದ್ದ ಬಳಿಕ ಕಳೆದ ವರ್ಷ ಡೈಮಂಡ್ ಲೀಗ್ ಪ್ರಶಸ್ತಿ ತನ್ನದಾಗಿಸಿಕೊಂಡರು. ವಿಶ್ವಕೂಟದಲ್ಲಿ ಬಾಕಿ ಇದ್ದ ಸ್ವರ್ಣವನ್ನು ಈ ಬಾಗಿ ಕೊರಳಿಗೇರಿಸಿಕೊಂಡರು.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

25 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago