ನವದೆಹಲಿ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಂ ಇಂಡಿಯಾ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸಕ್ಕೆ ಕರೆದು ಅಭಿನಂದನೆ ಸಲ್ಲಿಸಿದ್ದಾರೆ.
ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಟಿ20 ವಿಶ್ವಕಪ್ ಚಾಂಪಿಯನ್ ಜಯಿಸಿದ ಬಳಿಕ ಇಂದು ಭಾರತಕ್ಕೆ ಬಂದಿಳಿದಿದ್ದು, ಟೀಂ ಇಂಡಿಯಾಗೆ ತವರಿನಲ್ಲೇ ಭರ್ಜರಿ ಸ್ವಾಗತ ಸಿಕ್ಕಿದೆ. ಭಾರತಕ್ಕೆ ಬಂದಿಳಿದ ಟೀಂ ಇಂಡಿಯಾ, ಖಾಸಗಿ ಹೋಟೆಲ್ಗೆ ತೆರಳಿದ ಬಳಿಕ ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಅವರ ನಿವಾಸಕ್ಕೆ ಭೇಟಿ ನೀಡಿತು. ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ತಮ್ಮ ನಿವಾಸದಲ್ಲಿ ಔತಣಕೂಟ ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಟೀಂ ಇಂಡಿಯಾ ಆಟಗಾರರನ್ನು ಮೋದಿ ಅಭಿನಂದಿಸಿದರು. ಪ್ರಧಾನಿ ಮೋದಿ ಜೊತೆ ಮಾತುಕತೆ ನಡೆಸಿದ ಬಳಿಕ ಭಾರತ ಕ್ರಿಕೆಟ್ ತಂಡವು ಮುಂಬೈಗೆ ಪ್ರಯಾಣ ಬೆಳೆಸಿತು.
ಜೂನ್.29ರಂದು ನಡೆದ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎದುರು 7 ರನ್ಗಳ ರೋಚಕ ಜಯ ಸಾಧಿಸಿ 17 ವರ್ಷಗಳ ಬಳಿಕ ಎರಡನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿಯನ್ನು ಜಯಿಸುವಲ್ಲಿ ಯಶಸ್ವಿಯಾಗಿತ್ತು.
ಇದಾದ ಬಳಿಕ ಜುಲೈ.1ರಂದೇ ಟೀಂ ಇಂಡಿಯಾ ತವರಿಗೆ ವಾಪಸ್ಸಾಗಬೇಕಿತ್ತು. ಆದರೆ ಬಾರ್ಬಡೋಸ್ನಲ್ಲಿ ಬೆರಿಲ್ ಚಂಡಮಾರುತ ಅಪ್ಪಳಿಸಿದ್ದರಿಂದ, ಪ್ರತಿಕೂಲ ವಾತಾವರಣ ಉಂಟಾಗಿ ಭಾರತ ತಂಡ ತವರಿಗೆ ವಾಪಸ್ಸಾಗುವುದು ತಡವಾಯಿತು. ಇದೀಗ ಇಂದು ಮುಂಜಾನೆ 6 ಗಂಟೆಗೆ ರಾಷ್ಟ್ರ ರಾಜಧಾನಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರತ ಕ್ರಿಕೆಟ್ ತಂಡ ಬಂದಿಳಿಯಿತು. ಭಾರತ ತಂಡವು ತವರಿಗೆ ಬಂದಿಳಿಯುತ್ತಿದ್ದಂತೆಯೇ ಅಭಿಮಾನಿಗಳಿಂದ ಭರ್ಜರಿ ಸ್ವಾಗತ ಸಿಕ್ಕಿತು.
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…