ಕ್ರೀಡೆ

ಇಸ್ರೇಲ್‌ ಪರ ಹೇಳಿಕೆ: ನಾಯಕ ಸ್ಥಾನದಿಂದ ಕೆಳಗಿಳಿದ ದಕ್ಷಿಣ ಆಫ್ರಿಕಾದ ಟೀಗರ್‌

ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ತಂಡದ ಅಂಡರ್-19 ವಿಭಾಗದ ನಾಯಕ ಡೇವಿಡ್ ಟೀಗರ್ ಅವರನ್ನು ಸೌಥ್‌ ಆಫ್ರಿಕಾ ಕ್ರಿಕೆಟ್‌ ಬೋರ್ಡ್‌ ನಾಯಕನ ಸ್ಥಾನದಿಂದ ಕೆಳಗಿಳಿಸಿದೆ.

ಇಸ್ರೆಲ್‌ ಪರವಾಗಿ ಹೇಳಿಕೆ ನೀಡಿದ್ದರು ಎಂಬ ಹಿನ್ನಲೆ ಅವರನ್ನು ಯುದ್ಧ ವಿರೋಧಿ ಪ್ರತಿಭಟನಕಾರರು ಗುರಿಯಾಗಿಸಬಹುದು ಎಂಬ ಭೀತಿಯಲ್ಲಿ ಸಿಎಸ್‌ಎ ಶುಕ್ರವಾರ ಈ ಕ್ರಮವನ್ನು ತೆಗೆದುಕೊಂಡಿದೆ. ಆದರೆ, ಟೀಗರ್ ತಂಡದ ಸದಸ್ಯರಾಗಿ ಮುಂದುವರಿಯುವರು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಟೀಗರ್‌ ಯಾವುದೇ ತಪ್ಪು ಮಾಡಿಲ್ಲ ಎಂದು ಈ ಹಿಂದೆ ತನಿಖಾ ಸಂಸ್ಥೆ ವರದಿ ನೀಡಿತ್ತು.

ಯಹೂದಿ ಸಾಧಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಟೀಗರ್‌,”ನಾನೀಗ ಅರಳುತ್ತಿರುವ ತಾರೆ. ಆದರೆ ಇಸ್ರೇಲ್ ನ ಯುವ ಸೈನಿಕರು ನಿಜವಾದ ಅರಳುತ್ತಿರುವ ತಾರೆಗಳು. ನಾನು ಈ ಪ್ರಶಸ್ತಿಯನ್ನು ಇಸ್ರೇಲ್ ದೇಶಕ್ಕೆ ಮತ್ತು ನಾವು ಶಾಂತಿಯಿಂದ ಬದುಕಲು ಸಾಧ್ಯವಾಗುವಂತೆ ಹೋರಾಟ ನಡೆಸುತ್ತಿರುವ ಪ್ರತಿಯೊಬ್ಬ ಸೈನಿಕನಿಗೆ ಅರ್ಪಿಸುತ್ತೇನೆ” ಎಂದು ಟೀಗರ್‌ ಹೇಳಿದ್ದರು.

ಇದಕ್ಕೆ ಫೆಲೆಸ್ತೀನ್ ಸಾಲಿಡಾರಿಟಿ ಅಲಯನ್ಸ್ (ಪಿಎಸ್‌ಎ) ಪ್ರತಿಭಟನೆ ವ್ಯಕ್ತಪಡಿಸಿತ್ತು. ಅದು ಕ್ರಿಕೆಟ್ ಆಟಗಾರನ ವಿರುದ್ಧ ದಕ್ಷಿಣ ಆಫ್ರಿಕ ಕ್ರೀಡಾ ಒಕ್ಕೂಟ ಮತ್ತು ಒಲಿಂಪಿಕ್ ಸಮಿತಿ (ಎಸ್‌ಎಎಸ್ಸಿಒಸಿ)ಗೆ ದೂರು ನೀಡಿತ್ತು. ಈ ಬಗ್ಗೆ ಸ್ವತಂತ್ರ ತನಿಖೆಯ ನಂತರ ಟೀಗರ್‌ರನ್ನು ದೋಷಮುಕ್ತಗೊಳಿಸಿದರು, ನಾಯಕತ್ವದಿಂದ ತೆಗೆಯಲಾಗಿದೆ.

andolanait

Recent Posts

ಪ್ರೀತಿ, ಸೌಹಾರ್ದತೆಯ ಸಂದೇಶ ಸಾರುವ ಕ್ರಿಸ್ತ ಜಯಂತಿ

- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು…

37 mins ago

2025 ಸವಿನೆನಪು: ಸ್ಯಾಂಡಲ್‌ವುಡ್ ಏಳು-ಬೀಳು

‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…

3 hours ago

ಉದ್ಘಾಟನೆಯಾಗದ ಅಂಬಾರಿ ಖ್ಯಾತಿಯ ಅರ್ಜುನನ ಸ್ಮಾರಕ

ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…

3 hours ago

ಸಾಂಸ್ಕೃತಿಕ ನಗರಿಯಲ್ಲಿ ಕ್ರಿಸ್‌ಮಸ್ ಸಂಭ್ರಮ

ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…

3 hours ago

ರಾಗಿ, ಹುರುಳಿ ಒಕ್ಕಣೆಗೆ ರಸ್ತೆಯೇ ಕಣ!

ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…

3 hours ago

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

14 hours ago