ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ತಂಡದ ಅಂಡರ್-19 ವಿಭಾಗದ ನಾಯಕ ಡೇವಿಡ್ ಟೀಗರ್ ಅವರನ್ನು ಸೌಥ್ ಆಫ್ರಿಕಾ ಕ್ರಿಕೆಟ್ ಬೋರ್ಡ್ ನಾಯಕನ ಸ್ಥಾನದಿಂದ ಕೆಳಗಿಳಿಸಿದೆ.
ಇಸ್ರೆಲ್ ಪರವಾಗಿ ಹೇಳಿಕೆ ನೀಡಿದ್ದರು ಎಂಬ ಹಿನ್ನಲೆ ಅವರನ್ನು ಯುದ್ಧ ವಿರೋಧಿ ಪ್ರತಿಭಟನಕಾರರು ಗುರಿಯಾಗಿಸಬಹುದು ಎಂಬ ಭೀತಿಯಲ್ಲಿ ಸಿಎಸ್ಎ ಶುಕ್ರವಾರ ಈ ಕ್ರಮವನ್ನು ತೆಗೆದುಕೊಂಡಿದೆ. ಆದರೆ, ಟೀಗರ್ ತಂಡದ ಸದಸ್ಯರಾಗಿ ಮುಂದುವರಿಯುವರು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಟೀಗರ್ ಯಾವುದೇ ತಪ್ಪು ಮಾಡಿಲ್ಲ ಎಂದು ಈ ಹಿಂದೆ ತನಿಖಾ ಸಂಸ್ಥೆ ವರದಿ ನೀಡಿತ್ತು.
ಯಹೂದಿ ಸಾಧಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಟೀಗರ್,”ನಾನೀಗ ಅರಳುತ್ತಿರುವ ತಾರೆ. ಆದರೆ ಇಸ್ರೇಲ್ ನ ಯುವ ಸೈನಿಕರು ನಿಜವಾದ ಅರಳುತ್ತಿರುವ ತಾರೆಗಳು. ನಾನು ಈ ಪ್ರಶಸ್ತಿಯನ್ನು ಇಸ್ರೇಲ್ ದೇಶಕ್ಕೆ ಮತ್ತು ನಾವು ಶಾಂತಿಯಿಂದ ಬದುಕಲು ಸಾಧ್ಯವಾಗುವಂತೆ ಹೋರಾಟ ನಡೆಸುತ್ತಿರುವ ಪ್ರತಿಯೊಬ್ಬ ಸೈನಿಕನಿಗೆ ಅರ್ಪಿಸುತ್ತೇನೆ” ಎಂದು ಟೀಗರ್ ಹೇಳಿದ್ದರು.
ಇದಕ್ಕೆ ಫೆಲೆಸ್ತೀನ್ ಸಾಲಿಡಾರಿಟಿ ಅಲಯನ್ಸ್ (ಪಿಎಸ್ಎ) ಪ್ರತಿಭಟನೆ ವ್ಯಕ್ತಪಡಿಸಿತ್ತು. ಅದು ಕ್ರಿಕೆಟ್ ಆಟಗಾರನ ವಿರುದ್ಧ ದಕ್ಷಿಣ ಆಫ್ರಿಕ ಕ್ರೀಡಾ ಒಕ್ಕೂಟ ಮತ್ತು ಒಲಿಂಪಿಕ್ ಸಮಿತಿ (ಎಸ್ಎಎಸ್ಸಿಒಸಿ)ಗೆ ದೂರು ನೀಡಿತ್ತು. ಈ ಬಗ್ಗೆ ಸ್ವತಂತ್ರ ತನಿಖೆಯ ನಂತರ ಟೀಗರ್ರನ್ನು ದೋಷಮುಕ್ತಗೊಳಿಸಿದರು, ನಾಯಕತ್ವದಿಂದ ತೆಗೆಯಲಾಗಿದೆ.
ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು 2ನೇ ಹಂತದ…
ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…
ಉನ್ನಾವೋ: ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿದ ಪರಿಣಾಮ 65 ವರ್ಷದ ಅಂಪೈರ್ ಸಾವನ್ನಪ್ಪಿದ್ದು, ಹಲವಾರು ಆಟಗಾರರು…
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್ ಸೀಜ್ ಮಾಡಲಾಗಿದೆ. ಎನ್ಸಿಬಿ ಅಧಿಕಾರಿಗಳು…
ಬೆಂಗಳೂರು: ಕೆಜಿಎಫ್-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್ ಸ್ಟಾರ್ ಯಶ್ ಅಭಿನಯದ…