ಕ್ರೀಡೆ

ಇಸ್ರೇಲ್‌ ಪರ ಹೇಳಿಕೆ: ನಾಯಕ ಸ್ಥಾನದಿಂದ ಕೆಳಗಿಳಿದ ದಕ್ಷಿಣ ಆಫ್ರಿಕಾದ ಟೀಗರ್‌

ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ತಂಡದ ಅಂಡರ್-19 ವಿಭಾಗದ ನಾಯಕ ಡೇವಿಡ್ ಟೀಗರ್ ಅವರನ್ನು ಸೌಥ್‌ ಆಫ್ರಿಕಾ ಕ್ರಿಕೆಟ್‌ ಬೋರ್ಡ್‌ ನಾಯಕನ ಸ್ಥಾನದಿಂದ ಕೆಳಗಿಳಿಸಿದೆ.

ಇಸ್ರೆಲ್‌ ಪರವಾಗಿ ಹೇಳಿಕೆ ನೀಡಿದ್ದರು ಎಂಬ ಹಿನ್ನಲೆ ಅವರನ್ನು ಯುದ್ಧ ವಿರೋಧಿ ಪ್ರತಿಭಟನಕಾರರು ಗುರಿಯಾಗಿಸಬಹುದು ಎಂಬ ಭೀತಿಯಲ್ಲಿ ಸಿಎಸ್‌ಎ ಶುಕ್ರವಾರ ಈ ಕ್ರಮವನ್ನು ತೆಗೆದುಕೊಂಡಿದೆ. ಆದರೆ, ಟೀಗರ್ ತಂಡದ ಸದಸ್ಯರಾಗಿ ಮುಂದುವರಿಯುವರು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಟೀಗರ್‌ ಯಾವುದೇ ತಪ್ಪು ಮಾಡಿಲ್ಲ ಎಂದು ಈ ಹಿಂದೆ ತನಿಖಾ ಸಂಸ್ಥೆ ವರದಿ ನೀಡಿತ್ತು.

ಯಹೂದಿ ಸಾಧಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಟೀಗರ್‌,”ನಾನೀಗ ಅರಳುತ್ತಿರುವ ತಾರೆ. ಆದರೆ ಇಸ್ರೇಲ್ ನ ಯುವ ಸೈನಿಕರು ನಿಜವಾದ ಅರಳುತ್ತಿರುವ ತಾರೆಗಳು. ನಾನು ಈ ಪ್ರಶಸ್ತಿಯನ್ನು ಇಸ್ರೇಲ್ ದೇಶಕ್ಕೆ ಮತ್ತು ನಾವು ಶಾಂತಿಯಿಂದ ಬದುಕಲು ಸಾಧ್ಯವಾಗುವಂತೆ ಹೋರಾಟ ನಡೆಸುತ್ತಿರುವ ಪ್ರತಿಯೊಬ್ಬ ಸೈನಿಕನಿಗೆ ಅರ್ಪಿಸುತ್ತೇನೆ” ಎಂದು ಟೀಗರ್‌ ಹೇಳಿದ್ದರು.

ಇದಕ್ಕೆ ಫೆಲೆಸ್ತೀನ್ ಸಾಲಿಡಾರಿಟಿ ಅಲಯನ್ಸ್ (ಪಿಎಸ್‌ಎ) ಪ್ರತಿಭಟನೆ ವ್ಯಕ್ತಪಡಿಸಿತ್ತು. ಅದು ಕ್ರಿಕೆಟ್ ಆಟಗಾರನ ವಿರುದ್ಧ ದಕ್ಷಿಣ ಆಫ್ರಿಕ ಕ್ರೀಡಾ ಒಕ್ಕೂಟ ಮತ್ತು ಒಲಿಂಪಿಕ್ ಸಮಿತಿ (ಎಸ್‌ಎಎಸ್ಸಿಒಸಿ)ಗೆ ದೂರು ನೀಡಿತ್ತು. ಈ ಬಗ್ಗೆ ಸ್ವತಂತ್ರ ತನಿಖೆಯ ನಂತರ ಟೀಗರ್‌ರನ್ನು ದೋಷಮುಕ್ತಗೊಳಿಸಿದರು, ನಾಯಕತ್ವದಿಂದ ತೆಗೆಯಲಾಗಿದೆ.

andolanait

Recent Posts

ವಿಶ್ವದ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…

10 mins ago

ನಟ ರಿಷಬ್‌ ಶೆಟ್ಟಿ ತೊಡೆ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ: ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ

ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್‌ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…

13 mins ago

ಇಂಡಿಗೋ ಏರ್‌ಲೈನ್ಸ್‌ಗೆ ಕೇಂದ್ರ ಸರ್ಕಾರದಿಂದ ಮೂಗುದಾರ: ಚಳಿಗಾಲ ವೇಳಾಪಟ್ಟಿ ಕಡಿತ

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಕಾರ್ಯಾಚರಣೆಯಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ. ಕಳೆದ ಒಂದು ವಾರದಿಂದ…

25 mins ago

ಬಿಜೆಪಿ ಹೋರಾಟ ನಡೆಸಬೇಕಾಗಿದ್ದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು…

1 hour ago

ಶಾಲಾ ಬಸ್ ತಡೆದು ಬಾಲಕಿಯನ್ನು ವಶಕ್ಕೆ ನೀಡುವಂತೆ ಕಿರಿಕ್: ಪುಂಡರಿಬ್ಬರ ಬಂಧನ

ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್…

1 hour ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸಿ

ಇತ್ತೀಚೆಗೆ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ ಅನೇಕ ಸರ್ಕಾರಿ ಶಾಲೆಗಳು ಹಳೆಯ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡು…

1 hour ago