ಕ್ರೀಡೆ

ಇಸ್ರೇಲ್‌ ಪರ ಹೇಳಿಕೆ: ನಾಯಕ ಸ್ಥಾನದಿಂದ ಕೆಳಗಿಳಿದ ದಕ್ಷಿಣ ಆಫ್ರಿಕಾದ ಟೀಗರ್‌

ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ತಂಡದ ಅಂಡರ್-19 ವಿಭಾಗದ ನಾಯಕ ಡೇವಿಡ್ ಟೀಗರ್ ಅವರನ್ನು ಸೌಥ್‌ ಆಫ್ರಿಕಾ ಕ್ರಿಕೆಟ್‌ ಬೋರ್ಡ್‌ ನಾಯಕನ ಸ್ಥಾನದಿಂದ ಕೆಳಗಿಳಿಸಿದೆ.

ಇಸ್ರೆಲ್‌ ಪರವಾಗಿ ಹೇಳಿಕೆ ನೀಡಿದ್ದರು ಎಂಬ ಹಿನ್ನಲೆ ಅವರನ್ನು ಯುದ್ಧ ವಿರೋಧಿ ಪ್ರತಿಭಟನಕಾರರು ಗುರಿಯಾಗಿಸಬಹುದು ಎಂಬ ಭೀತಿಯಲ್ಲಿ ಸಿಎಸ್‌ಎ ಶುಕ್ರವಾರ ಈ ಕ್ರಮವನ್ನು ತೆಗೆದುಕೊಂಡಿದೆ. ಆದರೆ, ಟೀಗರ್ ತಂಡದ ಸದಸ್ಯರಾಗಿ ಮುಂದುವರಿಯುವರು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಟೀಗರ್‌ ಯಾವುದೇ ತಪ್ಪು ಮಾಡಿಲ್ಲ ಎಂದು ಈ ಹಿಂದೆ ತನಿಖಾ ಸಂಸ್ಥೆ ವರದಿ ನೀಡಿತ್ತು.

ಯಹೂದಿ ಸಾಧಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಟೀಗರ್‌,”ನಾನೀಗ ಅರಳುತ್ತಿರುವ ತಾರೆ. ಆದರೆ ಇಸ್ರೇಲ್ ನ ಯುವ ಸೈನಿಕರು ನಿಜವಾದ ಅರಳುತ್ತಿರುವ ತಾರೆಗಳು. ನಾನು ಈ ಪ್ರಶಸ್ತಿಯನ್ನು ಇಸ್ರೇಲ್ ದೇಶಕ್ಕೆ ಮತ್ತು ನಾವು ಶಾಂತಿಯಿಂದ ಬದುಕಲು ಸಾಧ್ಯವಾಗುವಂತೆ ಹೋರಾಟ ನಡೆಸುತ್ತಿರುವ ಪ್ರತಿಯೊಬ್ಬ ಸೈನಿಕನಿಗೆ ಅರ್ಪಿಸುತ್ತೇನೆ” ಎಂದು ಟೀಗರ್‌ ಹೇಳಿದ್ದರು.

ಇದಕ್ಕೆ ಫೆಲೆಸ್ತೀನ್ ಸಾಲಿಡಾರಿಟಿ ಅಲಯನ್ಸ್ (ಪಿಎಸ್‌ಎ) ಪ್ರತಿಭಟನೆ ವ್ಯಕ್ತಪಡಿಸಿತ್ತು. ಅದು ಕ್ರಿಕೆಟ್ ಆಟಗಾರನ ವಿರುದ್ಧ ದಕ್ಷಿಣ ಆಫ್ರಿಕ ಕ್ರೀಡಾ ಒಕ್ಕೂಟ ಮತ್ತು ಒಲಿಂಪಿಕ್ ಸಮಿತಿ (ಎಸ್‌ಎಎಸ್ಸಿಒಸಿ)ಗೆ ದೂರು ನೀಡಿತ್ತು. ಈ ಬಗ್ಗೆ ಸ್ವತಂತ್ರ ತನಿಖೆಯ ನಂತರ ಟೀಗರ್‌ರನ್ನು ದೋಷಮುಕ್ತಗೊಳಿಸಿದರು, ನಾಯಕತ್ವದಿಂದ ತೆಗೆಯಲಾಗಿದೆ.

andolanait

Recent Posts

ಪಿಯುಸಿ : ಗುಂಡ್ಲುಪೇಟೆಯಲ್ಲಿ ಬಾಲಕಿಯರೇ ಮೇಲುಗೈ

ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್‌ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…

2 mins ago

ಮೈಸೂರು ಜಿಲ್ಲೆಯ 147 ಗ್ರಾಪಂಗಳೀಗ ಕ್ಷಯ ಮುಕ್ತ!

ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…

6 mins ago

ಓದುಗರ ಪತ್ರ | ಜನಗಣತಿ ಪಾರದರ್ಶಕ,ನಿಖರವಾಗಿರಲಿ. . .

ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…

12 mins ago

ಬಾಪೂ ಆದರ್ಶ ಮಡದಿ ಕಸ್ತೂರ ಬಾ ಗಾಂಧಿ

ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಗೋಕುಲ್‌ದಾಸ್ ಕಪಾಡಿಯಾ…

29 mins ago

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

2 hours ago

ಆಂದೋಲನ ವರದಿ ಫಲಶ್ರುತಿ ; ಫುಟ್‌ಪಾತ್‌ನಲ್ಲಿದ್ದ ದ್ವಿಚಕ್ರ ವಾಹನಗಳ ತೆರವು

ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…

2 hours ago