ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ತಂಡದ ಅಂಡರ್-19 ವಿಭಾಗದ ನಾಯಕ ಡೇವಿಡ್ ಟೀಗರ್ ಅವರನ್ನು ಸೌಥ್ ಆಫ್ರಿಕಾ ಕ್ರಿಕೆಟ್ ಬೋರ್ಡ್ ನಾಯಕನ ಸ್ಥಾನದಿಂದ ಕೆಳಗಿಳಿಸಿದೆ.
ಇಸ್ರೆಲ್ ಪರವಾಗಿ ಹೇಳಿಕೆ ನೀಡಿದ್ದರು ಎಂಬ ಹಿನ್ನಲೆ ಅವರನ್ನು ಯುದ್ಧ ವಿರೋಧಿ ಪ್ರತಿಭಟನಕಾರರು ಗುರಿಯಾಗಿಸಬಹುದು ಎಂಬ ಭೀತಿಯಲ್ಲಿ ಸಿಎಸ್ಎ ಶುಕ್ರವಾರ ಈ ಕ್ರಮವನ್ನು ತೆಗೆದುಕೊಂಡಿದೆ. ಆದರೆ, ಟೀಗರ್ ತಂಡದ ಸದಸ್ಯರಾಗಿ ಮುಂದುವರಿಯುವರು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಟೀಗರ್ ಯಾವುದೇ ತಪ್ಪು ಮಾಡಿಲ್ಲ ಎಂದು ಈ ಹಿಂದೆ ತನಿಖಾ ಸಂಸ್ಥೆ ವರದಿ ನೀಡಿತ್ತು.
ಯಹೂದಿ ಸಾಧಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಟೀಗರ್,”ನಾನೀಗ ಅರಳುತ್ತಿರುವ ತಾರೆ. ಆದರೆ ಇಸ್ರೇಲ್ ನ ಯುವ ಸೈನಿಕರು ನಿಜವಾದ ಅರಳುತ್ತಿರುವ ತಾರೆಗಳು. ನಾನು ಈ ಪ್ರಶಸ್ತಿಯನ್ನು ಇಸ್ರೇಲ್ ದೇಶಕ್ಕೆ ಮತ್ತು ನಾವು ಶಾಂತಿಯಿಂದ ಬದುಕಲು ಸಾಧ್ಯವಾಗುವಂತೆ ಹೋರಾಟ ನಡೆಸುತ್ತಿರುವ ಪ್ರತಿಯೊಬ್ಬ ಸೈನಿಕನಿಗೆ ಅರ್ಪಿಸುತ್ತೇನೆ” ಎಂದು ಟೀಗರ್ ಹೇಳಿದ್ದರು.
ಇದಕ್ಕೆ ಫೆಲೆಸ್ತೀನ್ ಸಾಲಿಡಾರಿಟಿ ಅಲಯನ್ಸ್ (ಪಿಎಸ್ಎ) ಪ್ರತಿಭಟನೆ ವ್ಯಕ್ತಪಡಿಸಿತ್ತು. ಅದು ಕ್ರಿಕೆಟ್ ಆಟಗಾರನ ವಿರುದ್ಧ ದಕ್ಷಿಣ ಆಫ್ರಿಕ ಕ್ರೀಡಾ ಒಕ್ಕೂಟ ಮತ್ತು ಒಲಿಂಪಿಕ್ ಸಮಿತಿ (ಎಸ್ಎಎಸ್ಸಿಒಸಿ)ಗೆ ದೂರು ನೀಡಿತ್ತು. ಈ ಬಗ್ಗೆ ಸ್ವತಂತ್ರ ತನಿಖೆಯ ನಂತರ ಟೀಗರ್ರನ್ನು ದೋಷಮುಕ್ತಗೊಳಿಸಿದರು, ನಾಯಕತ್ವದಿಂದ ತೆಗೆಯಲಾಗಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…