ಕ್ರೀಡೆ

ಇಸ್ರೇಲ್‌ ಪರ ಹೇಳಿಕೆ: ನಾಯಕ ಸ್ಥಾನದಿಂದ ಕೆಳಗಿಳಿದ ದಕ್ಷಿಣ ಆಫ್ರಿಕಾದ ಟೀಗರ್‌

ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ತಂಡದ ಅಂಡರ್-19 ವಿಭಾಗದ ನಾಯಕ ಡೇವಿಡ್ ಟೀಗರ್ ಅವರನ್ನು ಸೌಥ್‌ ಆಫ್ರಿಕಾ ಕ್ರಿಕೆಟ್‌ ಬೋರ್ಡ್‌ ನಾಯಕನ ಸ್ಥಾನದಿಂದ ಕೆಳಗಿಳಿಸಿದೆ.

ಇಸ್ರೆಲ್‌ ಪರವಾಗಿ ಹೇಳಿಕೆ ನೀಡಿದ್ದರು ಎಂಬ ಹಿನ್ನಲೆ ಅವರನ್ನು ಯುದ್ಧ ವಿರೋಧಿ ಪ್ರತಿಭಟನಕಾರರು ಗುರಿಯಾಗಿಸಬಹುದು ಎಂಬ ಭೀತಿಯಲ್ಲಿ ಸಿಎಸ್‌ಎ ಶುಕ್ರವಾರ ಈ ಕ್ರಮವನ್ನು ತೆಗೆದುಕೊಂಡಿದೆ. ಆದರೆ, ಟೀಗರ್ ತಂಡದ ಸದಸ್ಯರಾಗಿ ಮುಂದುವರಿಯುವರು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಟೀಗರ್‌ ಯಾವುದೇ ತಪ್ಪು ಮಾಡಿಲ್ಲ ಎಂದು ಈ ಹಿಂದೆ ತನಿಖಾ ಸಂಸ್ಥೆ ವರದಿ ನೀಡಿತ್ತು.

ಯಹೂದಿ ಸಾಧಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಟೀಗರ್‌,”ನಾನೀಗ ಅರಳುತ್ತಿರುವ ತಾರೆ. ಆದರೆ ಇಸ್ರೇಲ್ ನ ಯುವ ಸೈನಿಕರು ನಿಜವಾದ ಅರಳುತ್ತಿರುವ ತಾರೆಗಳು. ನಾನು ಈ ಪ್ರಶಸ್ತಿಯನ್ನು ಇಸ್ರೇಲ್ ದೇಶಕ್ಕೆ ಮತ್ತು ನಾವು ಶಾಂತಿಯಿಂದ ಬದುಕಲು ಸಾಧ್ಯವಾಗುವಂತೆ ಹೋರಾಟ ನಡೆಸುತ್ತಿರುವ ಪ್ರತಿಯೊಬ್ಬ ಸೈನಿಕನಿಗೆ ಅರ್ಪಿಸುತ್ತೇನೆ” ಎಂದು ಟೀಗರ್‌ ಹೇಳಿದ್ದರು.

ಇದಕ್ಕೆ ಫೆಲೆಸ್ತೀನ್ ಸಾಲಿಡಾರಿಟಿ ಅಲಯನ್ಸ್ (ಪಿಎಸ್‌ಎ) ಪ್ರತಿಭಟನೆ ವ್ಯಕ್ತಪಡಿಸಿತ್ತು. ಅದು ಕ್ರಿಕೆಟ್ ಆಟಗಾರನ ವಿರುದ್ಧ ದಕ್ಷಿಣ ಆಫ್ರಿಕ ಕ್ರೀಡಾ ಒಕ್ಕೂಟ ಮತ್ತು ಒಲಿಂಪಿಕ್ ಸಮಿತಿ (ಎಸ್‌ಎಎಸ್ಸಿಒಸಿ)ಗೆ ದೂರು ನೀಡಿತ್ತು. ಈ ಬಗ್ಗೆ ಸ್ವತಂತ್ರ ತನಿಖೆಯ ನಂತರ ಟೀಗರ್‌ರನ್ನು ದೋಷಮುಕ್ತಗೊಳಿಸಿದರು, ನಾಯಕತ್ವದಿಂದ ತೆಗೆಯಲಾಗಿದೆ.

andolanait

Recent Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

1 hour ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

3 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

4 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

5 hours ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

5 hours ago

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

9 hours ago