ಕ್ರೀಡೆ

ಪ್ರೋ ಕಬಡ್ಡಿ ಲೀಗ್‌ ಸೀಸನ್‌10: ಗುಜರಾತ್‌ ಜೈಂಟ್ಸ್‌ಗೆ ಶುಭಾರಂಭ

ಅಹ್ಮದಾಬಾದ್‌ : ಪ್ರೊ ಕಬಡ್ಡಿ ಲೀಗ್‌ (ಪಿಕೆಎಲ್‌ ಸೀಸನ್‌ 10) 2023 ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ತೆಲುಗು ಟೈಟನ್ಸ್‌ ವಿರುದ್ಧ ಗುಜರಾತ್‌ ಜೈಂಟ್ಸ್‌ ಜಯಭೇರಿ ಬಾರಿಸಿದೆ. ಆ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಇಲ್ಲಿನ ಅರೆನಾ ಟ್ರಾನ್ಸ್‌ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧ ತೆಲುಗು ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 38-32 ಅಂತರದಿಂದ ಗೆಲುವು ದಾಖಲಿಸಿದರು.

ಗುಜರಾತ್‌ ರ ಸೋನು ಜಗ್ಲಾನ್‌ ಅವರು 11 ರೈಡ್‌ ಪಾಯಿಂಟ್‌ ತಂದುಕೊಡುವ ಮೂಲಕ ಗುಜರಾತ್‌ ಗೆಲುವಿಗೆ ಕಾರಣರಾದರು. ರಾಕೇಶ್‌ 5, ರೋಹಿತ್‌ ಗುಲಿಯಾ 4 ರೈಡ್‌ ಪಾಯಿಂಟ್‌ ತಂದುಕೊಟ್ಟರು.
ಇಸ್ಮಾಯಿಲ್‌ 3 ಟ್ಯಾಕಲ್‌ ಪಾಯಿಂಟ್‌ ಮತ್ತು 1 ಬೋನಸ್‌ ಪಾಯಿಂಟ್‌ ತಂದುಕೊಟ್ಟರು.

ಇತ್ತ ತೆಲುಗು ಟೈಟನ್ಸ್‌ ಪರ ಪವನ್‌ ಶೆರಾವತ್‌ 6 ರೈಡ್‌ ಪಾಯಿಂಟ್‌, 1 ಟ್ಯಾಕಲ್‌ ಮತ್ತು 4 ಬೋನಸ್‌ ಮೂಲಕ 11 ಪಾಯಿಂಟ್‌ ತಂದುಕೊಟ್ಟರು. ರಜನೀಶ್‌ ದಳಾಳ್‌ 5, ಸಂಜೀವಿನಿ 2 ಟ್ಯಾಕಪ್‌, 3 ಬೋನಸ್‌ ಮೂಲಕ 5 ಪಾಯಿಂಟ್‌, ರಾಬಿನ್‌ ಚೌಧರಿ 3 ಬೋನಸ್‌ ಪಾಯಿಂಟ್‌ ಪಡೆದರು.

40 ನಿಮಿಷಗಳ ಕಾದಾಟದಲ್ಲಿ ಆರಂಭದಿಂದಲೇ ಯಶಸ್ಸು ಪಡೆದ ಗುಜರಾತ್‌ ಉದ್ಘಾಟನಾ ಪಂದ್ಯದಲ್ಲಿ ಗೆಲುವು ದಾಖಲಿಸಿತು.

ಪ್ರೊ ಕಬಡ್ಡಿ ಲೀಗ್ 2023 ಯಲ್ಲಿ ಪಂದ್ಯವನ್ನು ಗೆದ್ದ ತಂಡಕ್ಕೆ 5 ಅಂಕಗಳನ್ನು ನೀಡಲಾಗುತ್ತದೆ, ಆದರೆ ಸೋತ ತಂಡಕ್ಕೆ 0 ಅಂಕಗಳನ್ನು ನೀಡಲಾಗುತ್ತದೆ. ಪಂದ್ಯ ಟೈನಲ್ಲಿ ಅಂತ್ಯಗೊಂಡರೆ, ಎರಡೂ ತಂಡಗಳಿಗೆ 3 ಅಂಕಗಳನ್ನು ನೀಡಲಾಗುತ್ತದೆ. ಎರಡು ಅಥವಾ ಅದಕ್ಕಿಂತ ಹೆಚ್ಚು ತಂಡಗಳು ಒಂದೇ ಅಂಕಗಳನ್ನು ಪಡೆದರೆ, ಉತ್ತಮ ಅಂಕಗಳನ್ನು ಹೊಂದಿರುವ ತಂಡವನ್ನು ಪಾಯಿಂಟ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಇರಿಸಲಾಗುತ್ತದೆ.

ಪ್ರೊ ಕಬಡ್ಡಿ ಲೀಗ್‌ನಲ್ಲಿ ಗೆದ್ದ ತಂಡಕ್ಕೆ 3 ಕೋಟಿ ರೂ ಬಹುಮಾನ ನೀಡುತ್ತಾರೆ.
ರನ್ನರ್‌ಅಪ್‌ ತಂಡಕ್ಕೆ 1.8 ಕೋಟಿ ಬಹುಮಾನ
ಸೆಮಿಸ್‌ನಲ್ಲಿ ಸೋತ ತಂಡಗಳಿಗೆ (ಮೂರು ಮತ್ತು ನಾಲ್ಕನೇ ಸ್ಥಾನಕ್ಕೆ) 90 ಲಕ್ಷ ಬಹುಮಾನ.
ಐದು ಮತ್ತು ಆರನೇ ಸ್ಥಾನಕ್ಕೆ 45 ಲಕ್ಷ ಬಹುಮಾನ ನೀಡಲಾಗುತ್ತದೆ.

andolanait

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

4 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

4 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

6 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

6 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

6 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

6 hours ago