ಬೆಂಗಳೂರು : 9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ಗೆ ಶುಕ್ರವಾರ ಚಾಲನೆ ದೊರೆಯಲಿದ್ದು, ಭಾರತ ಸೇರಿ ಹಲವು ದೇಶಗಳ ಯುವ, ಪ್ರತಿಭಾನ್ವಿತ ಹಾಗೂ ಅನುಭವಿ ಕಬಡ್ಡಿ ಪಟುಗಳು ಅಂಕಣಕ್ಕಿಳಿಯಲಿದ್ದಾರೆ. ಈ ಹಿಂದಿನಂತೆಯೇ 12 ತಂಡಗಳು ಪ್ರಶಸ್ತಿಗಾಗಿ ಸೆಣಸಲಿದ್ದು, ಭರ್ಜರಿ ಮೂರು ತಿಂಗಳುಗಳ ಕಾಲ ಪಂದ್ಯಾವಳಿ ನಡೆಯಲಿದೆ.
ಲೀಗ್ ಹಂತದ 132 ಪಂದ್ಯಗಳಿಗೆ ಬೆಂಗಳೂರು, ಪುಣೆ ಹಾಗೂ ಹೈದರಾಬಾದ್ ಆತಿಥ್ಯ ವಹಿಸಲಿವೆ. ಮೊದಲ 41 ಪಂದ್ಯಗಳು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿವೆ. ಆ ಬಳಿಕ ಪುಣೆ ನಂತರ ಹೈದರಾಬಾದ್ಗೆ ಲೀಗ್ ಸ್ಥಳಾಂತರಗೊಳ್ಳಲಿದೆ. ಲೀಗ್ ಮುಕ್ತಾಯಕ್ಕೆ ಅಂಕಪಟ್ಟಿಯಲ್ಲಿ ಅಗ್ರ 6 ಸ್ಥಾನಗಳನ್ನು ಪಡೆಯುವ ತಂಡಗಳು ಪ್ಲೇ-ಆಫ್ಗೇರಲಿವೆ. ಪ್ಲೇ-ಆಫ್ನಲ್ಲಿ 2 ಎಲಿಮಿನೇಟರ್, 2 ಸೆಮಿಫೈನಲ್, 1 ಫೈನಲ್ ನಡೆಯಲಿದೆ.
‘ಕೋವಿಡ್ ಭೀತಿ ಕಡಿಮೆಯಾಗಿದ್ದರೂ ಸೋಂಕು ಹರಡುವಿಕೆಯ ಸಾಧ್ಯತೆಯನ್ನು ಕಡೆಗಣಿಸಲು ಆಗುವುದಿಲ್ಲ. ಹೀಗಾಗಿ ಹೆಚ್ಚು ಪ್ರಯಾಣವನ್ನು ತಡೆಯುವ ಉದ್ದೇಶದಿಂದ ಕೇವಲ 3 ನಗರಗಳಲ್ಲಿ ಲೀಗ್ ಹಂತ ನಡೆಸಲಾಗುತ್ತಿದೆ’ ಎಂದು ಲೀಗ್ ಆಯುಕ್ತ ಅನುಪಮ್ ಗೋಸ್ವಾಮಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ…
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…
ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಹಾಗೂ…
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…