ಕ್ರೀಡೆ

ಇಂದಿನಿಂದ (ಅ.7) ಪ್ರೊ ಕಬಡ್ಡಿ ಲೀಗ್‌ ಆರಂಭ

ಬೆಂಗಳೂರು :  9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ಗೆ ಶುಕ್ರವಾರ ಚಾಲನೆ ದೊರೆಯಲಿದ್ದು, ಭಾರತ ಸೇರಿ ಹಲವು ದೇಶಗಳ ಯುವ, ಪ್ರತಿಭಾನ್ವಿತ ಹಾಗೂ ಅನುಭವಿ ಕಬಡ್ಡಿ ಪಟುಗಳು ಅಂಕಣಕ್ಕಿಳಿಯಲಿದ್ದಾರೆ. ಈ ಹಿಂದಿನಂತೆಯೇ 12 ತಂಡಗಳು ಪ್ರಶಸ್ತಿಗಾಗಿ ಸೆಣಸಲಿದ್ದು, ಭರ್ಜರಿ ಮೂರು ತಿಂಗಳುಗಳ ಕಾಲ ಪಂದ್ಯಾವಳಿ ನಡೆಯಲಿದೆ.

ಲೀಗ್‌ ಹಂತದ 132 ಪಂದ್ಯಗಳಿಗೆ ಬೆಂಗಳೂರು, ಪುಣೆ ಹಾಗೂ ಹೈದರಾಬಾದ್‌ ಆತಿಥ್ಯ ವಹಿಸಲಿವೆ. ಮೊದಲ 41 ಪಂದ್ಯಗಳು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿವೆ. ಆ ಬಳಿಕ ಪುಣೆ ನಂತರ ಹೈದರಾಬಾದ್‌ಗೆ ಲೀಗ್‌ ಸ್ಥಳಾಂತರಗೊಳ್ಳಲಿದೆ. ಲೀಗ್‌ ಮುಕ್ತಾಯಕ್ಕೆ ಅಂಕಪಟ್ಟಿಯಲ್ಲಿ ಅಗ್ರ 6 ಸ್ಥಾನಗಳನ್ನು ಪಡೆಯುವ ತಂಡಗಳು ಪ್ಲೇ-ಆಫ್‌ಗೇರಲಿವೆ. ಪ್ಲೇ-ಆಫ್‌ನಲ್ಲಿ 2 ಎಲಿಮಿನೇಟರ್‌, 2 ಸೆಮಿಫೈನಲ್‌, 1 ಫೈನಲ್‌ ನಡೆಯಲಿದೆ.

‘ಕೋವಿಡ್‌ ಭೀತಿ ಕಡಿಮೆಯಾಗಿದ್ದರೂ ಸೋಂಕು ಹರಡುವಿಕೆಯ ಸಾಧ್ಯತೆಯನ್ನು ಕಡೆಗಣಿಸಲು ಆಗುವುದಿಲ್ಲ. ಹೀಗಾಗಿ ಹೆಚ್ಚು ಪ್ರಯಾಣವನ್ನು ತಡೆಯುವ ಉದ್ದೇಶದಿಂದ ಕೇವಲ 3 ನಗರಗಳಲ್ಲಿ ಲೀಗ್‌ ಹಂತ ನಡೆಸಲಾಗುತ್ತಿದೆ’ ಎಂದು ಲೀಗ್‌ ಆಯುಕ್ತ ಅನುಪಮ್‌ ಗೋಸ್ವಾಮಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

andolana

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

3 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

8 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

12 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

12 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

12 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

15 hours ago