ಬೆಂಗಳೂರು : 9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ಗೆ ಶುಕ್ರವಾರ ಚಾಲನೆ ದೊರೆಯಲಿದ್ದು, ಭಾರತ ಸೇರಿ ಹಲವು ದೇಶಗಳ ಯುವ, ಪ್ರತಿಭಾನ್ವಿತ ಹಾಗೂ ಅನುಭವಿ ಕಬಡ್ಡಿ ಪಟುಗಳು ಅಂಕಣಕ್ಕಿಳಿಯಲಿದ್ದಾರೆ. ಈ ಹಿಂದಿನಂತೆಯೇ 12 ತಂಡಗಳು ಪ್ರಶಸ್ತಿಗಾಗಿ ಸೆಣಸಲಿದ್ದು, ಭರ್ಜರಿ ಮೂರು ತಿಂಗಳುಗಳ ಕಾಲ ಪಂದ್ಯಾವಳಿ ನಡೆಯಲಿದೆ.
ಲೀಗ್ ಹಂತದ 132 ಪಂದ್ಯಗಳಿಗೆ ಬೆಂಗಳೂರು, ಪುಣೆ ಹಾಗೂ ಹೈದರಾಬಾದ್ ಆತಿಥ್ಯ ವಹಿಸಲಿವೆ. ಮೊದಲ 41 ಪಂದ್ಯಗಳು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿವೆ. ಆ ಬಳಿಕ ಪುಣೆ ನಂತರ ಹೈದರಾಬಾದ್ಗೆ ಲೀಗ್ ಸ್ಥಳಾಂತರಗೊಳ್ಳಲಿದೆ. ಲೀಗ್ ಮುಕ್ತಾಯಕ್ಕೆ ಅಂಕಪಟ್ಟಿಯಲ್ಲಿ ಅಗ್ರ 6 ಸ್ಥಾನಗಳನ್ನು ಪಡೆಯುವ ತಂಡಗಳು ಪ್ಲೇ-ಆಫ್ಗೇರಲಿವೆ. ಪ್ಲೇ-ಆಫ್ನಲ್ಲಿ 2 ಎಲಿಮಿನೇಟರ್, 2 ಸೆಮಿಫೈನಲ್, 1 ಫೈನಲ್ ನಡೆಯಲಿದೆ.
‘ಕೋವಿಡ್ ಭೀತಿ ಕಡಿಮೆಯಾಗಿದ್ದರೂ ಸೋಂಕು ಹರಡುವಿಕೆಯ ಸಾಧ್ಯತೆಯನ್ನು ಕಡೆಗಣಿಸಲು ಆಗುವುದಿಲ್ಲ. ಹೀಗಾಗಿ ಹೆಚ್ಚು ಪ್ರಯಾಣವನ್ನು ತಡೆಯುವ ಉದ್ದೇಶದಿಂದ ಕೇವಲ 3 ನಗರಗಳಲ್ಲಿ ಲೀಗ್ ಹಂತ ನಡೆಸಲಾಗುತ್ತಿದೆ’ ಎಂದು ಲೀಗ್ ಆಯುಕ್ತ ಅನುಪಮ್ ಗೋಸ್ವಾಮಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…