ಕ್ರೀಡೆ

ಇಂದಿನಿಂದ ಪ್ರೋ ಕಬಡ್ಡಿ ಅಬ್ಬರ ಶುರು

ಅಹಮದಾಬಾದ್‌ : ಇಂದಿನಿಂದ ಪ್ರೋ ಕಬಡ್ಡಿ ಸೀಸನ್‌ 10 ಆರಂಭವಾಗಲಿದ್ದು, ಬರೋಬ್ಬರಿ ಮೂರು ತಿಂಗಳುಗಳ ಕಾಲ ಕ್ರೀಡಾಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಲಿದೆ.

ವರ್ಲ್ಡ್‌ ಕಪ್‌ ಕೈ ತಪ್ಪಿದ ಹತಾಶೆಯಲ್ಲಿದ್ದ ಕ್ರೀಡಾಭಿಮಾನಿಗಳಿಗೆ ಪ್ರೋ ಕಬಡ್ಡಿ ನವ ಚೈತನ್ಯವನ್ನು ನೀಡಿದೆ.

ಕೋವಿಡ್‌ ನಂತರ ಕೆಲವೇ ಕೆಲವು ಕೇಂದ್ರಗಳಿಗೆ ಮಾತ್ರ ಸೀಮಿತವಾಗಿದ್ದ ಕಬಡ್ಡಿ ಪಂದ್ಯಾಟಗಳು ಈ ಬಾರಿ 12 ಫ್ರಾಂಚೈಸಿಗಳ ಕೇಂದ್ರದಲ್ಲಿಯೂ ಕೂಡ ನಡೆಯಲಿವೆ.

ಪ್ರತಿ ದಿನ 2 ಪಂದ್ಯಗಳು ಪ್ರೇಕ್ಷಕರನ್ನು ರಂಜಿಸಲಿವೆ. ರಾತ್ರಿ 8 ಗಂಟೆಗೆ ಮೊದಲ ಪಂದ್ಯ ಆರಂಭವಾಗಲಿದ್ದು, ಎರಡನೇ ಪಂದ್ಯ ರಾತ್ರಿ 9 ಗಂಟೆಗೆ ಆರಂಭವಾಗಲಿದ್ದು, ಪಂದ್ಯಾವಳಿಗಳು ಸ್ಟಾರ್‌ ಸ್ಪೋರ್ಟ್ಸ್‌ ನಲ್ಲಿ ನೇರಪ್ರಸಾರವಾಗಲಿದೆ.

ಪ್ರೋ ಕಬಡ್ಡಿ ಸೀಸನ್‌ 10 ರ ಜಾಹಿರಾತು ಕ್ರಿಡಾಭಿಮಾನಿಗಳ ಜೋಶ್‌ ಹೆಚ್ಚಿಸಿತ್ತು. ಬೆಂಗಳೂರು ಬುಲ್ಸ್ ತಂಡದ ರಾಯಭಾರಿಯಾಗಿರುವ ಸ್ಯಾಂಡಲ್ವುಡ್‌ ಬಾದ್‌ ಶಾ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಈ ಜಾಹಿರಾತಿನ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋದಲ್ಲಿ ಕಿಚ್ಚ ಸುದೀಪ್‌ ಹೊಳೆಯುತ್ತಿರುವ ಬೆಳಗಿನ ಸೂರ್ಯ ರಶ್ಮಿಯ ಬೇಳಕಲ್ಲಿ ಬೆಳ್ಳನೆ ಕುದುರೆಯೇರಿ ರೋಶಾವೇಶದಿಂದ ಬರುತ್ತಾರೆ.

ಈ ಜಾಹಿರಾತನ್ನು ಯಾವುದೇ ಸಿನಿಮಾಗೂ ಕಮ್ಮಿ ಇಲ್ಲದಂತೆ ಶೂಟ್‌ ಮಾಡಲಾಗಿದೆ. ಈ ವಿಡಿಯೋದ ಆರಂಭದಲ್ಲಿ ಕಿಚ್ಚ ಯಾವುದೋ ಯುದ್ಧಕ್ಕೆ ಹೋಗುತ್ತಿರುವ ಖದರ್‌ ನಲ್ಲಿ ಬಿಳಿ ಬಣ್ಣದ ಕುದುರೆಯೇರಿ ರಾಜನಂತೆ ಬರುತ್ತಾರೆ. ನಟ ಬಾಲಯ್ಯ ಕೂಡ ಎದುರಿನಿಂದ ಮತ್ತೊಂದು ಕುದುರೆಯೇರಿ ಬರುತ್ತಾರೆ. ಇವರಿಬ್ಬರೂ ಮುಖಾಮುಖಿಯಾಗಿ ಜಗಜ್ಜೆಟ್ಟಿಗಳಂತೆ ಕಾದಾಡುವಾಗ ಕಬಡ್ಡಿ ನಮ್ದು ಎನ್ನುವ ಸಾಲು ಬರುತ್ತದೆ.

ಇನ್ನು ಈ ವಿಡಿಯೋವನ್ನು ಹಂಚಿಕೊಂಡಿದ್ದ ಬೆಂಗಳೂರು ಬುಲ್ಸ್‌ ತಂಡದ ರಾಯಭಾರಿ ಕಿಚ್ಚ ಸುದೀಪ್‌, ಬರ್ಕಯ್ಯ. ಪೇಪರ್‌ ಮುಂದಾಗಡೆ ಬರ್ಕೋ. ಕಬಡ್ಡಿ ನಮ್ದು. ನೋಡಿರಿ ಪ್ರೋ ಕಬಡ್ಡಿ ಲೀಗ್‌ ಡಿಸೆಂಬರ್‌ 2 ರಾತ್ರಿ 8 ರಿಂದ ನಿಮ್ಮ ಸ್ಟಾರ್‌ ಸ್ಪೋರ್ಟ್ಸ್‌ ಮತ್ತು ಡಿಸ್ನಿ ಪ್ಲಸ್‌ ಹಾಟ್ ಸ್ಟಾರ್‌ ನಲ್ಲಿ ಎಂದು ಬರೆದುಕೊಂಡಿದ್ದರು.

ಇದೀಗ ಪ್ರೋ ಕಬಡ್ಡಿ ಪಂದ್ಯಾವಳಿಗೆ ಕ್ಷಣಗಣನೆ ಆರಂಭವಾಗಿದ್ದು. ಕ್ರೀಡಾಭಿಮಾನಿಗಳು ಕಾತುರದಿಂದ ಕಾದು ಕುಳಿತಿದ್ದಾರೆ.

lokesh

Recent Posts

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

9 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

10 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

10 hours ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

11 hours ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

11 hours ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

11 hours ago