ಕ್ರೀಡೆ

ಇಂದಿನಿಂದ ಪ್ರೋ ಕಬಡ್ಡಿ ಅಬ್ಬರ ಶುರು

ಅಹಮದಾಬಾದ್‌ : ಇಂದಿನಿಂದ ಪ್ರೋ ಕಬಡ್ಡಿ ಸೀಸನ್‌ 10 ಆರಂಭವಾಗಲಿದ್ದು, ಬರೋಬ್ಬರಿ ಮೂರು ತಿಂಗಳುಗಳ ಕಾಲ ಕ್ರೀಡಾಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಲಿದೆ.

ವರ್ಲ್ಡ್‌ ಕಪ್‌ ಕೈ ತಪ್ಪಿದ ಹತಾಶೆಯಲ್ಲಿದ್ದ ಕ್ರೀಡಾಭಿಮಾನಿಗಳಿಗೆ ಪ್ರೋ ಕಬಡ್ಡಿ ನವ ಚೈತನ್ಯವನ್ನು ನೀಡಿದೆ.

ಕೋವಿಡ್‌ ನಂತರ ಕೆಲವೇ ಕೆಲವು ಕೇಂದ್ರಗಳಿಗೆ ಮಾತ್ರ ಸೀಮಿತವಾಗಿದ್ದ ಕಬಡ್ಡಿ ಪಂದ್ಯಾಟಗಳು ಈ ಬಾರಿ 12 ಫ್ರಾಂಚೈಸಿಗಳ ಕೇಂದ್ರದಲ್ಲಿಯೂ ಕೂಡ ನಡೆಯಲಿವೆ.

ಪ್ರತಿ ದಿನ 2 ಪಂದ್ಯಗಳು ಪ್ರೇಕ್ಷಕರನ್ನು ರಂಜಿಸಲಿವೆ. ರಾತ್ರಿ 8 ಗಂಟೆಗೆ ಮೊದಲ ಪಂದ್ಯ ಆರಂಭವಾಗಲಿದ್ದು, ಎರಡನೇ ಪಂದ್ಯ ರಾತ್ರಿ 9 ಗಂಟೆಗೆ ಆರಂಭವಾಗಲಿದ್ದು, ಪಂದ್ಯಾವಳಿಗಳು ಸ್ಟಾರ್‌ ಸ್ಪೋರ್ಟ್ಸ್‌ ನಲ್ಲಿ ನೇರಪ್ರಸಾರವಾಗಲಿದೆ.

ಪ್ರೋ ಕಬಡ್ಡಿ ಸೀಸನ್‌ 10 ರ ಜಾಹಿರಾತು ಕ್ರಿಡಾಭಿಮಾನಿಗಳ ಜೋಶ್‌ ಹೆಚ್ಚಿಸಿತ್ತು. ಬೆಂಗಳೂರು ಬುಲ್ಸ್ ತಂಡದ ರಾಯಭಾರಿಯಾಗಿರುವ ಸ್ಯಾಂಡಲ್ವುಡ್‌ ಬಾದ್‌ ಶಾ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಈ ಜಾಹಿರಾತಿನ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋದಲ್ಲಿ ಕಿಚ್ಚ ಸುದೀಪ್‌ ಹೊಳೆಯುತ್ತಿರುವ ಬೆಳಗಿನ ಸೂರ್ಯ ರಶ್ಮಿಯ ಬೇಳಕಲ್ಲಿ ಬೆಳ್ಳನೆ ಕುದುರೆಯೇರಿ ರೋಶಾವೇಶದಿಂದ ಬರುತ್ತಾರೆ.

ಈ ಜಾಹಿರಾತನ್ನು ಯಾವುದೇ ಸಿನಿಮಾಗೂ ಕಮ್ಮಿ ಇಲ್ಲದಂತೆ ಶೂಟ್‌ ಮಾಡಲಾಗಿದೆ. ಈ ವಿಡಿಯೋದ ಆರಂಭದಲ್ಲಿ ಕಿಚ್ಚ ಯಾವುದೋ ಯುದ್ಧಕ್ಕೆ ಹೋಗುತ್ತಿರುವ ಖದರ್‌ ನಲ್ಲಿ ಬಿಳಿ ಬಣ್ಣದ ಕುದುರೆಯೇರಿ ರಾಜನಂತೆ ಬರುತ್ತಾರೆ. ನಟ ಬಾಲಯ್ಯ ಕೂಡ ಎದುರಿನಿಂದ ಮತ್ತೊಂದು ಕುದುರೆಯೇರಿ ಬರುತ್ತಾರೆ. ಇವರಿಬ್ಬರೂ ಮುಖಾಮುಖಿಯಾಗಿ ಜಗಜ್ಜೆಟ್ಟಿಗಳಂತೆ ಕಾದಾಡುವಾಗ ಕಬಡ್ಡಿ ನಮ್ದು ಎನ್ನುವ ಸಾಲು ಬರುತ್ತದೆ.

ಇನ್ನು ಈ ವಿಡಿಯೋವನ್ನು ಹಂಚಿಕೊಂಡಿದ್ದ ಬೆಂಗಳೂರು ಬುಲ್ಸ್‌ ತಂಡದ ರಾಯಭಾರಿ ಕಿಚ್ಚ ಸುದೀಪ್‌, ಬರ್ಕಯ್ಯ. ಪೇಪರ್‌ ಮುಂದಾಗಡೆ ಬರ್ಕೋ. ಕಬಡ್ಡಿ ನಮ್ದು. ನೋಡಿರಿ ಪ್ರೋ ಕಬಡ್ಡಿ ಲೀಗ್‌ ಡಿಸೆಂಬರ್‌ 2 ರಾತ್ರಿ 8 ರಿಂದ ನಿಮ್ಮ ಸ್ಟಾರ್‌ ಸ್ಪೋರ್ಟ್ಸ್‌ ಮತ್ತು ಡಿಸ್ನಿ ಪ್ಲಸ್‌ ಹಾಟ್ ಸ್ಟಾರ್‌ ನಲ್ಲಿ ಎಂದು ಬರೆದುಕೊಂಡಿದ್ದರು.

ಇದೀಗ ಪ್ರೋ ಕಬಡ್ಡಿ ಪಂದ್ಯಾವಳಿಗೆ ಕ್ಷಣಗಣನೆ ಆರಂಭವಾಗಿದ್ದು. ಕ್ರೀಡಾಭಿಮಾನಿಗಳು ಕಾತುರದಿಂದ ಕಾದು ಕುಳಿತಿದ್ದಾರೆ.

lokesh

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

5 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago