ಅಹಮದಾಬಾದ್ : ಇಂದಿನಿಂದ ಪ್ರೋ ಕಬಡ್ಡಿ ಸೀಸನ್ 10 ಆರಂಭವಾಗಲಿದ್ದು, ಬರೋಬ್ಬರಿ ಮೂರು ತಿಂಗಳುಗಳ ಕಾಲ ಕ್ರೀಡಾಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಲಿದೆ.
ವರ್ಲ್ಡ್ ಕಪ್ ಕೈ ತಪ್ಪಿದ ಹತಾಶೆಯಲ್ಲಿದ್ದ ಕ್ರೀಡಾಭಿಮಾನಿಗಳಿಗೆ ಪ್ರೋ ಕಬಡ್ಡಿ ನವ ಚೈತನ್ಯವನ್ನು ನೀಡಿದೆ.
ಕೋವಿಡ್ ನಂತರ ಕೆಲವೇ ಕೆಲವು ಕೇಂದ್ರಗಳಿಗೆ ಮಾತ್ರ ಸೀಮಿತವಾಗಿದ್ದ ಕಬಡ್ಡಿ ಪಂದ್ಯಾಟಗಳು ಈ ಬಾರಿ 12 ಫ್ರಾಂಚೈಸಿಗಳ ಕೇಂದ್ರದಲ್ಲಿಯೂ ಕೂಡ ನಡೆಯಲಿವೆ.
ಪ್ರತಿ ದಿನ 2 ಪಂದ್ಯಗಳು ಪ್ರೇಕ್ಷಕರನ್ನು ರಂಜಿಸಲಿವೆ. ರಾತ್ರಿ 8 ಗಂಟೆಗೆ ಮೊದಲ ಪಂದ್ಯ ಆರಂಭವಾಗಲಿದ್ದು, ಎರಡನೇ ಪಂದ್ಯ ರಾತ್ರಿ 9 ಗಂಟೆಗೆ ಆರಂಭವಾಗಲಿದ್ದು, ಪಂದ್ಯಾವಳಿಗಳು ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರವಾಗಲಿದೆ.
ಪ್ರೋ ಕಬಡ್ಡಿ ಸೀಸನ್ 10 ರ ಜಾಹಿರಾತು ಕ್ರಿಡಾಭಿಮಾನಿಗಳ ಜೋಶ್ ಹೆಚ್ಚಿಸಿತ್ತು. ಬೆಂಗಳೂರು ಬುಲ್ಸ್ ತಂಡದ ರಾಯಭಾರಿಯಾಗಿರುವ ಸ್ಯಾಂಡಲ್ವುಡ್ ಬಾದ್ ಶಾ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ಜಾಹಿರಾತಿನ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋದಲ್ಲಿ ಕಿಚ್ಚ ಸುದೀಪ್ ಹೊಳೆಯುತ್ತಿರುವ ಬೆಳಗಿನ ಸೂರ್ಯ ರಶ್ಮಿಯ ಬೇಳಕಲ್ಲಿ ಬೆಳ್ಳನೆ ಕುದುರೆಯೇರಿ ರೋಶಾವೇಶದಿಂದ ಬರುತ್ತಾರೆ.
ಈ ಜಾಹಿರಾತನ್ನು ಯಾವುದೇ ಸಿನಿಮಾಗೂ ಕಮ್ಮಿ ಇಲ್ಲದಂತೆ ಶೂಟ್ ಮಾಡಲಾಗಿದೆ. ಈ ವಿಡಿಯೋದ ಆರಂಭದಲ್ಲಿ ಕಿಚ್ಚ ಯಾವುದೋ ಯುದ್ಧಕ್ಕೆ ಹೋಗುತ್ತಿರುವ ಖದರ್ ನಲ್ಲಿ ಬಿಳಿ ಬಣ್ಣದ ಕುದುರೆಯೇರಿ ರಾಜನಂತೆ ಬರುತ್ತಾರೆ. ನಟ ಬಾಲಯ್ಯ ಕೂಡ ಎದುರಿನಿಂದ ಮತ್ತೊಂದು ಕುದುರೆಯೇರಿ ಬರುತ್ತಾರೆ. ಇವರಿಬ್ಬರೂ ಮುಖಾಮುಖಿಯಾಗಿ ಜಗಜ್ಜೆಟ್ಟಿಗಳಂತೆ ಕಾದಾಡುವಾಗ ಕಬಡ್ಡಿ ನಮ್ದು ಎನ್ನುವ ಸಾಲು ಬರುತ್ತದೆ.
ಇನ್ನು ಈ ವಿಡಿಯೋವನ್ನು ಹಂಚಿಕೊಂಡಿದ್ದ ಬೆಂಗಳೂರು ಬುಲ್ಸ್ ತಂಡದ ರಾಯಭಾರಿ ಕಿಚ್ಚ ಸುದೀಪ್, ಬರ್ಕಯ್ಯ. ಪೇಪರ್ ಮುಂದಾಗಡೆ ಬರ್ಕೋ. ಕಬಡ್ಡಿ ನಮ್ದು. ನೋಡಿರಿ ಪ್ರೋ ಕಬಡ್ಡಿ ಲೀಗ್ ಡಿಸೆಂಬರ್ 2 ರಾತ್ರಿ 8 ರಿಂದ ನಿಮ್ಮ ಸ್ಟಾರ್ ಸ್ಪೋರ್ಟ್ಸ್ ಮತ್ತು ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ನಲ್ಲಿ ಎಂದು ಬರೆದುಕೊಂಡಿದ್ದರು.
ಇದೀಗ ಪ್ರೋ ಕಬಡ್ಡಿ ಪಂದ್ಯಾವಳಿಗೆ ಕ್ಷಣಗಣನೆ ಆರಂಭವಾಗಿದ್ದು. ಕ್ರೀಡಾಭಿಮಾನಿಗಳು ಕಾತುರದಿಂದ ಕಾದು ಕುಳಿತಿದ್ದಾರೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…