ಅಹಮದಾಬಾದ್ : ಇಂದಿನಿಂದ ಪ್ರೋ ಕಬಡ್ಡಿ ಸೀಸನ್ 10 ಆರಂಭವಾಗಲಿದ್ದು, ಬರೋಬ್ಬರಿ ಮೂರು ತಿಂಗಳುಗಳ ಕಾಲ ಕ್ರೀಡಾಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಲಿದೆ.
ವರ್ಲ್ಡ್ ಕಪ್ ಕೈ ತಪ್ಪಿದ ಹತಾಶೆಯಲ್ಲಿದ್ದ ಕ್ರೀಡಾಭಿಮಾನಿಗಳಿಗೆ ಪ್ರೋ ಕಬಡ್ಡಿ ನವ ಚೈತನ್ಯವನ್ನು ನೀಡಿದೆ.
ಕೋವಿಡ್ ನಂತರ ಕೆಲವೇ ಕೆಲವು ಕೇಂದ್ರಗಳಿಗೆ ಮಾತ್ರ ಸೀಮಿತವಾಗಿದ್ದ ಕಬಡ್ಡಿ ಪಂದ್ಯಾಟಗಳು ಈ ಬಾರಿ 12 ಫ್ರಾಂಚೈಸಿಗಳ ಕೇಂದ್ರದಲ್ಲಿಯೂ ಕೂಡ ನಡೆಯಲಿವೆ.
ಪ್ರತಿ ದಿನ 2 ಪಂದ್ಯಗಳು ಪ್ರೇಕ್ಷಕರನ್ನು ರಂಜಿಸಲಿವೆ. ರಾತ್ರಿ 8 ಗಂಟೆಗೆ ಮೊದಲ ಪಂದ್ಯ ಆರಂಭವಾಗಲಿದ್ದು, ಎರಡನೇ ಪಂದ್ಯ ರಾತ್ರಿ 9 ಗಂಟೆಗೆ ಆರಂಭವಾಗಲಿದ್ದು, ಪಂದ್ಯಾವಳಿಗಳು ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರವಾಗಲಿದೆ.
ಪ್ರೋ ಕಬಡ್ಡಿ ಸೀಸನ್ 10 ರ ಜಾಹಿರಾತು ಕ್ರಿಡಾಭಿಮಾನಿಗಳ ಜೋಶ್ ಹೆಚ್ಚಿಸಿತ್ತು. ಬೆಂಗಳೂರು ಬುಲ್ಸ್ ತಂಡದ ರಾಯಭಾರಿಯಾಗಿರುವ ಸ್ಯಾಂಡಲ್ವುಡ್ ಬಾದ್ ಶಾ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ಜಾಹಿರಾತಿನ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋದಲ್ಲಿ ಕಿಚ್ಚ ಸುದೀಪ್ ಹೊಳೆಯುತ್ತಿರುವ ಬೆಳಗಿನ ಸೂರ್ಯ ರಶ್ಮಿಯ ಬೇಳಕಲ್ಲಿ ಬೆಳ್ಳನೆ ಕುದುರೆಯೇರಿ ರೋಶಾವೇಶದಿಂದ ಬರುತ್ತಾರೆ.
ಈ ಜಾಹಿರಾತನ್ನು ಯಾವುದೇ ಸಿನಿಮಾಗೂ ಕಮ್ಮಿ ಇಲ್ಲದಂತೆ ಶೂಟ್ ಮಾಡಲಾಗಿದೆ. ಈ ವಿಡಿಯೋದ ಆರಂಭದಲ್ಲಿ ಕಿಚ್ಚ ಯಾವುದೋ ಯುದ್ಧಕ್ಕೆ ಹೋಗುತ್ತಿರುವ ಖದರ್ ನಲ್ಲಿ ಬಿಳಿ ಬಣ್ಣದ ಕುದುರೆಯೇರಿ ರಾಜನಂತೆ ಬರುತ್ತಾರೆ. ನಟ ಬಾಲಯ್ಯ ಕೂಡ ಎದುರಿನಿಂದ ಮತ್ತೊಂದು ಕುದುರೆಯೇರಿ ಬರುತ್ತಾರೆ. ಇವರಿಬ್ಬರೂ ಮುಖಾಮುಖಿಯಾಗಿ ಜಗಜ್ಜೆಟ್ಟಿಗಳಂತೆ ಕಾದಾಡುವಾಗ ಕಬಡ್ಡಿ ನಮ್ದು ಎನ್ನುವ ಸಾಲು ಬರುತ್ತದೆ.
ಇನ್ನು ಈ ವಿಡಿಯೋವನ್ನು ಹಂಚಿಕೊಂಡಿದ್ದ ಬೆಂಗಳೂರು ಬುಲ್ಸ್ ತಂಡದ ರಾಯಭಾರಿ ಕಿಚ್ಚ ಸುದೀಪ್, ಬರ್ಕಯ್ಯ. ಪೇಪರ್ ಮುಂದಾಗಡೆ ಬರ್ಕೋ. ಕಬಡ್ಡಿ ನಮ್ದು. ನೋಡಿರಿ ಪ್ರೋ ಕಬಡ್ಡಿ ಲೀಗ್ ಡಿಸೆಂಬರ್ 2 ರಾತ್ರಿ 8 ರಿಂದ ನಿಮ್ಮ ಸ್ಟಾರ್ ಸ್ಪೋರ್ಟ್ಸ್ ಮತ್ತು ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ನಲ್ಲಿ ಎಂದು ಬರೆದುಕೊಂಡಿದ್ದರು.
ಇದೀಗ ಪ್ರೋ ಕಬಡ್ಡಿ ಪಂದ್ಯಾವಳಿಗೆ ಕ್ಷಣಗಣನೆ ಆರಂಭವಾಗಿದ್ದು. ಕ್ರೀಡಾಭಿಮಾನಿಗಳು ಕಾತುರದಿಂದ ಕಾದು ಕುಳಿತಿದ್ದಾರೆ.
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ತಮಿಳುನಾಡಿನಲ್ಲಿ ಡಿಎಂಕೆ 71ಕ್ಕೂ ಹೆಚ್ಚು…
ಪ್ರಶಾಂತ್ ಎಸ್. ಮನೆಗಳ ಮುಂದೆ ನಿಲ್ಲುವ ಚರಂಡಿ ನೀರು! ವಾರ್ಡ್ ಸಂಖ್ಯೆ ೬೫ರ ನಿವಾಸಿಗಳಿಗೆ ತಪ್ಪದ ಸಂಕಷ್ಟ ಮೈಸೂರು: ಸಣ್ಣ…
ಮಂಜು ಕೋಟೆ ಎಚ್.ಡಿ.ಕೋಟೆ ತಾಲ್ಲೂಕಿನ ಗೂಳೂರು ಹಾಡಿ ಜನರು ಪ್ರತಿನಿತ್ಯ ಎದುರಿಸುತ್ತಿರುವ ದಯನೀಯ ಸ್ಥಿತಿಯಿದು ಎಚ್.ಡಿ.ಕೋಟೆ: ರಾಜ್ಯದಲ್ಲಿ ಯಾವುದೇ ಸರ್ಕಾರ…
ಕೋಲ್ಕತ್ತಾ: ತೀವ್ರ ಹಣಾಹಣಿ ಏರ್ಪಟ್ಟಿರುವ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.…
ಕೆ.ಬಿ.ರಮೇಶನಾಯಕ ಪ್ರತಿನಿತ್ಯ ೯.೨೭ ಲಕ್ಷ ಲೀಟರ್ ಹಾಲು ಉತ್ಪಾದನೆ ಪ್ರಸಕ್ತ ಸಾಲಿನಲ್ಲಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಮೈಸೂರು: ಹೈನುಗಾರಿಕೆಯನ್ನು ನಂಬಿರುವ…
ಬೆಂಗಳೂರು: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಿದೆ. ಅದೇ ರೀತಿ…