ಕ್ರೀಡೆ

ProKabaddi : ಚಾಂಪಿಯನ್ ಪಟ್ಟ ಅಲಂಕರಿಸಿದ ʼಜೈಪುರ ಪಿಂಕ್ ಪ್ಯಾಂಥರ್ಸ್ʼ

ಮುಂಬೈ: ಪ್ರೊ ಕಬಡ್ಡಿ ಲೀಗ್ ಸೀಸನ್ 9ರ ರೋಚಕ ಫೈನಲ್​ನಲ್ಲಿ ಪುಣೇರಿ ಪಲ್ಟನ್ ತಂಡವನ್ನು 33-29ರಿಂದ ಮಣಿಸಿದ ಜೈಪುರ ಪಿಂಕ್ ಪ್ಯಾಂಥರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಎರಡನೇ ಬಾರಿಗೆ ಪಿಂಕ್ ಪ್ಯಾಂಥರ್ಸ್ ತಂಡವು ಪ್ರೊ ಕಬಡ್ಡಿ ಲೀಗ್ ಪ್ರಶಸ್ತಿ ಜಯಿಸಿತು.
ಫೈನಲ್​ ಹಣಾಹಣಿಯಲ್ಲಿ ವಿ ಅಜಿತ್, ಸುನಿಲ್ ಕುಮಾರ್ ಮತ್ತು ಅರ್ಜುನ್ ದೇಶ್ವಾಲ್ ಅವರು ತಲಾ 6 ಅಂಕ ಗಳಿಸಿ ಜೈಪುರ ತಂಡದ ಅತ್ಯುತ್ತಮ ಆಟಗಾರರಾಗಿ ಹೊರಹೊಮ್ಮಿದರು. ಪಂದ್ಯಾರಂಭದ ನಿಮಿಷಗಳಲ್ಲಿ ಪಂಕಜ್ ಮೋಹಿತ್​ ಅದ್ಭುತ ದಾಳಿ ನಡೆಸಿ ಪುಣೇರಿ ಪಲ್ಟನ್ 3-1 ಮುನ್ನಡೆ ನೀಡಿದ್ದರು. ಆದರೆ, ಜೈಪುರ ತಂಡ ಮರುಹೋರಾಟ ನಡೆಸಿ 3-3ರಿಂದ ಸಮಬಲ ಸಾಧಿಸಿತು. ಬಳಿಕ ಒಂಬತ್ತನೇ ನಿಮಿಷದ ವೇಳೆಗೆ ಪುಣೆ ತಂಡವು 5-4ರಲ್ಲಿ ಮುನ್ನಡೆಯಲ್ಲಿತ್ತು.ಆ ಬಳಿಕ, ವಿ ಅಜಿತ್ ತಮ್ಮ ಪರಾಕ್ರಮ ಪ್ರದರ್ಶಿಸತೊಡಗಿದ್ದರಿಂದ ಜೈಪುರವು 6-6ರಲ್ಲಿ ಸ್ಕೋರ್ ಸಮಗೊಳಿಸಿತು. ಎರಡೂ ಕಡೆಯಿಂದ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದ್ದ ಸಂದರ್ಭದಲ್ಲಿ ಮೊಹಮ್ಮದ್ ನಬಿಬಕ್ಷ್ ಕ್ಷಿಪ್ರ ದಾಳಿ ಮತ್ತು ಟ್ಯಾಕಲ್ ಪಾಯಿಂಟ್ ಕಬಳಿಸಿ 16ನೇ ನಿಮಿಷದ ವೇಳೆಗೆ ಪುಣೆಗೆ 10-8ರಲ್ಲಿ ಮುನ್ನಡೆಗೆ ನೆರವಾದರು.

ಆದರೆ, 19ನೇ ನಿಮಿಷದಲ್ಲಿ ಪ್ಯಾಂಥರ್ಸ್​ನ ಅಜಿತ್‌ ಅವರು ಸಂಕೇತ್‌ ಸಾವಂತ್‌ ಮತ್ತು ಗೌರವ್‌ ಖತ್ರಿಯನ್ನು ಕ್ಯಾಚ್‌ ಔಟ್‌ ಮಾಡಿದರು. ವಿರಾಮದ ವೇಳೆಗೆ ಪ್ಯಾಂಥರ್ಸ್ 14-12ರಲ್ಲಿ ಮುನ್ನಡೆ ಕಾಯ್ದುಕೊಂಡಿತು. ಆದಿತ್ಯ ಶಿಂಧೆ ಅವರನ್ನು ಟ್ಯಾಕಲ್​ ಮಾಡಿದ ಪ್ಯಾಂಥರ್ಸ್ 22ನೇ ನಿಮಿಷದಲ್ಲಿ ಪಲ್ಟನ್ ತಂಡವನ್ನು ಆಲೌಟ್ ಮಾಡಿ 18-13 ಮುನ್ನಡೆ ಸಾಧಿಸಿತು. ಆದರೂ ಸಹ ಆಕಾಶ್ ಶಿಂಧೆ ಕೆಲ ಪಾಯಿಂಟ್ ರೈಡ್​ಗಳು ಹಾಗೂ ಅಜಿತ್​ರನ್ನು ಟ್ಯಾಕಲ್​ ಮಾಡಿದ ಪುಣೆ 17-18ರ ಸ್ಕೋರ್‌ನತ್ತ ತಲುಪಿತು. ಆದರೆ ಅಂಕುಶ್ ಅವರು ಆಕಾಶ್ ಶಿಂಧೆಯನ್ನು ಟ್ಯಾಕಲ್​ ಮಾಡಿ, ಪ್ಯಾಂಥರ್ಸ್ ಮುನ್ನಡೆಯನ್ನು ಹಿಗ್ಗಿಸಿದರು. ಕೆಲ ಹೊತ್ತಲ್ಲೇ ಆದಿತ್ಯ ಶಿಂಧೆ ಅವರು ಅಂಕುಶ್ ಮತ್ತು ಸಾಹುಲ್ ಕುಮಾರ್ ಅವರನ್ನು ಕ್ಯಾಚ್ ಔಟ್ ಮಾಡುವ ಮೂಲಕ ಪುಣೆ ತಂಡವನ್ನು 20-23 ಸ್ಕೋರ್​​ನತ್ತ ಕೊಂಡೊಯ್ದರು.ಬಳಿಕ 34ನೇ ನಿಮಿಷದಲ್ಲಿ 27-22ರಲ್ಲಿ ಮುನ್ನಡೆ ಕಾಯ್ದುಕೊಂಡ ಜೈಪುರ ತಂಡದ ನಾಯಕ ಸುನಿಲ್ ಕುಮಾರ್ ಒಂದೆರಡು ಅದ್ಭುತ ಟ್ಯಾಕಲ್ ಪಾಯಿಂಟ್‌ ದೋಚಿದರು. ಆದರೂ ಬೆಂಬಿಡದ ಪುಣೆ ತಂಡ 38ನೇ ನಿಮಿಷದಲ್ಲಿ ದೇಶ್ವಾಲ್ ಅವರನ್ನು ಟ್ಯಾಕಲ್ ಮಾಡಿ 25-29ರ ಸ್ಕೋರ್​ ತಲುಪಿತು
ನಂತರ, ಬಾದಲ್ ಸಿಂಗ್ ಅವರು ವಿ ಅಜಿತ್​​ರನ್ನು ಟ್ಯಾಕಲ್​ ಮಾಡಿದರೆ, ಆದಿತ್ಯ ಶಿಂಧೆ ಅವರು ಅದ್ಭುತ ರೈಡಿಂಗ್​ ಮಾಡಿದರು. ಆದರೆ ಪಂದ್ಯದ ಕೊನೆಯ ನಿಮಿಷಗಳಲ್ಲಿ ಪ್ಯಾಂಥರ್ಸ್ 31-29ರಲ್ಲಿ ಮುನ್ನಡೆ ಹೊಂದಿದ್ದಲ್ಲದೆ, ಪಲ್ಟಾನ್​ಗೆ ಅಂಕ ಗಳಿಸಲು ಕಡಿವಾಣ ಹಾಕುವ ಮೂಲಕ ಗೆಲುವು ತನ್ನದಾಗಿಸಿಕೊಂಡಿತು. ಪಂದ್ಯದ ಅಂತಿಮ ಸೆಕೆಂಡ್​ಗಳಲ್ಲಿ ಸಮಯೋಚಿತ ಆಟವಾಡಿದ ಪ್ಯಾಂಥರ್ಸ್ ತಂಡ ಎರಡನೇ ಪ್ರೊ ಕಬಡ್ಡಿ ಲೀಗ್ ಪ್ರಶಸ್ತಿಗೆ ಮುತ್ತಿಕ್ಕಿತು.

andolanait

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

12 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

12 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

12 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

13 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

14 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

14 hours ago