ಮುಂಬೈ: ಪ್ರೊ ಕಬಡ್ಡಿ ಲೀಗ್ ಸೀಸನ್ 9ರ ರೋಚಕ ಫೈನಲ್ನಲ್ಲಿ ಪುಣೇರಿ ಪಲ್ಟನ್ ತಂಡವನ್ನು 33-29ರಿಂದ ಮಣಿಸಿದ ಜೈಪುರ ಪಿಂಕ್ ಪ್ಯಾಂಥರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಎರಡನೇ ಬಾರಿಗೆ ಪಿಂಕ್ ಪ್ಯಾಂಥರ್ಸ್ ತಂಡವು ಪ್ರೊ ಕಬಡ್ಡಿ ಲೀಗ್ ಪ್ರಶಸ್ತಿ ಜಯಿಸಿತು.
ಫೈನಲ್ ಹಣಾಹಣಿಯಲ್ಲಿ ವಿ ಅಜಿತ್, ಸುನಿಲ್ ಕುಮಾರ್ ಮತ್ತು ಅರ್ಜುನ್ ದೇಶ್ವಾಲ್ ಅವರು ತಲಾ 6 ಅಂಕ ಗಳಿಸಿ ಜೈಪುರ ತಂಡದ ಅತ್ಯುತ್ತಮ ಆಟಗಾರರಾಗಿ ಹೊರಹೊಮ್ಮಿದರು. ಪಂದ್ಯಾರಂಭದ ನಿಮಿಷಗಳಲ್ಲಿ ಪಂಕಜ್ ಮೋಹಿತ್ ಅದ್ಭುತ ದಾಳಿ ನಡೆಸಿ ಪುಣೇರಿ ಪಲ್ಟನ್ 3-1 ಮುನ್ನಡೆ ನೀಡಿದ್ದರು. ಆದರೆ, ಜೈಪುರ ತಂಡ ಮರುಹೋರಾಟ ನಡೆಸಿ 3-3ರಿಂದ ಸಮಬಲ ಸಾಧಿಸಿತು. ಬಳಿಕ ಒಂಬತ್ತನೇ ನಿಮಿಷದ ವೇಳೆಗೆ ಪುಣೆ ತಂಡವು 5-4ರಲ್ಲಿ ಮುನ್ನಡೆಯಲ್ಲಿತ್ತು.ಆ ಬಳಿಕ, ವಿ ಅಜಿತ್ ತಮ್ಮ ಪರಾಕ್ರಮ ಪ್ರದರ್ಶಿಸತೊಡಗಿದ್ದರಿಂದ ಜೈಪುರವು 6-6ರಲ್ಲಿ ಸ್ಕೋರ್ ಸಮಗೊಳಿಸಿತು. ಎರಡೂ ಕಡೆಯಿಂದ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದ್ದ ಸಂದರ್ಭದಲ್ಲಿ ಮೊಹಮ್ಮದ್ ನಬಿಬಕ್ಷ್ ಕ್ಷಿಪ್ರ ದಾಳಿ ಮತ್ತು ಟ್ಯಾಕಲ್ ಪಾಯಿಂಟ್ ಕಬಳಿಸಿ 16ನೇ ನಿಮಿಷದ ವೇಳೆಗೆ ಪುಣೆಗೆ 10-8ರಲ್ಲಿ ಮುನ್ನಡೆಗೆ ನೆರವಾದರು.
ಆದರೆ, 19ನೇ ನಿಮಿಷದಲ್ಲಿ ಪ್ಯಾಂಥರ್ಸ್ನ ಅಜಿತ್ ಅವರು ಸಂಕೇತ್ ಸಾವಂತ್ ಮತ್ತು ಗೌರವ್ ಖತ್ರಿಯನ್ನು ಕ್ಯಾಚ್ ಔಟ್ ಮಾಡಿದರು. ವಿರಾಮದ ವೇಳೆಗೆ ಪ್ಯಾಂಥರ್ಸ್ 14-12ರಲ್ಲಿ ಮುನ್ನಡೆ ಕಾಯ್ದುಕೊಂಡಿತು. ಆದಿತ್ಯ ಶಿಂಧೆ ಅವರನ್ನು ಟ್ಯಾಕಲ್ ಮಾಡಿದ ಪ್ಯಾಂಥರ್ಸ್ 22ನೇ ನಿಮಿಷದಲ್ಲಿ ಪಲ್ಟನ್ ತಂಡವನ್ನು ಆಲೌಟ್ ಮಾಡಿ 18-13 ಮುನ್ನಡೆ ಸಾಧಿಸಿತು. ಆದರೂ ಸಹ ಆಕಾಶ್ ಶಿಂಧೆ ಕೆಲ ಪಾಯಿಂಟ್ ರೈಡ್ಗಳು ಹಾಗೂ ಅಜಿತ್ರನ್ನು ಟ್ಯಾಕಲ್ ಮಾಡಿದ ಪುಣೆ 17-18ರ ಸ್ಕೋರ್ನತ್ತ ತಲುಪಿತು. ಆದರೆ ಅಂಕುಶ್ ಅವರು ಆಕಾಶ್ ಶಿಂಧೆಯನ್ನು ಟ್ಯಾಕಲ್ ಮಾಡಿ, ಪ್ಯಾಂಥರ್ಸ್ ಮುನ್ನಡೆಯನ್ನು ಹಿಗ್ಗಿಸಿದರು. ಕೆಲ ಹೊತ್ತಲ್ಲೇ ಆದಿತ್ಯ ಶಿಂಧೆ ಅವರು ಅಂಕುಶ್ ಮತ್ತು ಸಾಹುಲ್ ಕುಮಾರ್ ಅವರನ್ನು ಕ್ಯಾಚ್ ಔಟ್ ಮಾಡುವ ಮೂಲಕ ಪುಣೆ ತಂಡವನ್ನು 20-23 ಸ್ಕೋರ್ನತ್ತ ಕೊಂಡೊಯ್ದರು.ಬಳಿಕ 34ನೇ ನಿಮಿಷದಲ್ಲಿ 27-22ರಲ್ಲಿ ಮುನ್ನಡೆ ಕಾಯ್ದುಕೊಂಡ ಜೈಪುರ ತಂಡದ ನಾಯಕ ಸುನಿಲ್ ಕುಮಾರ್ ಒಂದೆರಡು ಅದ್ಭುತ ಟ್ಯಾಕಲ್ ಪಾಯಿಂಟ್ ದೋಚಿದರು. ಆದರೂ ಬೆಂಬಿಡದ ಪುಣೆ ತಂಡ 38ನೇ ನಿಮಿಷದಲ್ಲಿ ದೇಶ್ವಾಲ್ ಅವರನ್ನು ಟ್ಯಾಕಲ್ ಮಾಡಿ 25-29ರ ಸ್ಕೋರ್ ತಲುಪಿತು
ನಂತರ, ಬಾದಲ್ ಸಿಂಗ್ ಅವರು ವಿ ಅಜಿತ್ರನ್ನು ಟ್ಯಾಕಲ್ ಮಾಡಿದರೆ, ಆದಿತ್ಯ ಶಿಂಧೆ ಅವರು ಅದ್ಭುತ ರೈಡಿಂಗ್ ಮಾಡಿದರು. ಆದರೆ ಪಂದ್ಯದ ಕೊನೆಯ ನಿಮಿಷಗಳಲ್ಲಿ ಪ್ಯಾಂಥರ್ಸ್ 31-29ರಲ್ಲಿ ಮುನ್ನಡೆ ಹೊಂದಿದ್ದಲ್ಲದೆ, ಪಲ್ಟಾನ್ಗೆ ಅಂಕ ಗಳಿಸಲು ಕಡಿವಾಣ ಹಾಕುವ ಮೂಲಕ ಗೆಲುವು ತನ್ನದಾಗಿಸಿಕೊಂಡಿತು. ಪಂದ್ಯದ ಅಂತಿಮ ಸೆಕೆಂಡ್ಗಳಲ್ಲಿ ಸಮಯೋಚಿತ ಆಟವಾಡಿದ ಪ್ಯಾಂಥರ್ಸ್ ತಂಡ ಎರಡನೇ ಪ್ರೊ ಕಬಡ್ಡಿ ಲೀಗ್ ಪ್ರಶಸ್ತಿಗೆ ಮುತ್ತಿಕ್ಕಿತು.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…