ಕ್ರೀಡೆ

IPL 2024: ಶಶಾಂಕ್‌ ಅಮೋಘ ಅರ್ಧಶತಕದಾಟ: ಜಿಟಿ ವಿರುದ್ಧ ಪಂಜಾಬ್‌ಗೆ ಭರ್ಜರಿ ಜಯ!

ಅಹಮದಾಬಾದ್‌: ಶಶಾಂಕ್‌ ಸಿಂಗ್‌ ಅವರ ಏಕಾಂಗಿ ಹೋರಾಟದ ಫಲವಾಗಿ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ಮೂರು ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಗುಜರಾತ್‌ ನಿಗದಿತ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿತು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಪಂಜಾಬ್‌ 19.5 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 200 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

ಗುಜರಾತ್‌ ಇನ್ನಿಂಗ್ಸ್‌: ಪಂಜಾಬ್ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ ಗಿಲ್ (89*) ಆಕರ್ಷಕ ಅರ್ಧಶತಕ ಗಳಿಸಿದರು. ಅವರಿಗೆ ಕೇನ್ ವಿಲಿಯನ್ (26) ಹಾಗೂ ಸಾಯ್ ಸುದರ್ಶನ್ (33) ಸಹಕರಿಸಿದರು. ಉಳಿದಂತೆ ವೃದ್ಧಿಮಾನ್ ಸಹಾ 11 ಹಾಗೂ ವಿಜಯ್ ಶಂಕರ್ 8 ರನ್ ಗಳಿಸಿದರು. ಕೊನೆಯ ಹಂತದಲ್ಲಿ ರಾಹುಲ್ ತೆವಾಟಿಯಾ 8 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಿತ ಅಜೇಯ 23 ರನ್ ಗಳಿಸಿ ತಂಡದ ಅಂಕ ಇನ್ನೂರರ ಗಡಿ ದಾಟಲು ಸಹಕರಿಸಿದರು.

ಪಂಜಾಬ್‌ ಪರ ಕಗಿಸೋ ರಬಾಡ ಎರಡು ವಿಕೆಟ್ ಗಳಿಸಿದರು. ಹರ್ಪ್ರೀತ್‌ ಬ್ರಾರ್‌ ಹಾಗೂ ಹರ್ಷಲ್‌ ಪಟೇಲ್‌ ತಲಾ ಒಂದು ವಿಕೆಟ್‌ ಕಿತ್ತರು.

ಪಂಜಾಬ್‌ ಇನ್ನಿಂಗ್ಸ್‌: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಪಂಜಾಬ್‌ಗೆ ಆರಂಭಿಕ ಆಘಾತ ಉಂಟಾಯಿತು. ನಾಯಕ ಶಿಖರ್‌ ಧವನ್‌ ಕೇವಲ ಒಂದು ರನ್‌ ಗಳಿಸಿ ಬಂದ ಹಾದಿಯಲ್ಲೇ ಹಿಂತಿರುಗಿದರು. ಬಳಿಕ ಬೇರ್‌ಸ್ಟೋ ಜೊತೆಯಾದ ಪ್ರಭ್‌ಸಿಮ್ರಾನ್‌ ಕೆಲಕಾಲ ಜಿಟಿ ಬೌಲರ್‌ಗಳನ್ನು ಕಾಡಿದರು. ಈ ಇಬ್ಬರು ಕ್ರಮವಾಗಿ 22 ಮತ್ತು 35 ರನ್‌ ಗಳಿಸಿ ಇಬ್ಬರು ನೂರ್‌ ಅಹ್ಮದ್‌ಗೆ ವಿಕೆಟ್‌ ಒಪ್ಪಿಸಿ ಹೊರ ನಡೆದರು. ಉಳಿದಂತೆ ಸ್ಯಾಮ್‌ ಕರನ್‌ 5, ಸಿಕಂದರ್‌ ರಾಜಾ 15, ಜಿತೇಶ್‌ ಶರ್ಮಾ 16 ರನ್‌ ಕೆಲಹಾಕಿದರು.

ಒಂದೆಡೆ ವಿಕೆಟ್‌ ಬೀಳುತ್ತಿದ್ದರು ಮತ್ತೊಂದೆಡೆ ನೆಲಕಚ್ಚಿ ಆಟವಾಡಿದ ಶಶಾಂಕ್‌ ಸಿಂಗ್‌ ದಿಟ್ಟ ಹೋರಾಟ ತೋರಿದರು. ಇವರಿಗೆ ಅಶುತೋಷ್‌ ಉತ್ತಮ ಜೊತೆಯಾಟ ನೀಡಿದರು. ಅಶುತೋಷ್ 17 ಎಸೆತ 3 ಬೌಂಡರಿ 1 ಸಿಕ್ಸರ್‌ ಸೇರಿ 31 ರನ್‌ ಬಾರಿಸಿ ನಲ್ಕಂಡೆಗೆ ವಿಕೆಟ್‌ ಒಪ್ಪಿಸಿದರು.

ಆದರೆ ಪಂದ್ಯದುದ್ದಕ್ಕೂ ಉತ್ತಮ ಆಟವಾಡಿದ ಶಶಾಂಕ್‌ ಸಿಂಗ್‌ ತಂಡದ ಗೆಲುವಿಗೆ ಏಕಾಂಗಿ ಹೋರಾಟ ನಡೆಸಿದರು. ಕೇವಲ 29ಎಸೆತ ಎದುರಿಸಿ 6 ಬೌಂಡರಿ 4 ಸಿಕ್ಸರ್‌ ಸಹಿತ 61 ರನ್‌ ಗಳಿಸಿ ತಂಡ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಗುಜರಾತ್‌ ಪರ ನೂರ್‌ ಅಹ್ಮದ್‌ 2, ಓಮರ್ಜಾಯಿ, ಉಮೇಶ್‌ ಯಾದವ್‌, ರಶೀದ್‌ ಖಾನ್‌, ಮೋಹಿತ್‌ ಶರ್ಮಾ ಮತ್ತು ನಲ್ಕಂಡೆ ತಲಾ ಒಂದೊಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

8 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

8 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

9 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

9 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

10 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

11 hours ago